AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಬ್ರೇಕ್​ ಕೊಟ್ಟಿತು ಆ ಒಂದು ವಿಚಾರ

ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಅಕ್ಕಿನೇನಿ ಸರ್​ನೇಮ್​ಅನ್ನು ಸಮಂತಾ ತೆಗೆದು ಹಾಕಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಅವರ ಸಂಸಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವ ವದಂತಿ ಜೋರಾಗಿತ್ತು.

ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಬ್ರೇಕ್​ ಕೊಟ್ಟಿತು ಆ ಒಂದು ವಿಚಾರ
ಸಮಂತಾ-ನಾಗ ಚೈತನ್ಯ ವಿಚ್ಛೇದನ ವದಂತಿಗೆ ಬ್ರೇಕ್​ ಕೊಟ್ಟಿತು ಆ ಒಂದು ವಿಚಾರ
TV9 Web
| Edited By: |

Updated on: Sep 25, 2021 | 5:03 PM

Share

ನಾಗ ಚೈತನ್ಯ ಹಾಗೂ ಸಮಂತಾ ಅಕ್ಕಿನೇನಿ ನಡುವೆ ಯಾವುದೂ ಸರಿ ಇಲ್ಲ, ಅವರು ವಿಚ್ಛೇದನ ಪಡೆಯಲಿದ್ದಾರೆ ಎಂಬಿತ್ಯಾದಿ ಸುದ್ದಿಗಳು ಇತ್ತೀಚೆಗೆ ಜೋರಾಗಿ ಹಬ್ಬಿತ್ತು. ಇದಕ್ಕೆ ಬ್ರೇಕ್​ ಹಾಕುವುದಕ್ಕೆ ಅವರ ಕುಟುಂಬದವರು ಸಾಕಷ್ಟು ಪ್ರಯತ್ನಪಟ್ಟಿದ್ದಾರೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಹೀಗಿರುವಾಗಲೇ ಒಂದು ವಿಚಾರ ಎಲ್ಲ ಕಡೆಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಈ ವಿಷಯದಿಂದ ವಿಚ್ಛೇದನ ವಿಚಾರ ಹಿನ್ನೆಲೆಗೆ ಸರಿದಿದೆ. ಅಷ್ಟಕ್ಕೂ ಏನದು ವಿಚಾರ? ‘ಲವ್​ ಸ್ಟೋರಿ’ ಸಿನಿಮಾ ಕಲೆಕ್ಷನ್​.

ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಅಕ್ಕಿನೇನಿ ಸರ್​ನೇಮ್​ಅನ್ನು ಸಮಂತಾ ತೆಗೆದು ಹಾಕಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು. ಅವರ ಸಂಸಾರದಲ್ಲಿ ಯಾವುದೂ ಸರಿ ಇಲ್ಲ ಎನ್ನುವ ವದಂತಿ ಜೋರಾಗಿತ್ತು. ಇದಾದ ನಂತರದಲ್ಲಿ ಸಾಕಷ್ಟು ಸುದ್ದಿಗಳು ಹುಟ್ಟಿಕೊಂಡಿವೆ. ಆ ಬಗ್ಗೆ ಯಾವುದನ್ನು ನಂಬಬೇಕು, ಯಾವುದನ್ನು ಬಿಡಬೇಕು ಎನ್ನುವ ಬಗ್ಗೆ ಅಭಿಮಾನಿಗಳು ಇನ್ನೂ ಗೊಂದಲದಲ್ಲಿದ್ದಾರೆ. ಈಗ ಈ ಬಗೆಗಿನ ಸುದ್ದಿಗಳು ಏಕಾಏಕಿ ಕಡಿಮೆ ಆಗಿವೆ.

ಸೆಪ್ಟೆಂಬರ್ 24ರಂದು ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ನಟನೆಯ ‘ಲವ್​ ಸ್ಟೋರಿ’ ಸಿನಿಮಾ ತೆರೆಗೆ ಬಂದಿತ್ತು. ಈ ಚಿತ್ರ ರಿಲೀಸ್​ ಆಗಿ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದೆ. ಸಿನಿಮಾ ತಜ್ಞರ ಪ್ರಕಾರ ಮೊದಲ ದಿನ ಈ ಸಿನಿಮಾ ಬರೋಬ್ಬರಿ 9.6 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಕೊವಿಡ್​ ಎರಡನೇ ಅಲೆ ನಂತರದಲ್ಲಿ ಸಿನಿಮಾ ಒಂದು ಇಷ್ಟು ದೊಡ್ಡ ಕಲೆಕ್ಷನ್​ ಮಾಡಿದ್ದು ಇದೇ ಮೊದಲು.

ಇಂದು (ಸೆಪ್ಟೆಂಬರ್​ 25) ಶನಿವಾರ. ನಾಳೆ (ಸೆಪ್ಟೆಂಬರ್​ 26) ಭಾನುವಾರ. ವೀಕೆಂಡ್​ ಸಂದರ್ಭದಲ್ಲಿ ಸಿನಿಮಾಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಬರುವ ಸಾಧ್ಯತೆ ಇದೆ. ಹೀಗಾಗಿ, ಶನಿವಾರ ಮತ್ತು ಭಾನುವಾರ ಸಿನಿಮಾದ ಕಲೆಕ್ಷನ್ ಹೆಚ್ಚುವ ಸಾಧ್ಯತೆ ಇದೆ. ಈ ಎಲ್ಲಾ ಸುದ್ದಿಗಳಿಂದಾಗಿ ವಿಚ್ಛೇದನ ಸುದ್ದಿ ಕೊಂಚ ಮೂಲೆಗುಂಪಾಗಿದೆ. ಇನ್ನು, ‘ಲವ್​ ಸ್ಟೋರಿ’ ಸಿನಿಮಾ ಕಲೆಕ್ಷನ್​ ಉತ್ತಮವಾಗಿದ್ದರಿಂದ ಮುಂದಿನ ದಿನಗಳಲ್ಲಿ ದೊಡ್ಡ ಬಜೆಟ್​ ಸಿನಿಮಾಗಳ ರಿಲೀಸ್​ಗೆ ಹೆಚ್ಚು ಸಹಕಾರಿಯಾಗಿದೆ.

ಇದನ್ನೂ ಓದಿ: ಡಿವೋರ್ಸ್​ ಪಡೆದರೆ ಸಮಂತಾಗೆ ಸಿಗುವ ಹಣ ಎಷ್ಟು? ಅಕ್ಕಿನೇನಿ ಸೊಸೆಯ ಬಹುಕೋಟಿ ಕಹಾನಿ

Samantha Akkineni: ಕೋರ್ಟ್​ ಮೆಟ್ಟಿಲೇರಲು ಮುಂದಾದ ಸಮಂತಾ ಅಕ್ಕಿನೇನಿ; ಕಾರಣವೇನು?

Follow Us
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು