AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಯಾವಿ ಶಕ್ತಿ ಪಡೆದ ಸೂರ್ಯ; ಇದಕ್ಕೆ ಕಾರಣವಾಗಿದ್ದು ಲೋಕೇಶ್ ಕನಗರಾಜ್

ಲೋಕೇಶ್ ಕನಗರಾಜ್ ಅವರ ಡ್ರೀಮ್ ಪ್ರಾಜೆಕ್ಟ್ ಒಂದಿದೆ. ಇದಕ್ಕೆ ‘ಇರುಂಬು ಕೈ ಮಾಯಾವಿ’ ಎಂದು ಶೀರ್ಷಿಕೆ ಇಡಲಾಗಿದೆ. ಕಾಮಿಕ್ ನಾವೆಲ್ ‘ದಿ ಸ್ಟೀಲ್ ಕ್ಲಾನ್’ ಆಧರಿಸಿ ಈ ಸಿನಿಮಾದ ಕಥೆ ಸಿದ್ಧವಾಗಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಸೂರ್ಯ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಮಾಯಾವಿ ಶಕ್ತಿ ಪಡೆದ ಸೂರ್ಯ; ಇದಕ್ಕೆ ಕಾರಣವಾಗಿದ್ದು ಲೋಕೇಶ್ ಕನಗರಾಜ್
ಸೂರ್ಯ-ಲೋಕೇಶ್
ರಾಜೇಶ್ ದುಗ್ಗುಮನೆ
|

Updated on: Sep 05, 2023 | 6:30 AM

Share

ಲೋಕೇಶ್ ಕನಗರಾಜ್ (Lokesh Kanagaraj) ಹಾಗೂ ಸೂರ್ಯ ಕಾಂಬಿನೇಷನ್​ನಲ್ಲಿ ‘ವಿಕ್ರಮ್’ ಸಿನಿಮಾ ಮೂಡಿ ಬಂದಿತ್ತು. ‘ವಿಕ್ರಮ್’ ಸಿನಿಮಾದ (Vikram Movie) ಕ್ಲೈಮ್ಯಾಕ್ಸ್​ನಲ್ಲಿ ಸೂರ್ಯ ಎಂಟ್ರಿ ಆಗುತ್ತದೆ. ಈ ಮೂಲಕ ಮುಂದಿನ ಸಿನಿಮಾದಲ್ಲಿ ಇಬ್ಬರೂ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂಬುದು ಖಚಿತವಾಗಿತ್ತು. ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಇದನ್ನು ಹೊರತುಪಡಿಸಿ ಮತ್ತೊಂದು ಚಿತ್ರದಲ್ಲಿ ಸೂರ್ಯ ಹಾಗೂ ಲೋಕೇಶ್ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸೂಪರ್ ಹೀರೋ ಮಾದರಿಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಲೋಕೇಶ್ ಕನಗರಾಜ್ ಅವರ ಡ್ರೀಮ್ ಪ್ರಾಜೆಕ್ಟ್ ಒಂದಿದೆ. ಇದಕ್ಕೆ ‘ಇರುಂಬು ಕೈ ಮಾಯಾವಿ’ ಎಂದು ಶೀರ್ಷಿಕೆ ಇಡಲಾಗಿದೆ. ಕಾಮಿಕ್ ನಾವೆಲ್ ‘ದಿ ಸ್ಟೀಲ್ ಕ್ಲಾನ್’ ಆಧರಿಸಿ ಈ ಸಿನಿಮಾದ ಕಥೆ ಸಿದ್ಧವಾಗಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಸೂರ್ಯ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಾಲಿವುಡ್​ಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಸೂಪರ್ ಹೀರೋ ಮಾದರಿಯ ಸಿನಿಮಾಗಳು ಬಂದಿದ್ದು ಕಡಿಮೆ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಚಿತ್ರದ ಕಥೆ ಏನು?

ಕಥಾ ನಾಯಕ ಅಪಘಾತಕ್ಕೆ ಒಳಗಾಗುತ್ತಾನೆ. ಈ ವೇಳೆ ಅವನು ಕೈ ಕಳೆದುಕೊಳ್ಳುತ್ತಾನೆ. ಆ ಬಳಿಕ ಆತನಿಗೆ ಕಬ್ಬಿಣದ ಕೈ ಹಾಕಲಾಗುತ್ತದೆ. ಬಳಿಕ ಮತ್ತೊಂದು ಅಪಘಾತಕ್ಕೆ ಒಳಗಾದಾಗ ಮಾಯವಾಗುವ ಶಕ್ತಿ ಪಡೆದುಕೊಳ್ಳುತ್ತಾನೆ. ಆತನ ಕೈ ಮಾತ್ರ ಕಾಣುತ್ತಿರುತ್ತದೆ. ಈ ಶಕ್ತಿ ಬಳಕೆ ಮಾಡಿಕೊಂಡು ಆತ ದೇಶಕ್ಕಾಗಿ ಹೋರಾಡಲು ನಿರ್ಧರಿಸುತ್ತಾನೆ ಮತ್ತು ವೈರಿಗಳನ್ನು ನಾಶ ಮಾಡುತ್ತಾನೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ.

ಇದನ್ನೂ ಓದಿ: Suriya: ಫ್ಯಾಮಿಲಿ ಸಮೇತ ಮುಂಬೈನಲ್ಲಿ ಸೆಟ್ಲ್​ ಆದ ನಟ ಸೂರ್ಯ; ಚೆನ್ನೈ ತೊರೆಯುವಂಥದ್ದು ಏನಾಯ್ತು?

ಕಥೆ ಈಗಾಗಲೇ ರಿವೀಲ್ ಆದರೂ ಇದು ಸಿನಿಮಾ ಬಗ್ಗೆ ಇರುವ ನಿರೀಕ್ಷೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಇದಕ್ಕೆ ಕಾರಣವೂ ಇದೆ. ಈ ರೀತಿಯ ಸಿನಿಮಾಗಳಲ್ಲಿ ಕಥೆಗಿಂತ ಮುಖ್ಯವಾಗಿ ಅದನ್ನು ಯಾವ ರೀತಿಯಲ್ಲಿ ಕಟ್ಟಿಕೊಡಲಾಗಿದೆ ಅನ್ನೋದು ಮುಖ್ಯವಾಗುತ್ತದೆ. ಹೀಗಾಗಿ, ಈ ಚಿತ್ರದ ಬಗ್ಗೆ ಇರುವ ನಿರೀಕ್ಷೆ ಕಡಿಮೆ ಆಗುವಂಥದಲ್ಲ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ