AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಾನಾಡು’ ನಟ ಸಿಂಬುಗೆ ಗೌರವ ಡಾಕ್ಟರೇಟ್​; ಚಿತ್ರರಂಗದಲ್ಲಿ ಈ ಕಲಾವಿದನ ಸಾಧನೆ ಏನು?

Dr Silambarasan: ವೇಲ್ಸ್​ ವಿಶ್ವವಿದ್ಯಾಲಯವು ಸಿಂಬುಗೆ ಗೌರವ ಡಾಕ್ಟರೇಟ್​ ಪದವಿ ನೀಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸಿಂಬು ಈ ಗೌರವ ಸ್ವೀಕರಿಸಿದರು.

‘ಮಾನಾಡು’ ನಟ ಸಿಂಬುಗೆ ಗೌರವ ಡಾಕ್ಟರೇಟ್​; ಚಿತ್ರರಂಗದಲ್ಲಿ ಈ ಕಲಾವಿದನ ಸಾಧನೆ ಏನು?
ಸಿಂಬು
TV9 Web
| Edited By: |

Updated on: Jan 12, 2022 | 2:47 PM

Share

ಕಳೆದ ವರ್ಷ ‘ಮಾನಾಡು’ (Maanadu Movie) ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸಿತ್ತು. ಆ ಸಿನಿಮಾದಿಂದ ನಟ ಸಿಂಬು (Simbu) ಅವರಿಗೆ ಭರ್ಜರಿ ಯಶಸ್ಸು ಸಿಕ್ಕಿತ್ತು. ಹಲವು ವರ್ಷಗಳಿಂದ ಬಿಗ್​ ಬ್ರೇಕ್​ಗಾಗಿ ಕಾದಿದ್ದ ಅವರಿಗೆ ‘ಮಾನಾಡು’ ಸಿನಿಮಾ ನಿರೀಕ್ಷಿತ ಫಲ ನೀಡಿತು. ಈಗ ಸಿಂಬು ಮುಡಿಗೆ ಇನ್ನೊಂದು ಗರಿ ಸೇರಿಕೊಂಡಿದೆ. ಅವರಿಗೆ ಗೌರವ ಡಾಕ್ಟರೇಟ್​ (Honorary Doctorate) ಸಿಕ್ಕಿದೆ. ಸಿನಿಮಾ ಕ್ಷೇತ್ರದಲ್ಲಿನ ಅವರ ಸಾಧನೆಯನ್ನು ಗುರುತಿಸಿ ಈಗ ಗೌರವ ನೀಡಲಾಗಿದೆ. ಇನ್ಮುಂದೆ ಅವರು ಡಾ. ಸಿಂಬು! ಈ ವಿಶೇಷ ಗೌರವ ಸ್ವೀಕರಿಸಿರುವ ಅವರ ಫೋಟೋಗಳು ಈಗ ವೈರಲ್​ ಆಗಿವೆ. ಅಭಿಮಾನಿಗಳು, ಸ್ನೇಹಿತರು ಮತ್ತು ಅನೇಕ ಸೆಲೆಬ್ರಿಟಿಗಳು ಸಿಂಬುಗೆ ಅಭಿನಂದನೆ ತಿಳಿಸುತ್ತಿದ್ದಾರೆ.

ವೇಲ್ಸ್​ ವಿಶ್ವವಿದ್ಯಾಲಯವು ಸಿಂಬುಗೆ ಗೌರವ ಡಾಕ್ಟರೇಟ್​ ಪದವಿ ನೀಡಿದೆ. ಇತ್ತೀಚೆಗೆ ಚೆನ್ನೈನಲ್ಲಿ ನಡೆದ ಸಮಾರಂಭದಲ್ಲಿ ಸಿಂಬು ಈ ಗೌರವ ಸ್ವೀಕರಿಸಿದರು. ‘ಈ ದೊಡ್ಡ ಗೌರವವನ್ನು ನಾನು ತಮಿಳು ಚಿತ್ರರಂಗಕ್ಕೆ ಹಾಗೂ ನನ್ನ ತಂದೆ-ತಾಯಿಗೆ ಅರ್ಪಿಸುತ್ತೇನೆ. ಅವರಿಂದಲೇ ನಾನು ಸಿನಿಮಾರಂಗದಲ್ಲಿ ಬೆಳೆಯಲು ಸಾಧ್ಯವಾಯಿತು. ಅಂತಿಮವಾಗಿ ನನ್ನ ಅಭಿಮಾನಿಗಳು. ಅವರಿಲ್ಲದೇ ನಾನಿಲ್ಲ’ ಎಂದು ಸಿಂಬು ಟ್ವೀಟ್​ ಮಾಡಿದ್ದಾರೆ.

ಚಿತ್ರರಂಗದಲ್ಲಿ ಸಿಂಬು ಸಾಧನೆಗಳೇನು?

ಬಾಲನಟನಾಗಿಯೇ ಚಿತ್ರರಂಗಕ್ಕೆ ಸಿಂಬು ಕಾಲಿಟ್ಟರು. ಸಿನಿಮಾ ಕ್ಷೇತ್ರದಲ್ಲಿ ಅವರು ಹಲವು ಏಳು-ಬೀಳುಗಳನ್ನು ಕಂಡಿದ್ದಾರೆ. 1980ರ ದಶಕದಿಂದಲೂ ಅವರು ಬಣ್ಣದ ಲೋಕದ ನಂಟು ಹೊಂದಿದ್ದಾರೆ. ನಿರ್ದೇಶಕನಾಗಿ, ಚಿತ್ರಕಥೆ ಬರಹಗಾರನಾಗಿ ತಮ್ಮ ಸಾಮರ್ಥ್ಯ ಏನು ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ. 20ರ ಪ್ರಾಯಕ್ಕೂ ಮುನ್ನವೇ ಅವರು ಹೀರೋ ಆದರು. 21ನೇ ವಯಸ್ಸಿಗೆ ‘ಮನ್ಮಥಂ’ ಚಿತ್ರದ ಸ್ಕ್ರಿಪ್ಟ್​ ಬರೆದು, ನಿರ್ದೇಶನ ವಿಭಾಗದ ಮೇಲ್ವಿಚಾರಣೆ ನೋಡಿಕೊಂಡರು. ಆ ಚಿತ್ರ ಸೂಪರ್​ ಹಿಟ್​ ಆಯಿತು. ನಟನಾಗಿ ಅವರ ವೃತ್ತಿಜೀವನಕ್ಕೆ ದೊಡ್ಡ ಯಶಸ್ಸು ತಂದುಕೊಟ್ಟಿತು. ಕೈತುಂಬ ಆಫರ್​ ಇಟ್ಟುಕೊಂಡು, ಬಹುಬೇಡಿಕೆಯ ನಟನಾಗಿ ಅವರು ಗುರುತಿಸಿಕೊಂಡಿದ್ದಾರೆ.

ಇದನ್ನೂ ಓದಿ:

‘ಎಲ್ಲರೂ ತೊಂದರೆ ಕೊಡ್ತಿದ್ದಾರೆ’ ಎಂದು ವೇದಿಕೆ ಮೇಲೆ ಕಣ್ಣೀರು ಹಾಕಿದ ಸ್ಟಾರ್​ ನಟ ಸಿಂಬು

85 ಲಕ್ಷ ರೂ. ಕಾರಿನ ಬಗ್ಗೆ ಮಾತಾಡಿ ಕಣ್ಣೀರು ಹಾಕಿದ ಅಲ್ಲು ಅರ್ಜುನ್​; ವೇದಿಕೆಯಲ್ಲಿ ನಡೆದಿದ್ದೇನು?

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!