AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಬ್ರೇಕ್​ ಕೊಟ್ಟಿತು ಆ ಒಂದು ವಿಚಾರ

ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಅಕ್ಕಿನೇನಿ ಸರ್​ನೇಮ್​ಅನ್ನು ಸಮಂತಾ ತೆಗೆದು ಹಾಕಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಅವರ ಸಂಸಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವ ವದಂತಿ ಜೋರಾಗಿತ್ತು.

ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಬ್ರೇಕ್​ ಕೊಟ್ಟಿತು ಆ ಒಂದು ವಿಚಾರ
ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಬ್ರೇಕ್​ ಕೊಟ್ಟಿತು ಆ ಒಂದು ವಿಚಾರ
TV9 Web
| Edited By: |

Updated on: Sep 25, 2021 | 5:03 PM

Share

ನಾಗ ಚೈತನ್ಯ ಹಾಗೂ ಸಮಂತಾ ಅಕ್ಕಿನೇನಿ ನಡುವೆ ಯಾವುದೂ ಸರಿ ಇಲ್ಲ, ಅವರು ವಿಚ್ಛೇದನ ಪಡೆಯಲಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಇತ್ತೀಚೆಗೆ ಜೋರಾಗಿ ಹಬ್ಬಿತ್ತು. ಇದಕ್ಕೆ ಬ್ರೇಕ್​ ಹಾಕುವುದಕ್ಕೆ ಅವರ ಕುಟುಂಬದವರು ಸಾಕಷ್ಟು ಪ್ರಯತ್ನಪಟ್ಟಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಿರುವಾಗಲೇ ಒಂದು ವಿಚಾರ ಎಲ್ಲ ಕಡೆಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈ ವಿಷಯದಿಂದ ವಿಚ್ಛೇದನ ವಿಚಾರ ಹಿನ್ನೆಲೆಗೆ ಸರಿದಿದೆ. ಅಷ್ಟಕ್ಕೂ ಏನದು ವಿಚಾರ? ‘ಲವ್​ ಸ್ಟೋರಿ’ ಸಿನಿಮಾ ಕಲೆಕ್ಷನ್​.

ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಅಕ್ಕಿನೇನಿ ಸರ್​ನೇಮ್​ಅನ್ನು ಸಮಂತಾ ತೆಗೆದು ಹಾಕಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಅವರ ಸಂಸಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವ ವದಂತಿ ಜೋರಾಗಿತ್ತು. ಇದಾದ ನಂತರದಲ್ಲಿ ಸಾಕಷ್ಟು ಸುದ್ದಿಗಳು ಹುಟ್ಟಿಕೊಂಡಿವೆ. ಆ ಬಗ್ಗೆ ಯಾವುದನ್ನು ನಂಬಬೇಕು, ಯಾವುದನ್ನು ಬಿಡಬೇಕು ಎನ್ನುವ ಬಗ್ಗೆ ಅಭಿಮಾನಿಗಳು ಇನ್ನೂ ಗೊಂದಲದಲ್ಲಿದ್ದಾರೆ. ಈಗ ಈ ಬಗೆಗಿನ ಸುದ್ದಿಗಳು ಏಕಾಏಕಿ ಕಡಿಮೆ ಆಗಿವೆ.

ಸೆಪ್ಟೆಂಬರ್ 24ರಂದು ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ ರಿಲೀಸ್​ ಆಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಸಿನಿಮಾ ತಜ್ಞರ ಪ್ರಕಾರ ಮೊದಲ ದಿನ ಈ ಸಿನಿಮಾ ಬರೋಬ್ಬರಿ 9.6 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಕೊವಿಡ್​ ಎರಡನೇ ಅಲೆ ನಂತರದಲ್ಲಿ ಸಿನಿಮಾ ಒಂದು ಇಷ್ಟು ದೊಡ್ಡ ಕಲೆಕ್ಷನ್​ ಮಾಡಿದ್ದು ಇದೇ ಮೊದಲು.

ಇಂದು (ಸೆಪ್ಟೆಂಬರ್​ 25) ಶನಿವಾರ. ನಾಳೆ (ಸೆಪ್ಟೆಂಬರ್​ 26) ಭಾನುವಾರ. ವೀಕೆಂಡ್​ ಸಂದರ್ಭದಲ್ಲಿ ಸಿನಿಮಾಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆ ಇದೆ. ಹೀಗಾಗಿ, ಶನಿವಾರ ಮತ್ತು ಭಾನುವಾರ ಸಿನಿಮಾದ ಕಲೆಕ್ಷನ್ ಹೆಚ್ಚುವ ಸಾಧ್ಯತೆ ಇದೆ. ಈ ಎಲ್ಲಾ ಸುದ್ದಿಗಳಿಂದಾಗಿ ವಿಚ್ಛೇದನ ಸುದ್ದಿ ಕೊಂಚ ಮೂಲೆಗುಂಪಾಗಿದೆ. ಇನ್ನು, ‘ಲವ್​ ಸ್ಟೋರಿ’ ಸಿನಿಮಾ ಕಲೆಕ್ಷನ್​ ಉತ್ತಮವಾಗಿದ್ದರಿಂದ ಮುಂದಿನ ದಿನಗಳಲ್ಲಿ ದೊಡ್ಡ ಬಜೆಟ್​ ಸಿನಿಮಾಗಳ ರಿಲೀಸ್​ಗೆ ಹೆಚ್ಚು ಸಹಕಾರಿಯಾಗಿದೆ.

ಇದನ್ನೂ ಓದಿ: ಡಿವೋರ್ಸ್​ ಪಡೆದರೆ ಸಮಂತಾಗೆ ಸಿಗುವ ಹಣ ಎಷ್ಟು? ಅಕ್ಕಿನೇನಿ ಸೊಸೆಯ ಬಹುಕೋಟಿ ಕಹಾನಿ

Samantha Akkineni: ಕೋರ್ಟ್​ ಮೆಟ್ಟಿಲೇರಲು ಮುಂದಾದ ಸಮಂತಾ ಅಕ್ಕಿನೇನಿ; ಕಾರಣವೇನು?

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು