AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್

ತೆಲುಗು ಸಿನಿಮಾ 'ಮಾ ಇಂಟಿ ಬಂಗಾರಂ' ಬಾಕ್ಸ್ ಆಫೀಸ್‌ನಲ್ಲಿ ಭಾರಿ ಯಶಸ್ಸು ಗಳಿಸಿದೆ. ಇದರ ಸೀಕ್ವೆಲ್ ಸಿದ್ಧತೆ ನಡೆಯುತ್ತಿದ್ದು, ನಂದಿನಿ ರೆಡ್ಡಿ ನಿರ್ದೇಶನದ ಈ ಚಿತ್ರಕ್ಕೆ ರಾಜಾ ನಿಡಿಮೋರು ಕಥೆ ಹೆಣೆಯಲಿದ್ದಾರೆ. ನಟಿ ಸಮಂತಾ ಗರ್ಭಿಣಿಯಾಗಿರುವ ಕಾರಣ ಎರಡು ವರ್ಷಗಳ ನಂತರ ಕೆಲಸಗಳು ಆರಂಭವಾಗಲಿವೆ. ಈಗಾಗಲೇ ಚಿತ್ರವು ಜಗತ್ತಿನಾದ್ಯಂತ 65 ಕೋಟಿಗೂ ಹೆಚ್ಚು ಗಳಿಕೆ ಕಂಡಿದೆ.

ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್
ಸಮಂತಾ
ರಾಜೇಶ್ ದುಗ್ಗುಮನೆ
|

Updated on: Jun 27, 2026 | 8:52 AM

Share

ಮುಖ್ಯಾಂಶಗಳು

  • ಮಾ ಇಂಟಿ ಬಂಗಾರಂ ಯಶಸ್ಸಿನ ಬಳಿಕ ಬರ್ತಿದೆ ಸೀಕ್ವೆಲ್
  • ಸೀಕ್ವೆಲ್ ಸವಾಲುಗಳಿಗೆ ರಾಜ್ ನಿಡಿಮೋರು ಮಾಸ್ಟರ್‌ಪ್ಲಾನ್
  • ಮಗು ಜನಿಸಿದ ಬಳಿಕ ಮತ್ತೆ ಮರಳಲಿದ್ದಾರೆ ಸಮಂತಾ

ತೆಲುಗು ಚಿತ್ರರಂಗದಲ್ಲಿ ‘ಮಾ ಇಂಟಿ ಬಂಗಾರಂ’ ಸಿನಿಮಾ ಸದ್ಯ ಸೂಪರ್ ಹಿಟ್ ಆಗಿದೆ. ನಂದಿನಿ ರೆಡ್ಡಿ ನಿರ್ದೇಶನದ ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಮಾಯಿ ಮಾಡುತ್ತಿದೆ. ಈ ಸಿನಿಮಾ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಲಾಭ ತಂದುಕೊಟ್ಟ ಚಿತ್ರಗಳಲ್ಲಿ ಒಂದಾಗಿದೆ. ಸಾಮಾನ್ಯವಾಗಿ ಒಂದು ಸಿನಿಮಾ ಹಿಟ್ ಆದರೆ ಸೀಕ್ವೆಲ್ ಮಾಡುವುದು ಸಿನಿಮಾ ಇಂಡಸ್ಟ್ರಿಯ ಹಳೇ ಟೆಕ್ನಿಕ್ ಆಗಿದೆ. ನಟಿ ಸಮಂತಾ (Samantha) ನಟನೆಯ ಈ ಚಿತ್ರ ಕೂಡ ಭಾರಿ ಲಾಭದಲ್ಲಿ ಇರುವುದರಿಂದ ಚಿತ್ರತಂಡ ಈಗ ಇದೇ ಟೆಕ್ನಿಕ್ ಬಳಸಲು ಮುಂದಾಗಿದೆ. ಸಮಂತಾ ಪತಿ ರಾಜ್ ನಿಡಿಮೋರು ಈ ರೀತಿಯ ಸುಳಿವು ನೀಡಿದ್ದಾರೆ.

ಸೀಕ್ವೆಲ್ ಮಾಡಲು ಒಂದು ಒಳ್ಳೆ ಕಥೆಯ ಲೈನ್ ಸಿಕ್ಕಿದೆ ಎಂದು ರಾಜ್ ಖಚಿತಪಡಿಸಿದ್ದಾರೆ. ಇನ್ನು ಎರಡು ವರ್ಷಗಳ ನಂತರ ಈ ಸಿನಿಮಾದ ಕೆಲಸಗಳು ಆರಂಭವಾಗಲಿವೆ. ಮೊದಲ ಭಾಗದಲ್ಲಿದ್ದ ಪಾತ್ರವರ್ಗ ಸೀಕ್ವೆಲ್​​ನಲ್ಲೂ ಮುಂದುವರಿಯಲಿದೆ. ಇದು ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ಮೊದಲ ಭಾಗದ ಕಥೆಗೆ ಚಿತ್ರತಂಡ ಈಗಾಗಲೇ ಒಂದು ಉತ್ತಮ ಅಂತ್ಯವನ್ನು ನೀಡಿದೆ. ಚಿತ್ರದ ವಿಲನ್ ಕೂಡ ಸತ್ತಿದ್ದಾನೆ. ಹೀಗಾಗಿ ಸಮಂತಾ ಕುಟುಂಬಕ್ಕೆ ಸದ್ಯಕ್ಕೆ ಯಾವುದೇ ಅಪಾಯವಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮತ್ತೊಬ್ಬ ವಿಲನ್ ಎಂಟ್ರಿ ಕೊಟ್ಟರೆ ಕಥೆ ಸಪ್ಪೆಯಾಗುವ ಭೀತಿ ಇರುತ್ತದೆ. ಒಂದು ವೇಳೆ ಕಥೆ ವರ್ಕೌಟ್ ಆಗದಿದ್ದರೆ ಮೊದಲ ಭಾಗದ ಯಶಸ್ಸಿಗೂ ಧಕ್ಕೆ ಬರಬಹುದು. ಆದರೆ ರಾಜ್ ನಿಡಿಮೋರು ಅವರು ಸೀಕ್ವೆಲ್ ಮಾಡುವುದರಲ್ಲಿ ಎಕ್ಸ್‌ಪರ್ಟ್ ಆಗಿದ್ದಾರೆ. ಹೀಗಾಗಿ ಅವರು ಮೊದಲ ಭಾಗಕ್ಕಿಂತಲೂ ಉತ್ತಮವಾದ ಕಥೆಯೊಂದನ್ನು ತರಲಿದ್ದಾರೆ ಎಂಬ ಭರವಸೆ ಅಭಿಮಾನಿಗಳಲ್ಲಿದೆ.

ನಟಿ ಸಮಂತಾ ಸದ್ಯ ಗರ್ಭಿಣಿಯಾಗಿದ್ದಾರೆ. ಈ ಕಾರಣಕ್ಕೆ ಅವರು ತಮ್ಮ ಕೆಲಸಗಳಿಂದ ಸಣ್ಣ ವಿರಾಮ ತೆಗೆದುಕೊಂಡಿದ್ದಾರೆ. ಅವರ ಎಲ್ಲಾ ಶೂಟಿಂಗ್ ಕೆಲಸಗಳು ಸದ್ಯಕ್ಕೆ ಸ್ಥಗಿತಗೊಂಡಿವೆ. ಸಮಂತಾ ಅವರು ಇನ್ನೊಂದು ವರ್ಷದ ನಂತರ ಮತ್ತೆ ಬಣ್ಣದ ಪ್ರಪಂಚಕ್ಕೆ ಮರಳಲಿದ್ದಾರೆ. ಆ ಸಮಯದೊಳಗೆ ರಾಜ್ ನಿಡಿಮೋರು ಅವರು ಚಿತ್ರಕಥೆಯ ಕೆಲಸಗಳನ್ನು ಮುಗಿಸಿಕೊಳ್ಳಲಿದ್ದಾರೆ. ನಂತರ ಸಿನಿಮಾದ ಪ್ರಿ-ಪ್ರೊಡಕ್ಷನ್ ಕೆಲಸಗಳು ಆರಂಭವಾಗಲಿವೆ. ಈ ಚಿತ್ರದಲ್ಲಿ ಗುಲ್ಶನ್ ದೇವಯ್ಯ, ಶ್ರೀಮುಖಿ, ದಿಗಂತ್, ಮಂಜು, ಗೌತಮಿ ಸೇರಿದಂತೆ ಹಲವರು ನಟಿಸಿದ್ದಾರೆ.

ಇದನ್ನೂ ಓದಿ: ಸಮಂತಾ ಸಿನಿಮಾಕ್ಕೆ ನಿರ್ಮಾಪಕರೇ ಇರಲಿಲ್ಲ, ಈಗ ಕೋಟಿಗಳಲ್ಲಿ ಗಳಿಕೆ

ಇನ್ನು ಚಿತ್ರದ ಕಲೆಕ್ಷನ್ ವಿಚಾರಕ್ಕೆ ಬಂದರೆ 8ನೇ ದಿನ ಈ ಸಿನಿಮಾ ಬರೋಬ್ಬರಿ 3,074 ಶೋಗಳಿಂದ 4.65 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಮಾಡಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ಗ್ರಾಸ್ ಕಲೆಕ್ಷನ್ 46.83 ಕೋಟಿ ರೂಪಾಯಿ ದಾಟಿದೆ. ಭಾರತದಲ್ಲಿ ಚಿತ್ರದ ಒಟ್ಟು ನೆಟ್ ಕಲೆಕ್ಷನ್ ಸದ್ಯಕ್ಕೆ 40.50 ಕೋಟಿ ರೂಪಾಯಿ ಆಗಿದೆ. ವಿದೇಶದಲ್ಲೂ ಈ ಚಿತ್ರ 8ನೇ ದಿನಕ್ಕೆ 0.35 ಕೋಟಿ ರೂಪಾಯಿ ಗಳಿಸಿದೆ. ಇದರೊಂದಿಗೆ ವಿದೇಶದ ಒಟ್ಟು ಗ್ರಾಸ್ ಕಲೆಕ್ಷನ್ 18.30 ಕೋಟಿ ರೂಪಾಯಿ ತಲುಪಿದೆ. ಇವೆಲ್ಲವನ್ನೂ ಸೇರಿಸಿ ‘ಮಾ ಇಂಟಿ ಬಂಗಾರಂ’ ಚಿತ್ರದ ವಿಶ್ವಾದ್ಯಂತ ಒಟ್ಟು ಗಳಿಕೆ 65.13 ಕೋಟಿ ರೂಪಾಯಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಈ ರಾಶಿಯವರಿಗೆ ಇಂದು ಅದೃಷ್ಟ ಕೂಡಿ ಬರಲಿದೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಚಿಕ್ಕಬಳ್ಳಾಪುರ: ಅನ್ನಭಾಗ್ಯ ಯೋಜನೆಯ ಗೋಧಿ ಅಕ್ರಮ ಸಾಗಾಟ, 14 ಟನ್ ವಶಕ್ಕೆ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಮೈಸೂರು ರಸ್ತೆ To ಮಾಗಡಿ ರಸ್ತೆ ಕೇವಲ 15 ನಿಮಿಷ: ಹೇಗಿದೆ ನೋಡಿ ಕೃಷ್ಣ ಪಥ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
ಒಂದೇ ದಿನ 15 ಲಕ್ಷ ಸಸಿನೆಟ್ಟು ಗಿನ್ನಿಸ್​​ ದಾಖಲೆ ಬರೆಯಲು ಮುಂದಾದ ಬಿಡಿಎ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
‘ಮೀಸಲಾತಿ ನಂಬಿದ್ರೆ ಶಾಸಕನೇ ಆಗ್ತಿರಲಿಲ್ಲ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
5 ಜನ ಜಲಸಮಾಧಿ:ಕಾವೇರಿ ನದಿ ದಡದಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸೂಚನೆ
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಅಡ್ಡಮತದಾನ ಮಾಡಿದ್ರಾ?
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹರಿದುಬಂದ ಪ್ರವಾಸಿಗರ ದಂಡು, ಭಕ್ತ ಸಾಗರ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಮಳೆಯಿಲ್ಲದೇ ಬರಿದಾಯ್ತು ಭೀಮಾ ನದಿ: ಜಾನುವಾರುಗಳಿಗೂ ಕುಡಿಯಲು ನೀರಿಲ್ಲ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ
ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ