AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಯಾವಿ ಶಕ್ತಿ ಪಡೆದ ಸೂರ್ಯ; ಇದಕ್ಕೆ ಕಾರಣವಾಗಿದ್ದು ಲೋಕೇಶ್ ಕನಗರಾಜ್

ಲೋಕೇಶ್ ಕನಗರಾಜ್ ಅವರ ಡ್ರೀಮ್ ಪ್ರಾಜೆಕ್ಟ್ ಒಂದಿದೆ. ಇದಕ್ಕೆ ‘ಇರುಂಬು ಕೈ ಮಾಯಾವಿ’ ಎಂದು ಶೀರ್ಷಿಕೆ ಇಡಲಾಗಿದೆ. ಕಾಮಿಕ್ ನಾವೆಲ್ ‘ದಿ ಸ್ಟೀಲ್ ಕ್ಲಾನ್’ ಆಧರಿಸಿ ಈ ಸಿನಿಮಾದ ಕಥೆ ಸಿದ್ಧವಾಗಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಸೂರ್ಯ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಮಾಯಾವಿ ಶಕ್ತಿ ಪಡೆದ ಸೂರ್ಯ; ಇದಕ್ಕೆ ಕಾರಣವಾಗಿದ್ದು ಲೋಕೇಶ್ ಕನಗರಾಜ್
ಸೂರ್ಯ-ಲೋಕೇಶ್
ರಾಜೇಶ್ ದುಗ್ಗುಮನೆ
|

Updated on: Sep 05, 2023 | 6:30 AM

Share

ಲೋಕೇಶ್ ಕನಗರಾಜ್ (Lokesh Kanagaraj) ಹಾಗೂ ಸೂರ್ಯ ಕಾಂಬಿನೇಷನ್​ನಲ್ಲಿ ‘ವಿಕ್ರಮ್’ ಸಿನಿಮಾ ಮೂಡಿ ಬಂದಿತ್ತು. ‘ವಿಕ್ರಮ್’ ಸಿನಿಮಾದ (Vikram Movie) ಕ್ಲೈಮ್ಯಾಕ್ಸ್​ನಲ್ಲಿ ಸೂರ್ಯ ಎಂಟ್ರಿ ಆಗುತ್ತದೆ. ಈ ಮೂಲಕ ಮುಂದಿನ ಸಿನಿಮಾದಲ್ಲಿ ಇಬ್ಬರೂ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂಬುದು ಖಚಿತವಾಗಿತ್ತು. ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಇದನ್ನು ಹೊರತುಪಡಿಸಿ ಮತ್ತೊಂದು ಚಿತ್ರದಲ್ಲಿ ಸೂರ್ಯ ಹಾಗೂ ಲೋಕೇಶ್ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸೂಪರ್ ಹೀರೋ ಮಾದರಿಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಲೋಕೇಶ್ ಕನಗರಾಜ್ ಅವರ ಡ್ರೀಮ್ ಪ್ರಾಜೆಕ್ಟ್ ಒಂದಿದೆ. ಇದಕ್ಕೆ ‘ಇರುಂಬು ಕೈ ಮಾಯಾವಿ’ ಎಂದು ಶೀರ್ಷಿಕೆ ಇಡಲಾಗಿದೆ. ಕಾಮಿಕ್ ನಾವೆಲ್ ‘ದಿ ಸ್ಟೀಲ್ ಕ್ಲಾನ್’ ಆಧರಿಸಿ ಈ ಸಿನಿಮಾದ ಕಥೆ ಸಿದ್ಧವಾಗಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಸೂರ್ಯ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಾಲಿವುಡ್​ಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಸೂಪರ್ ಹೀರೋ ಮಾದರಿಯ ಸಿನಿಮಾಗಳು ಬಂದಿದ್ದು ಕಡಿಮೆ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಚಿತ್ರದ ಕಥೆ ಏನು?

ಕಥಾ ನಾಯಕ ಅಪಘಾತಕ್ಕೆ ಒಳಗಾಗುತ್ತಾನೆ. ಈ ವೇಳೆ ಅವನು ಕೈ ಕಳೆದುಕೊಳ್ಳುತ್ತಾನೆ. ಆ ಬಳಿಕ ಆತನಿಗೆ ಕಬ್ಬಿಣದ ಕೈ ಹಾಕಲಾಗುತ್ತದೆ. ಬಳಿಕ ಮತ್ತೊಂದು ಅಪಘಾತಕ್ಕೆ ಒಳಗಾದಾಗ ಮಾಯವಾಗುವ ಶಕ್ತಿ ಪಡೆದುಕೊಳ್ಳುತ್ತಾನೆ. ಆತನ ಕೈ ಮಾತ್ರ ಕಾಣುತ್ತಿರುತ್ತದೆ. ಈ ಶಕ್ತಿ ಬಳಕೆ ಮಾಡಿಕೊಂಡು ಆತ ದೇಶಕ್ಕಾಗಿ ಹೋರಾಡಲು ನಿರ್ಧರಿಸುತ್ತಾನೆ ಮತ್ತು ವೈರಿಗಳನ್ನು ನಾಶ ಮಾಡುತ್ತಾನೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ.

ಇದನ್ನೂ ಓದಿ: Suriya: ಫ್ಯಾಮಿಲಿ ಸಮೇತ ಮುಂಬೈನಲ್ಲಿ ಸೆಟ್ಲ್​ ಆದ ನಟ ಸೂರ್ಯ; ಚೆನ್ನೈ ತೊರೆಯುವಂಥದ್ದು ಏನಾಯ್ತು?

ಕಥೆ ಈಗಾಗಲೇ ರಿವೀಲ್ ಆದರೂ ಇದು ಸಿನಿಮಾ ಬಗ್ಗೆ ಇರುವ ನಿರೀಕ್ಷೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಇದಕ್ಕೆ ಕಾರಣವೂ ಇದೆ. ಈ ರೀತಿಯ ಸಿನಿಮಾಗಳಲ್ಲಿ ಕಥೆಗಿಂತ ಮುಖ್ಯವಾಗಿ ಅದನ್ನು ಯಾವ ರೀತಿಯಲ್ಲಿ ಕಟ್ಟಿಕೊಡಲಾಗಿದೆ ಅನ್ನೋದು ಮುಖ್ಯವಾಗುತ್ತದೆ. ಹೀಗಾಗಿ, ಈ ಚಿತ್ರದ ಬಗ್ಗೆ ಇರುವ ನಿರೀಕ್ಷೆ ಕಡಿಮೆ ಆಗುವಂಥದಲ್ಲ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು