AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಯಾವಿ ಶಕ್ತಿ ಪಡೆದ ಸೂರ್ಯ; ಇದಕ್ಕೆ ಕಾರಣವಾಗಿದ್ದು ಲೋಕೇಶ್ ಕನಗರಾಜ್

ಲೋಕೇಶ್ ಕನಗರಾಜ್ ಅವರ ಡ್ರೀಮ್ ಪ್ರಾಜೆಕ್ಟ್ ಒಂದಿದೆ. ಇದಕ್ಕೆ ‘ಇರುಂಬು ಕೈ ಮಾಯಾವಿ’ ಎಂದು ಶೀರ್ಷಿಕೆ ಇಡಲಾಗಿದೆ. ಕಾಮಿಕ್ ನಾವೆಲ್ ‘ದಿ ಸ್ಟೀಲ್ ಕ್ಲಾನ್’ ಆಧರಿಸಿ ಈ ಸಿನಿಮಾದ ಕಥೆ ಸಿದ್ಧವಾಗಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಸೂರ್ಯ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಮಾಯಾವಿ ಶಕ್ತಿ ಪಡೆದ ಸೂರ್ಯ; ಇದಕ್ಕೆ ಕಾರಣವಾಗಿದ್ದು ಲೋಕೇಶ್ ಕನಗರಾಜ್
ಸೂರ್ಯ-ಲೋಕೇಶ್
ರಾಜೇಶ್ ದುಗ್ಗುಮನೆ
|

Updated on: Sep 05, 2023 | 6:30 AM

Share

ಲೋಕೇಶ್ ಕನಗರಾಜ್ (Lokesh Kanagaraj) ಹಾಗೂ ಸೂರ್ಯ ಕಾಂಬಿನೇಷನ್​ನಲ್ಲಿ ‘ವಿಕ್ರಮ್’ ಸಿನಿಮಾ ಮೂಡಿ ಬಂದಿತ್ತು. ‘ವಿಕ್ರಮ್’ ಸಿನಿಮಾದ (Vikram Movie) ಕ್ಲೈಮ್ಯಾಕ್ಸ್​ನಲ್ಲಿ ಸೂರ್ಯ ಎಂಟ್ರಿ ಆಗುತ್ತದೆ. ಈ ಮೂಲಕ ಮುಂದಿನ ಸಿನಿಮಾದಲ್ಲಿ ಇಬ್ಬರೂ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂಬುದು ಖಚಿತವಾಗಿತ್ತು. ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಇದನ್ನು ಹೊರತುಪಡಿಸಿ ಮತ್ತೊಂದು ಚಿತ್ರದಲ್ಲಿ ಸೂರ್ಯ ಹಾಗೂ ಲೋಕೇಶ್ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸೂಪರ್ ಹೀರೋ ಮಾದರಿಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಲೋಕೇಶ್ ಕನಗರಾಜ್ ಅವರ ಡ್ರೀಮ್ ಪ್ರಾಜೆಕ್ಟ್ ಒಂದಿದೆ. ಇದಕ್ಕೆ ‘ಇರುಂಬು ಕೈ ಮಾಯಾವಿ’ ಎಂದು ಶೀರ್ಷಿಕೆ ಇಡಲಾಗಿದೆ. ಕಾಮಿಕ್ ನಾವೆಲ್ ‘ದಿ ಸ್ಟೀಲ್ ಕ್ಲಾನ್’ ಆಧರಿಸಿ ಈ ಸಿನಿಮಾದ ಕಥೆ ಸಿದ್ಧವಾಗಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಸೂರ್ಯ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಾಲಿವುಡ್​ಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಸೂಪರ್ ಹೀರೋ ಮಾದರಿಯ ಸಿನಿಮಾಗಳು ಬಂದಿದ್ದು ಕಡಿಮೆ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಚಿತ್ರದ ಕಥೆ ಏನು?

ಕಥಾ ನಾಯಕ ಅಪಘಾತಕ್ಕೆ ಒಳಗಾಗುತ್ತಾನೆ. ಈ ವೇಳೆ ಅವನು ಕೈ ಕಳೆದುಕೊಳ್ಳುತ್ತಾನೆ. ಆ ಬಳಿಕ ಆತನಿಗೆ ಕಬ್ಬಿಣದ ಕೈ ಹಾಕಲಾಗುತ್ತದೆ. ಬಳಿಕ ಮತ್ತೊಂದು ಅಪಘಾತಕ್ಕೆ ಒಳಗಾದಾಗ ಮಾಯವಾಗುವ ಶಕ್ತಿ ಪಡೆದುಕೊಳ್ಳುತ್ತಾನೆ. ಆತನ ಕೈ ಮಾತ್ರ ಕಾಣುತ್ತಿರುತ್ತದೆ. ಈ ಶಕ್ತಿ ಬಳಕೆ ಮಾಡಿಕೊಂಡು ಆತ ದೇಶಕ್ಕಾಗಿ ಹೋರಾಡಲು ನಿರ್ಧರಿಸುತ್ತಾನೆ ಮತ್ತು ವೈರಿಗಳನ್ನು ನಾಶ ಮಾಡುತ್ತಾನೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ.

ಇದನ್ನೂ ಓದಿ: Suriya: ಫ್ಯಾಮಿಲಿ ಸಮೇತ ಮುಂಬೈನಲ್ಲಿ ಸೆಟ್ಲ್​ ಆದ ನಟ ಸೂರ್ಯ; ಚೆನ್ನೈ ತೊರೆಯುವಂಥದ್ದು ಏನಾಯ್ತು?

ಕಥೆ ಈಗಾಗಲೇ ರಿವೀಲ್ ಆದರೂ ಇದು ಸಿನಿಮಾ ಬಗ್ಗೆ ಇರುವ ನಿರೀಕ್ಷೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಇದಕ್ಕೆ ಕಾರಣವೂ ಇದೆ. ಈ ರೀತಿಯ ಸಿನಿಮಾಗಳಲ್ಲಿ ಕಥೆಗಿಂತ ಮುಖ್ಯವಾಗಿ ಅದನ್ನು ಯಾವ ರೀತಿಯಲ್ಲಿ ಕಟ್ಟಿಕೊಡಲಾಗಿದೆ ಅನ್ನೋದು ಮುಖ್ಯವಾಗುತ್ತದೆ. ಹೀಗಾಗಿ, ಈ ಚಿತ್ರದ ಬಗ್ಗೆ ಇರುವ ನಿರೀಕ್ಷೆ ಕಡಿಮೆ ಆಗುವಂಥದಲ್ಲ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್