‘ವೆಟ್ಟೈಯಾನ್’ ಹೆಸರು ವಿವಾದ: ಸ್ಪಷ್ಟನೆ ಕೊಟ್ಟ ಚಿತ್ರತಂಡ

ರಜನೀಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಇಂದು (ಅಕ್ಟೋಬರ್ 10) ಬಿಡುಗಡೆ ಆಗಿದೆ. ಸಿನಿಮಾದ ಹೆಸರಿನ ಬಗ್ಗೆ ಆಂಧ್ರ ಹಾಗೂ ತೆಲಂಗಾಣದಲ್ಲಿ ವಿವಾದ ಎದ್ದಿತ್ತು, ಇದೀಗ ಸಿನಿಮಾದ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹೇಳಿಕೆ ಬಿಡುಗಡೆ ಆಗಿದೆ.

‘ವೆಟ್ಟೈಯಾನ್’ ಹೆಸರು ವಿವಾದ: ಸ್ಪಷ್ಟನೆ ಕೊಟ್ಟ ಚಿತ್ರತಂಡ
Follow us
|

Updated on: Oct 10, 2024 | 12:59 PM

ರಜನೀಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಇಂದು (ಅಕ್ಟೋಬರ್ 10) ಬಿಡುಗಡೆ ಆಗಿದೆ. ಈ ತಮಿಳು ಸಿನಿಮಾ ತೆಲುಗು, ಮಲಯಾಳಂ, ಕನ್ನಡ ಭಾಷೆಗಳಲ್ಲಿಯೂ ಬಿಡುಗಡೆ ಆಗುತ್ತಿದೆ. ಆದರೆ ಎಲ್ಲ ಭಾಷೆಗಳಲ್ಲಿಯೂ ಈ ಸಿನಿಮಾದ ಹೆಸರು ‘ವೆಟ್ಟೆಯಾನ್’ ಎಂದೇ ಇದೆ. ಈ ಬಗ್ಗೆ ತೆಲುಗು ಚಿತ್ರರಂಗದ ನಿರ್ದೇಶಕರೊಬ್ಬರು ಅಸಮಾಧಾನ ಹೊರಹಾಕಿದ್ದರು. ಸಿನಿಮಾವನ್ನು ಅದರ ಮೂಲ ತಮಿಳು ಹೆಸರಿನಲ್ಲಿಯೇ ಬಿಡುಗಡೆ ಮಾಡಲಾಗುತ್ತಿದೆ. ಅದರ ಬದಲಿಗೆ ತೆಲುಗಿನ ಹೆಸರು ‘ವೇಟಗಾಡು’ ಎಂದು ಇಡಬಹುದಾಗಿತ್ತು’ ಎಂದಿದ್ದರು. ಇದು ವೈರಲ್ ಆಗಿತ್ತು.

ಇದೀಗ ಈ ಬಗ್ಗೆ ಸಿನಿಮಾದ ನಿರ್ಮಾಣ ಸಂಸ್ಥೆ ಲೈಕಾ ಹೇಳಿಕೆ ಬಿಡುಗಡೆ ಮಾಡಿದ್ದು, ‘ಲೈಕಾ ಸಂಸ್ಥೆ ವರ್ಷಗಳಿಂದಲೂ ಹಲವು ತೆಲುಗು ಚಿತ್ರರಂಗದ ಪ್ರತಿಭಾವಂತರೊಟ್ಟಿಗೆ ಕೆಲಸ ಮಾಡುತ್ತಾ ಬಂದಿದೆ. ಮಾತ್ರವಲ್ಲದೆ ‘ಆರ್​ಆರ್​ಆರ್’, ‘ಸೀತಾರಾಮಂ’ ಇನ್ನೂ ಹಲವು ಅತ್ಯುತ್ತಮ ತೆಲುಗು ಸಿನಿಮಾಗಳನ್ನು ತಮಿಳುನಾಡಿನಲ್ಲಿ ವಿತರಣೆ ಸಹ ಮಾಡಿದೆ. ಇದೀಗ ನಾವು ರಜನೀಕಾಂತ್, ಅಮಿತಾಬ್ ಬಚ್ಚನ್, ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್ ಇನ್ನಿತರರು ನಟಿಸಿರುವ ‘ವೆಟ್ಟೈಯಾನ್’ ಸಿನಿಮಾ ನಿರ್ಮಾಣ ಮಾಡಿ, ಅದನ್ನು ತೆಲುಗು ಸೇರಿದಂತೆ ಇತರೆ ಭಾಷೆಗಳಿಗೆ ಡಬ್ ಮಾಡಿ ಬಿಡುಗಡೆ ಮಾಡಿದ್ದೇವೆ’ ಎಂದಿದೆ.

ಮುಂದುವರೆದು, ‘ನಾವು ಮೊದಲಿಗೆ ಸಿನಿಮಾಕ್ಕೆ ಯಾವ ಭಾಷೆಗಳಲ್ಲಿ ಬಿಡುಗಡೆ ಆಗಲಿದೆಯೋ ಅದೇ ಭಾಷೆಯ ಹೆಸರಿಡಲು ಯೋಜಿಸಿದ್ದೆವು. ‘ವೆಟ್ಟೈಯಾನ್’ ಸಿನಿಮಾ ತೆಲುಗಿನಲ್ಲಿ ‘ವೇಟಗಾಡು’ ಎಂದು ಹೆಸರಿಡುವ ಉದ್ದೇಶ ಇತ್ತು. ಹೆಸರು ರಿಜಿಸ್ಟರ್ ಮಾಡಿಸುವ ಪ್ರಯತ್ನವನ್ನೂ ಸಹ ಮಾಡಿದೆವು. ಆದರೆ ಆ ಟೈಟಲ್ ನಮಗೆ ಸಿಗಲಿಲ್ಲ. ಸಿನಿಮಾಕ್ಕೆ ಸೂಕ್ತ ಹೆಸರು ಅದಾಗಿತ್ತು, ಅದು ಸಿಗದ ಕಾರಣ ಬೇರೆ ಹೆಸರಿಡುವುದು ಸೂಕ್ತವಲ್ಲ ಎನಿಸಿ ಮೂಲ ಹೆಸರಿನಲ್ಲಿಯೇ ಎಲ್ಲ ಭಾಷೆಗಳಲ್ಲಿಯೂ ಬಿಡುಗಡೆ ಮಾಡಿದ್ದೇವೆ’ ಎಂದಿದೆ.

ಇದನ್ನೂ ಓದಿ:ರಜನೀಕಾಂತ್ ಜೊತೆ ಸಮಂತಾ ಹೋಲಿಕೆ, ಖ್ಯಾತ ನಿರ್ದೇಶಕ ಕೊಟ್ಟ ಕಾರಣವೇನು?

‘ನಮ್ಮ ಸಿನಿಮಾ ಅಕ್ಟೋಬರ್ 10 ರಂದು ಬಿಡುಗಡೆ ಆಗಿದ್ದು, ತೆಲುಗು ಪ್ರೇಕ್ಷಕರು ಸದಾ ಒಳ್ಳೆಯ ಸಿನಿಮಾಕ್ಕೆ ಅದರಲ್ಲೂ ಕೌಟುಂಬಿಕ ಸಿನಿಮಾಕ್ಕೆ ಮೊದಲಿನಿಂದಲೂ ಬೆಂಬಲ ನೀಡುತ್ತಲೇ ಬಂದಿದ್ದು, ಈ ಸಿನಿಮಾಕ್ಕೂ ಬೆಂಬಲ ನೀಡಬೇಕೆಂದು ಮನವಿ ಮಾಡುತ್ತಿದ್ದೇವೆ. ತೆಲುಗಿನಲ್ಲಿ ಬಿಡುಗಡೆ ಆಗುವ ಸಿನಿಮಾಗಳಿಗೆ ತೆಲುಗು ಹೆಸರುಗಳನ್ನೇ ಇಡಬೇಕೆನ್ನುವ ನಿಮ್ಮ ನ್ಯಾಯಯುತ ಮನವಿಯನ್ನು ನಾವು ಪುರಸ್ಕರಿಸಿದ್ದೇವೆ. ಮುಂದಿನ ದಿನಗಳಲ್ಲಿ ನಾವು ಬದಲಾವಣೆ ಮಾಡುತ್ತೇವೆ’ ಎಂದಿದ್ದಾರೆ.

ರಜನೀಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್, ಫಹಾದ್ ಫಾಸಿಲ್, ರಾಣಾ ದಗ್ಗುಬಾಟಿ ಇನ್ನೂ ಕೆಲವು ಜನಪ್ರಿಯ ನಟರು ನಟಿಸಿದ್ದಾರೆ. ಸಿನಿಮಾವು ಪೊಲೀಸ್ ವ್ಯವಸ್ಥೆ ಹಾಗೂ ನ್ಯಾಯಾಂಗ ವ್ಯವಸ್ಥೆ ನಡುವಿನ ತಿಕ್ಕಾಟದ ಬಗೆಗಿನ ಕತೆ ಒಳಗೊಂಡಿದೆ. ಸಿನಿಮಾವನ್ನು ಟಿಜೆ ಜ್ಞಾನವೇಲು ನಿರ್ದೇಶನ ಮಾಡಿದ್ದಾರೆ. ಸಿನಿಮಾದ ಬಗ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಜಗಳೂರು ವಿಧಾನಸಭಾ ಕ್ಷೇತ್ರದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭ!
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಭಾರತ ರತ್ನ ರತನ್ ಟಾಟಾ ನಿಧನಕ್ಕೆ ಮುಂಬೈನಲ್ಲಿ ಪ್ರಕೃತಿಯಿಂದಲೂ ಶೋಕಾಚರಣೆ
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್​ಗೆ ಪ್ರೇಕ್ಷಕರು ನಿಬ್ಬೆರಗು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ಹರಿವ ನೀರಲ್ಲಿ ಕಾರುಗಳನ್ನು ಮುಂದಕ್ಕೆ ಓಡಿಸಲು ಚಾಲಕರ ಪಡಿಪಾಟಲು
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ