Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ಪಾತ್ರಕ್ಕೆ ಪ್ರಾಮುಖ್ಯತೆ ಏಕೆ’: ‘ಕಲ್ಕಿ 2898 ಎಡಿ’ ಕತೆ ಬಗ್ಗೆ ಆಕ್ರೋಶ

Kalki 2898 AD: ಪ್ರಭಾಸ್ ನಟನೆಯ ಕಲ್ಕಿ 2898 ಎಡಿ ಸಿನಿಮಾ ಕಳೆದ ವರ್ಷ ಬಿಡುಗಡೆ ಆಗಿ ಬಾಕ್ಸ್ ಆಫೀಸ್​ನಲ್ಲಿ ದಾಖಲೆಗಳನ್ನು ಬರೆಯಿತು. ಇದೀಗ ಜಪಾನ್​ನಲ್ಲಿ ಬಿಡುಗಡೆ ಆಗಿ ಅಲ್ಲಿಯೂ ಒಳ್ಳೆಯ ಕಲೆಕ್ಷನ್ ಮಾಡುತ್ತಿದೆ. ಆದರೆ ತೆಲುಗು ಚಿತ್ರರಂಗದಲ್ಲಿ ಎರಡು ದಶಕದಿಂದ ಕೆಲಸ ಮಾಡುತ್ತಿರುವ ಜನಪ್ರಿಯ ವ್ಯಕ್ತಿಯೊಬ್ಬರು ‘ಕಲ್ಕಿ’ ಸಿನಿಮಾದ ಕತೆಯನ್ನು ಬಹುವಾಗಿ ಟೀಕಿಸಿದ್ದಾರೆ.

‘ಆ ಪಾತ್ರಕ್ಕೆ ಪ್ರಾಮುಖ್ಯತೆ ಏಕೆ’: ‘ಕಲ್ಕಿ 2898 ಎಡಿ’ ಕತೆ ಬಗ್ಗೆ ಆಕ್ರೋಶ
Kalki 2898 Ad
Follow us
ಮಂಜುನಾಥ ಸಿ.
|

Updated on: Jan 07, 2025 | 11:18 AM

ಕಳೆದ ವರ್ಷ ಜೂನ್ ತಿಂಗಳಲ್ಲಿ ಬಿಡುಗಡೆ ಆಗಿದ್ದ ‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರ ಎಬ್ಬಿಸಿತ್ತು. ಭವಿಷ್ಯದಲ್ಲಿ ನಡೆಯುವ ಕತೆಯನ್ನು ತಂತ್ರಜ್ಞಾನ ಬಳಸಿ ಅದ್ಭುತವಾಗಿ ಚಿತ್ರೀಕರಿಸಲಾಗಿತ್ತು. ಸಿನಿಮಾದಲ್ಲಿ ಮಹಾಭಾರತದ ಕತೆಯ ಎಳೆಯನ್ನು ಸಹ ಸೇರಿಸಲಾಗಿತ್ತು. ಸಿನಿಮಾದ ಕ್ಲೈಮ್ಯಾಕ್ಸ್​ ಅಂತೂ ಪ್ರೇಕ್ಷಕರಿಗೆ ಬಹಳ ಇಷ್ಟವಾಗಿತ್ತು. ಸಿನಿಮಾದಲ್ಲಿ ಪ್ರಭಾಸ್ ಕರ್ಣನ ಪಾತ್ರದಲ್ಲಿ ಹಾಗೂ ಅಮಿತಾಬ್ ಬಚ್ಚನ್ ಅಶ್ವತ್ಥಾಮನ ಪಾತ್ರದಲ್ಲಿ ನಟಿಸಿದ್ದರು. ಆದರೆ ಇದೀಗ ತೆಲುಗು ಚಿತ್ರರಂಗದ ಜನಪ್ರಿಯ ವ್ಯಕ್ತಿಯೊಬ್ಬರು ‘ಕಲ್ಕಿ 2898 ಎಡಿ’ ಸಿನಿಮಾವನ್ನು, ಅದರ ಕತೆಯನ್ನು ಕಟು ಮಾತುಗಳಲ್ಲಿ ಟೀಕಿಸಿದ್ದಾರೆ.

2005 ರಿಂದಲೂ ತೆಲುಗು ಚಿತ್ರರಂಗದಲ್ಲಿ ಗೀತ ಸಾಹಿತಿಯಾಗಿ, ಚಿತ್ರಕತೆ ಬರಹಗಾರನಾಗಿ ಕೆಲಸ ಮಾಡುತ್ತಿರುವ ಅನಂತ ಶ್ರೀರಾಮ್, ‘ಕಲ್ಕಿ 2898 ಎಡಿ’ ಸಿನಿಮಾದ ಕತೆಯನ್ನು ಬಹಿರಂಗ ಸಭೆಯಲ್ಲಿ ಟೀಕೆ ಮಾಡಿದ್ದಾರೆ. ಕೃಷ್ಣ ಜಿಲ್ಲೆಯಲ್ಲಿ ನಡೆದ ಬೃಹತ್ ಹಿಂದೂ ಸಮಾವೇಷದಲ್ಲಿ ಭಾಗವಹಿಸಿ ಮಾತನಾಡಿದ ಅನಂತ್ ಶ್ರೀರಾಮ್, ‘ತೆಲುಗು ಚಿತ್ರರಂಗದಲ್ಲಿ ದಶಕಗಳಿಂದಲೂ ಕರ್ಣನನ್ನು ಹೀರೋ ಆಗಿ ತೋರಿಸುತ್ತಿರುವುದು ನಡೆಯುತ್ತಲೇ ಬಂದಿದೆ. ದಶಕಗಳಿಂದ ಆರಂಭಿಸಿ ನಿಮ್ಮೆ-ಮೊನ್ನೆ ತೆರೆಗೆ ಬಂದ ‘ಕಲ್ಕಿ’ ಸಿನಿಮಾದ ವರೆಗೆ ಕರ್ಣನನ್ನು ಅನವಷ್ಯಕವಾಗಿ ಮಹಾನ್ ಎಂದು ಬಿಂಬಿಸಲಾಗಿದೆ’ ಎಂದಿದ್ದಾರೆ.

‘ಅನವಶ್ಯಕವಾಗಿ ಕರ್ಣನನ್ನು ಹೀರೋ ಮಾಡಲು ಮುಂದಾಗಿರುವ ತೆಲುಗು ಚಿತ್ರರಂಗದ ಬಗ್ಗೆ ನನಗೆ ಬೇಸರ ಇದೆ, ಅವರ ಈ ಕಾರ್ಯದ ಬಗ್ಗೆ ಚಿತ್ರರಂಗಕ್ಕೆ ಸೇರಿದ ವ್ಯಕ್ತಿಯಾಗಿ ನನಗೆ ನಾಚಿಕೆ ಇದೆ. ಆಗಿನ ನಿರ್ದೇಶಕರು ಮತ್ತು ಈಗಿನ ನಿರ್ದೇಶಕರೂ ಸಹ ಕರ್ಣನನ್ನು ಸುಖಾ ಸುಮ್ಮನೆ ಹೀರೋ ಮಾಡುತ್ತಿದ್ದಾರೆ. ತಪ್ಪನ್ನು ತಪ್ಪು ಎಂದು ಹೇಳದಿದ್ದರೆ ನಾವು ಹಿಂದೂ ಧರ್ಮವನ್ನು ಆಚರಿಸದಂತೆ ಅಲ್ಲ. ಕರ್ಣನನ್ನು ಅರ್ಜುನನಿಗಿಂತಲೂ ಶ್ರೇಷ್ಠ ಎಂದು ಬಿಂಬಿಸುವುದನ್ನು ನಾವು ವಿರೋಧಿಸಬೇಕಿದೆ ’ ಎಂದು ಅನಂತ್ ಶ್ರೀರಾಮ್ ಹೇಳಿದ್ದಾರೆ.

ಇದನ್ನೂ ಓದಿ:‘ಕಲ್ಕಿ 2898 ಎಡಿ’ ಚಿತ್ರಕ್ಕಾಗಿ ಜಪಾನಿ ಭಾಷೆಯಲ್ಲಿ ಮಾತನಾಡಿ ಪ್ರಭಾಸ್

ಅದೇ ಭಾಷಣದಲ್ಲಿ ಮಾತನಾಡುತ್ತಾ, ತಾವು ವಿಷ್ಣುವಿನ ಕುರಿತಾಗಿ ಸಿನಿಮಾ ಒಂದರಲ್ಲಿ ‘ಬ್ರಹ್ಮಾಂಡ ನಾಯಕುಡು’ (ಬ್ರಹ್ಮಾಂಡ ನಾಯಕ) ಎಂದು ಬರೆದಿದ್ದೆ, ಆದರೆ ಆ ಸಿನಿಮಾದ ನಿರ್ಮಾಪಕ ಅದನ್ನು ತೆಗೆದು ಹಾಕುವಂತೆ ಹೇಳಿದ, ಇದೇ ಕಾರಣಕ್ಕೆ ನಾನು ಆ ಸಿನಿಮಾದಲ್ಲಿ ಕೆಲಸ ಮಾಡುವುದನ್ನು ಕೈ ಬಿಟ್ಟೆ’ ಎಂದು ಅನಂತ್ ಶ್ರೀರಾಮ್ ಹೇಳಿಕೊಂಡಿದ್ದಾರೆ.

‘ಕಲ್ಕಿ 2898 ಎಡಿ’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಕರ್ಣನ ಪಾತ್ರಧಾರಿಯಾಗಿ ಪ್ರಭಾಸ್ ಎಂಟ್ರಿ ಆಗುತ್ತದೆ. ಆಗ ಕರ್ಣನ ಪಾತ್ರವನ್ನು ವೈಭವೀಕರಿಸಿ ತೋರಿಸಲಾಗಿದೆ. ಅದೇ ಸೀನ್​ನಲ್ಲಿ ಅರ್ಜುನನ್ನು ಕರ್ಣನಿಗಿಂತಲೂ ಕಡಿಮೆ ಶೂರ, ಕರ್ಣನಿಗಿಂತಲೂ ಕಡಿಮೆ ಸಾಮರ್ಥ್ಯ ಇರುವ ವ್ಯಕ್ತಿ ಎಂದು ಪರೋಕ್ಷವಾಗಿ ಬಿಂಬಿಸಲಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್‌ಎಸ್‌ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ