AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​

ಕರಣ್ ಜೋಹರ್ ಹಾಗೂ ನಟ ಕಾರ್ತಿಕ್​ ಆರ್ಯನ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದು ಮಿತಿಮೀರಿದ್ದು, ಇನ್ನೆಂದಿಗೂ ನಮ್ಮ ಪ್ರೊಡಕ್ಷನ್​​ನಲ್ಲಿ ಸ್ಥಾನವಿಲ್ಲ ಎನ್ನುವ ಖಡಕ್ ಸಂದೇಶವನ್ನು ಕರಣ್ ರವಾನಿಸಿದ್ದರು.

ಕಾರ್ತಿಕ್​ ಆರ್ಯನ್​ಗೆ ಗೇಟ್​ ಪಾಸ್​ ಕೊಟ್ಟ ಬೆನ್ನಲ್ಲೇ ಕರಣ್​​ ಜೋಹರ್​ಗೆ ಬಿಗ್​ ಶಾಕ್​
ಕರಣ್​ ಜೋಹರ್
ರಾಜೇಶ್ ದುಗ್ಗುಮನೆ
|

Updated on: Apr 24, 2021 | 8:56 PM

Share

ಬಾಲಿವುಡ್​ನ ಹೆಸರಾಂತ ನಿರ್ಮಾಪಕರ ಸಾಲಿನಲ್ಲಿ ಕರಣ್​ ಜೋಹರ್​ ಮುಂಚೂಣಿಯಲ್ಲಿ ನಿಲ್ಲುತ್ತಾರೆ. ಸ್ಟಾರ್​ ನಟರ ಮಕ್ಕಳ ಸಿನಿಮಾಗಳಿಗೆ ಮೊದಲ ಆದ್ಯತೆ ನೀಡುವ ಸಂಪ್ರದಾಯವನ್ನು ಅವರು ಈ ಮೊದಲಿನಿಂದಲೂ ನಡೆಸಿಕೊಂಡೇ ಬಂದಿದ್ದಾರೆ. ಇತ್ತೀಚೆಗೆ, ಕಾರ್ತಿಕ್​ ಆರ್ಯನ್​ ಅವರ ಜತೆ ಮುಂದೆಂದಿಗೂ ಕೆಲಸ ಮಾಡುವುದಿಲ್ಲ ಎಂದು ಕರಣ್​ ಒಡೆತನದ ಧರ್ಮ ಪ್ರೊಡಕ್ಷನ್​ ಘೋಷಣೆ ಮಾಡಿದೆ ಎನ್ನುವ ಸುದ್ದಿ ಹಬ್ಬಿತ್ತು. ಈ ಬೆನ್ನಲ್ಲೇ ಕರಣ್​​ಗೆ ಶಾಕ್​ ಒಂದು ಎದುರಾಗಿದೆ.

2020ರ ಅಕ್ಟೋಬರ್​ ಸಮಯ. ದಕ್ಷಿಣ ಭಾರತದ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್​ ಬಾಲಿವುಡ್​ನಲ್ಲಿ ಸಿನಿಮಾ ನಿರ್ಮಾಣ ಮಾಡಲು ಮುಂದಾಗಿತ್ತು. ಕರಣ್​ ಅವರ ಧರ್ಮ ಪ್ರೊಡಕ್ಷನ್​ ಸಹಯೋಗದೊಂದಿಗೆ ಲೈಕಾ ಬಾಲಿವುಡ್​ಗೆ ಎಂಟ್ರಿ ಕೊಡುವುದರಲ್ಲಿತ್ತು.

ಈ ಮೊದಲು ಧರ್ಮ ಪ್ರೊಡಕ್ಷನ್​ ಫೋಕ್ಸ್​​ ಸ್ಟಾರ್​ ಸ್ಟುಡಿಯೋ ಜತೆ ಸಹಯೋಗ ಹೊಂದಿತ್ತು. ಆದರೆ, ಯಾವಾಗ ಫಾಕ್ಸ್​​ ಸ್ಟಾರ್​ ಸ್ಟುಡಿಯೋವನ್ನು ವಾಲ್ಟ್​​ ಡಿಸ್ನಿ ಖರೀದಿ ಮಾಡಿತ್ತೋ ಆಗ ಕರಣ್​ ಸ್ಟುಡಿಯೋ ಪಾರ್ಟ್ನರ್​ ಹುಡುಕೋಕೆ ಆರಂಭಿಸಿದ್ದರು. ಈ ವೇಳೆ ಸಹಯೋಗಕ್ಕೆ ಮುಂದಾಗಿದ್ದು ಲೈಕಾ.

ಎಲ್ಲವೂ ಅಂತಿಮ ಆಗುವ ಹಂತದಲ್ಲಿತ್ತು. ಆದರೆ, ಕೊನೆಯ ಹಂತದಲ್ಲಿ ಈ ಒಪ್ಪಂದ ಮುರಿದು ಬಿದ್ದಿದೆ. ಇದಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ. ಆದರೆ, ಭವಿಷ್ಯದಲ್ಲಿ ಈ ಡೀಲ್​ ಆಗುವುದೇ ಇಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.

ಕರಣ್​ ನಿರ್ಮಾಣದ ಸಾಕಷ್ಟು ಸಿನಿಮಾಗಳು ಶೂಟಿಂಗ್​ ಹಂತದಲ್ಲಿವೆ. ಶೇರ್​ಶಾ, ದೋಸ್ತಾನಾ 2, ಜುಗ್​ ಜುಗ್​ ಜೀಯೋ, ಲೈಗರ್​ ಸೇರಿ ಸಾಕಷ್ಟು ಸಿನಿಮಾಗಳಿಗೆ ಧರ್ಮಾ ಪ್ರೊಡಕ್ಷನ್​ ಬಂಡವಾಳ ಹೂಡುತ್ತಿದೆ. ಇದಕ್ಕೆ ಸ್ಟುಡಿಯೋ ಒಂದರ ಬೆಂಬಲ ಬೇಕೆಬೇಕು. ಹೀಗಾಗಿ, ಧರ್ಮ ಪ್ರೊಡಕ್ಷನ್​ ಯಾರ ಜತೆ ಒಪ್ಪಂದ ಮಾಡಿಕೊಳ್ಳಲಿದೆ ಎಂಬುದು ಸದ್ಯದ ಕುತೂಹಲ.

ಕರಣ್ ಜೋಹರ್ ಹಾಗೂ ನಟ ಕಾರ್ತಿಕ್​ ಆರ್ಯನ್​ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದು ಮಿತಿಮೀರಿದ್ದು, ಇನ್ನೆಂದಿಗೂ ನಮ್ಮ ಪ್ರೊಡಕ್ಷನ್​​ನಲ್ಲಿ ಸ್ಥಾನವಿಲ್ಲ ಎನ್ನುವ ಖಡಕ್ ಸಂದೇಶವನ್ನು ಕರಣ್ ರವಾನಿಸಿದ್ದರು. ದೋಸ್ತಾನಾ 2 ಸಿನಿಮಾದಲ್ಲಿ ಕಾರ್ತಿಕ್​ ನಟಿಸಬೇಕಿತ್ತು.

ಇದನ್ನೂ ಓದಿ: ಸುಶಾಂತ್ ರೀತಿ ಕಾರ್ತಿಕ್ ಆರ್ಯನ್​ಗೂ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸಬೇಡಿ; ಕರಣ್​​​ಗೆ ಕಂಗನಾ ಛೀಮಾರಿ

ನಮ್ಮ ಪ್ರೊಡಕ್ಷನ್​ ಹೌಸ್​​ನಲ್ಲಿ ನಿನಗೆ ಅವಕಾಶ ಇಲ್ಲ; ಸ್ಟಾರ್​ ನಟನನ್ನೇ ಹೊರ ದಬ್ಬಿದ ಕರಣ್​ ಜೋಹರ್

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು