AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾನಾಡು’ ನಟ ಸಿಂಬುಗೆ ಗೌರವ ಡಾಕ್ಟರೇಟ್​; ಚಿತ್ರರಂಗದಲ್ಲಿ ಈ ಕಲಾವಿದನ ಸಾಧನೆ ಏನು?

Dr Silambarasan: ವೇಲ್ಸ್​ ವಿಶ್ವವಿದ್ಯಾಲಯವು ಸಿಂಬುಗೆ ಗೌರವ ಡಾಕ್ಟರೇಟ್​ ಪದವಿ ನೀಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸಿಂಬು ಈ ಗೌರವ ಸ್ವೀಕರಿಸಿದರು.

‘ಮಾನಾಡು’ ನಟ ಸಿಂಬುಗೆ ಗೌರವ ಡಾಕ್ಟರೇಟ್​; ಚಿತ್ರರಂಗದಲ್ಲಿ ಈ ಕಲಾವಿದನ ಸಾಧನೆ ಏನು?
ಸಿಂಬು
TV9 Web
| Edited By: |

Updated on: Jan 12, 2022 | 2:47 PM

Share

ಕಳೆದ ವರ್ಷ ‘ಮಾನಾಡು’ (Maanadu Movie) ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿತ್ತು. ಆ ಸಿನಿಮಾದಿಂದ ನಟ ಸಿಂಬು (Simbu) ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತ್ತು. ಹಲವು ವರ್ಷಗಳಿಂದ ಬಿಗ್​ ಬ್ರೇಕ್​ಗಾಗಿ ಕಾದಿದ್ದ ಅವರಿಗೆ ‘ಮಾನಾಡು’ ಸಿನಿಮಾ ನಿರೀಕ್ಷಿತ ಫಲ ನೀಡಿತು. ಈಗ ಸಿಂಬು ಮುಡಿಗೆ ಇನ್ನೊಂದು ಗರಿ ಸೇರಿಕೊಂಡಿದೆ. ಅವರಿಗೆ ಗೌರವ ಡಾಕ್ಟರೇಟ್​ (Honorary Doctorate) ಸಿಕ್ಕಿದೆ. ಸಿನಿಮಾ ಕ್ಷೇತ್ರದಲ್ಲಿನ ಅವರ ಸಾಧನೆಯನ್ನು ಗುರುತಿಸಿ ಈಗ ಗೌರವ ನೀಡಲಾಗಿದೆ. ಇನ್ಮುಂದೆ ಅವರು ಡಾ. ಸಿಂಬು! ಈ ವಿಶೇಷ ಗೌರವ ಸ್ವೀಕರಿಸಿರುವ ಅವರ ಫೋಟೋಗಳು ಈಗ ವೈರಲ್​ ಆಗಿವೆ. ಅಭಿಮಾನಿಗಳು, ಸ್ನೇಹಿತರು ಮತ್ತು ಅನೇಕ ಸೆಲೆಬ್ರಿಟಿಗಳು ಸಿಂಬುಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ವೇಲ್ಸ್​ ವಿಶ್ವವಿದ್ಯಾಲಯವು ಸಿಂಬುಗೆ ಗೌರವ ಡಾಕ್ಟರೇಟ್​ ಪದವಿ ನೀಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸಿಂಬು ಈ ಗೌರವ ಸ್ವೀಕರಿಸಿದರು. ‘ಈ ದೊಡ್ಡ ಗೌರವವನ್ನು ನಾನು ತಮಿಳು ಚಿತ್ರರಂಗಕ್ಕೆ ಹಾಗೂ ನನ್ನ ತಂದೆ-ತಾಯಿಗೆ ಅರ್ಪಿಸುತ್ತೇನೆ. ಅವರಿಂದಲೇ ನಾನು ಸಿನಿಮಾರಂಗದಲ್ಲಿ ಬೆಳೆಯಲು ಸಾಧ್ಯವಾಯಿತು. ಅಂತಿಮವಾಗಿ ನನ್ನ ಅಭಿಮಾನಿಗಳು. ಅವರಿಲ್ಲದೇ ನಾನಿಲ್ಲ’ ಎಂದು ಸಿಂಬು ಟ್ವೀಟ್​ ಮಾಡಿದ್ದಾರೆ.

ಚಿತ್ರರಂಗದಲ್ಲಿ ಸಿಂಬು ಸಾಧನೆಗಳೇನು?

ಬಾಲನಟನಾಗಿಯೇ ಚಿತ್ರರಂಗಕ್ಕೆ ಸಿಂಬು ಕಾಲಿಟ್ಟರು. ಸಿನಿಮಾ ಕ್ಷೇತ್ರದಲ್ಲಿ ಅವರು ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. 1980ರ ದಶಕದಿಂದಲೂ ಅವರು ಬಣ್ಣದ ಲೋಕದ ನಂಟು ಹೊಂದಿದ್ದಾರೆ. ನಿರ್ದೇಶಕನಾಗಿ, ಚಿತ್ರಕಥೆ ಬರಹಗಾರನಾಗಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ. 20ರ ಪ್ರಾಯಕ್ಕೂ ಮುನ್ನವೇ ಅವರು ಹೀರೋ ಆದರು. 21ನೇ ವಯಸ್ಸಿಗೆ ‘ಮನ್ಮಥಂ’ ಚಿತ್ರದ ಸ್ಕ್ರಿಪ್ಟ್​ ಬರೆದು, ನಿರ್ದೇಶನ ವಿಭಾಗದ ಮೇಲ್ವಿಚಾರಣೆ ನೋಡಿಕೊಂಡರು. ಆ ಚಿತ್ರ ಸೂಪರ್​ ಹಿಟ್​ ಆಯಿತು. ನಟನಾಗಿ ಅವರ ವೃತ್ತಿಜೀವನಕ್ಕೆ ದೊಡ್ಡ ಯಶಸ್ಸು ತಂದುಕೊಟ್ಟಿತು. ಕೈತುಂಬ ಆಫರ್​ ಇಟ್ಟುಕೊಂಡು, ಬಹುಬೇಡಿಕೆಯ ನಟನಾಗಿ ಅವರು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ:

‘ಎಲ್ಲರೂ ತೊಂದರೆ ಕೊಡ್ತಿದ್ದಾರೆ’ ಎಂದು ವೇದಿಕೆ ಮೇಲೆ ಕಣ್ಣೀರು ಹಾಕಿದ ಸ್ಟಾರ್​ ನಟ ಸಿಂಬು

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್