AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಕರಣ್ ಜೋಹರ್ ಹಾಗೂ ನಟ ಕಾರ್ತಿಕ್​ ಆರ್ಯನ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದು ಮಿತಿಮೀರಿದ್ದು, ಇನ್ನೆಂದಿಗೂ ನಮ್ಮ ಪ್ರೊಡಕ್ಷನ್​​ನಲ್ಲಿ ಸ್ಥಾನವಿಲ್ಲ ಎನ್ನುವ ಖಡಕ್ ಸಂದೇಶವನ್ನು ಕರಣ್ ರವಾನಿಸಿದ್ದರು.

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​
ಕರಣ್​ ಜೋಹರ್
ರಾಜೇಶ್ ದುಗ್ಗುಮನೆ
|

Updated on: Apr 24, 2021 | 8:56 PM

Share

ಬಾಲಿವುಡ್​ನ ಹೆಸರಾಂತ ನಿರ್ಮಾಪಕರ ಸಾಲಿನಲ್ಲಿ ಕರಣ್​ ಜೋಹರ್​ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಸ್ಟಾರ್​ ನಟರ ಮಕ್ಕಳ ಸಿನಿಮಾಗಳಿಗೆ ಮೊದಲ ಆದ್ಯತೆ ನೀಡುವ ಸಂಪ್ರದಾಯವನ್ನು ಅವರು ಈ ಮೊದಲಿನಿಂದಲೂ ನಡೆಸಿಕೊಂಡೇ ಬಂದಿದ್ದಾರೆ. ಇತ್ತೀಚೆಗೆ, ಕಾರ್ತಿಕ್​ ಆರ್ಯನ್​ ಅವರ ಜತೆ ಮುಂದೆಂದಿಗೂ ಕೆಲಸ ಮಾಡುವುದಿಲ್ಲ ಎಂದು ಕರಣ್​ ಒಡೆತನದ ಧರ್ಮ ಪ್ರೊಡಕ್ಷನ್​ ಘೋಷಣೆ ಮಾಡಿದೆ ಎನ್ನುವ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ಕರಣ್​​ಗೆ ಶಾಕ್​ ಒಂದು ಎದುರಾಗಿದೆ.

2020ರ ಅಕ್ಟೋಬರ್​ ಸಮಯ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್​ ಬಾಲಿವುಡ್​ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿತ್ತು. ಕರಣ್​ ಅವರ ಧರ್ಮ ಪ್ರೊಡಕ್ಷನ್​ ಸಹಯೋಗದೊಂದಿಗೆ ಲೈಕಾ ಬಾಲಿವುಡ್​ಗೆ ಎಂಟ್ರಿ ಕೊಡುವುದರಲ್ಲಿತ್ತು.

ಈ ಮೊದಲು ಧರ್ಮ ಪ್ರೊಡಕ್ಷನ್​ ಫೋಕ್ಸ್​​ ಸ್ಟಾರ್​ ಸ್ಟುಡಿಯೋ ಜತೆ ಸಹಯೋಗ ಹೊಂದಿತ್ತು. ಆದರೆ, ಯಾವಾಗ ಫಾಕ್ಸ್​​ ಸ್ಟಾರ್​ ಸ್ಟುಡಿಯೋವನ್ನು ವಾಲ್ಟ್​​ ಡಿಸ್ನಿ ಖರೀದಿ ಮಾಡಿತ್ತೋ ಆಗ ಕರಣ್​ ಸ್ಟುಡಿಯೋ ಪಾರ್ಟ್ನರ್​ ಹುಡುಕೋಕೆ ಆರಂಭಿಸಿದ್ದರು. ಈ ವೇಳೆ ಸಹಯೋಗಕ್ಕೆ ಮುಂದಾಗಿದ್ದು ಲೈಕಾ.

ಎಲ್ಲವೂ ಅಂತಿಮ ಆಗುವ ಹಂತದಲ್ಲಿತ್ತು. ಆದರೆ, ಕೊನೆಯ ಹಂತದಲ್ಲಿ ಈ ಒಪ್ಪಂದ ಮುರಿದು ಬಿದ್ದಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರೆ, ಭವಿಷ್ಯದಲ್ಲಿ ಈ ಡೀಲ್​ ಆಗುವುದೇ ಇಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಕರಣ್​ ನಿರ್ಮಾಣದ ಸಾಕಷ್ಟು ಸಿನಿಮಾಗಳು ಶೂಟಿಂಗ್​ ಹಂತದಲ್ಲಿವೆ. ಶೇರ್​ಶಾ, ದೋಸ್ತಾನಾ 2, ಜುಗ್​ ಜುಗ್​ ಜೀಯೋ, ಲೈಗರ್​ ಸೇರಿ ಸಾಕಷ್ಟು ಸಿನಿಮಾಗಳಿಗೆ ಧರ್ಮಾ ಪ್ರೊಡಕ್ಷನ್​ ಬಂಡವಾಳ ಹೂಡುತ್ತಿದೆ. ಇದಕ್ಕೆ ಸ್ಟುಡಿಯೋ ಒಂದರ ಬೆಂಬಲ ಬೇಕೆಬೇಕು. ಹೀಗಾಗಿ, ಧರ್ಮ ಪ್ರೊಡಕ್ಷನ್​ ಯಾರ ಜತೆ ಒಪ್ಪಂದ ಮಾಡಿಕೊಳ್ಳಲಿದೆ ಎಂಬುದು ಸದ್ಯದ ಕುತೂಹಲ.

ಕರಣ್ ಜೋಹರ್ ಹಾಗೂ ನಟ ಕಾರ್ತಿಕ್​ ಆರ್ಯನ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದು ಮಿತಿಮೀರಿದ್ದು, ಇನ್ನೆಂದಿಗೂ ನಮ್ಮ ಪ್ರೊಡಕ್ಷನ್​​ನಲ್ಲಿ ಸ್ಥಾನವಿಲ್ಲ ಎನ್ನುವ ಖಡಕ್ ಸಂದೇಶವನ್ನು ಕರಣ್ ರವಾನಿಸಿದ್ದರು. ದೋಸ್ತಾನಾ 2 ಸಿನಿಮಾದಲ್ಲಿ ಕಾರ್ತಿಕ್​ ನಟಿಸಬೇಕಿತ್ತು.

ಇದನ್ನೂ ಓದಿ: ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

ನಮ್ಮ ಪ್ರೊಡಕ್ಷನ್​ ಹೌಸ್​​ನಲ್ಲಿ ನಿನಗೆ ಅವಕಾಶ ಇಲ್ಲ; ಸ್ಟಾರ್​ ನಟನನ್ನೇ ಹೊರ ದಬ್ಬಿದ ಕರಣ್​ ಜೋಹರ್

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ