AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಯಾವಿ ಶಕ್ತಿ ಪಡೆದ ಸೂರ್ಯ; ಇದಕ್ಕೆ ಕಾರಣವಾಗಿದ್ದು ಲೋಕೇಶ್ ಕನಗರಾಜ್

ಲೋಕೇಶ್ ಕನಗರಾಜ್ ಅವರ ಡ್ರೀಮ್ ಪ್ರಾಜೆಕ್ಟ್ ಒಂದಿದೆ. ಇದಕ್ಕೆ ‘ಇರುಂಬು ಕೈ ಮಾಯಾವಿ’ ಎಂದು ಶೀರ್ಷಿಕೆ ಇಡಲಾಗಿದೆ. ಕಾಮಿಕ್ ನಾವೆಲ್ ‘ದಿ ಸ್ಟೀಲ್ ಕ್ಲಾನ್’ ಆಧರಿಸಿ ಈ ಸಿನಿಮಾದ ಕಥೆ ಸಿದ್ಧವಾಗಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಸೂರ್ಯ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ.

ಮಾಯಾವಿ ಶಕ್ತಿ ಪಡೆದ ಸೂರ್ಯ; ಇದಕ್ಕೆ ಕಾರಣವಾಗಿದ್ದು ಲೋಕೇಶ್ ಕನಗರಾಜ್
ಸೂರ್ಯ-ಲೋಕೇಶ್
ರಾಜೇಶ್ ದುಗ್ಗುಮನೆ
|

Updated on: Sep 05, 2023 | 6:30 AM

Share

ಲೋಕೇಶ್ ಕನಗರಾಜ್ (Lokesh Kanagaraj) ಹಾಗೂ ಸೂರ್ಯ ಕಾಂಬಿನೇಷನ್​ನಲ್ಲಿ ‘ವಿಕ್ರಮ್’ ಸಿನಿಮಾ ಮೂಡಿ ಬಂದಿತ್ತು. ‘ವಿಕ್ರಮ್’ ಸಿನಿಮಾದ (Vikram Movie) ಕ್ಲೈಮ್ಯಾಕ್ಸ್​ನಲ್ಲಿ ಸೂರ್ಯ ಎಂಟ್ರಿ ಆಗುತ್ತದೆ. ಈ ಮೂಲಕ ಮುಂದಿನ ಸಿನಿಮಾದಲ್ಲಿ ಇಬ್ಬರೂ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎಂಬುದು ಖಚಿತವಾಗಿತ್ತು. ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಫೈನಲ್ ಆಗಿಲ್ಲ. ಇದನ್ನು ಹೊರತುಪಡಿಸಿ ಮತ್ತೊಂದು ಚಿತ್ರದಲ್ಲಿ ಸೂರ್ಯ ಹಾಗೂ ಲೋಕೇಶ್ ಒಟ್ಟಾಗಿ ಕೆಲಸ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಸೂಪರ್ ಹೀರೋ ಮಾದರಿಯಲ್ಲಿ ಸಿನಿಮಾ ಮೂಡಿಬರುತ್ತಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಲೋಕೇಶ್ ಕನಗರಾಜ್ ಅವರ ಡ್ರೀಮ್ ಪ್ರಾಜೆಕ್ಟ್ ಒಂದಿದೆ. ಇದಕ್ಕೆ ‘ಇರುಂಬು ಕೈ ಮಾಯಾವಿ’ ಎಂದು ಶೀರ್ಷಿಕೆ ಇಡಲಾಗಿದೆ. ಕಾಮಿಕ್ ನಾವೆಲ್ ‘ದಿ ಸ್ಟೀಲ್ ಕ್ಲಾನ್’ ಆಧರಿಸಿ ಈ ಸಿನಿಮಾದ ಕಥೆ ಸಿದ್ಧವಾಗಿದೆ ಎನ್ನಲಾಗಿದೆ. ಈ ಚಿತ್ರದಲ್ಲಿ ಸೂರ್ಯ ನಾಯಕನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹಾಲಿವುಡ್​ಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಸೂಪರ್ ಹೀರೋ ಮಾದರಿಯ ಸಿನಿಮಾಗಳು ಬಂದಿದ್ದು ಕಡಿಮೆ. ಈ ಕಾರಣದಿಂದಲೂ ಸಿನಿಮಾ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಚಿತ್ರದ ಕಥೆ ಏನು?

ಕಥಾ ನಾಯಕ ಅಪಘಾತಕ್ಕೆ ಒಳಗಾಗುತ್ತಾನೆ. ಈ ವೇಳೆ ಅವನು ಕೈ ಕಳೆದುಕೊಳ್ಳುತ್ತಾನೆ. ಆ ಬಳಿಕ ಆತನಿಗೆ ಕಬ್ಬಿಣದ ಕೈ ಹಾಕಲಾಗುತ್ತದೆ. ಬಳಿಕ ಮತ್ತೊಂದು ಅಪಘಾತಕ್ಕೆ ಒಳಗಾದಾಗ ಮಾಯವಾಗುವ ಶಕ್ತಿ ಪಡೆದುಕೊಳ್ಳುತ್ತಾನೆ. ಆತನ ಕೈ ಮಾತ್ರ ಕಾಣುತ್ತಿರುತ್ತದೆ. ಈ ಶಕ್ತಿ ಬಳಕೆ ಮಾಡಿಕೊಂಡು ಆತ ದೇಶಕ್ಕಾಗಿ ಹೋರಾಡಲು ನಿರ್ಧರಿಸುತ್ತಾನೆ ಮತ್ತು ವೈರಿಗಳನ್ನು ನಾಶ ಮಾಡುತ್ತಾನೆ. ಈ ರೀತಿಯಲ್ಲಿ ಕಥೆ ಸಾಗುತ್ತದೆ.

ಇದನ್ನೂ ಓದಿ: Suriya: ಫ್ಯಾಮಿಲಿ ಸಮೇತ ಮುಂಬೈನಲ್ಲಿ ಸೆಟ್ಲ್​ ಆದ ನಟ ಸೂರ್ಯ; ಚೆನ್ನೈ ತೊರೆಯುವಂಥದ್ದು ಏನಾಯ್ತು?

ಕಥೆ ಈಗಾಗಲೇ ರಿವೀಲ್ ಆದರೂ ಇದು ಸಿನಿಮಾ ಬಗ್ಗೆ ಇರುವ ನಿರೀಕ್ಷೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ. ಇದಕ್ಕೆ ಕಾರಣವೂ ಇದೆ. ಈ ರೀತಿಯ ಸಿನಿಮಾಗಳಲ್ಲಿ ಕಥೆಗಿಂತ ಮುಖ್ಯವಾಗಿ ಅದನ್ನು ಯಾವ ರೀತಿಯಲ್ಲಿ ಕಟ್ಟಿಕೊಡಲಾಗಿದೆ ಅನ್ನೋದು ಮುಖ್ಯವಾಗುತ್ತದೆ. ಹೀಗಾಗಿ, ಈ ಚಿತ್ರದ ಬಗ್ಗೆ ಇರುವ ನಿರೀಕ್ಷೆ ಕಡಿಮೆ ಆಗುವಂಥದಲ್ಲ. ಈ ಬಗ್ಗೆ ಅಧಿಕೃತ ಘೋಷಣೆ ಇನ್ನಷ್ಟೇ ಆಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್