AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ ಪ್ರಕರಣದ ಆರೋಪಿ ನವದೀಪ್​ಗೆ ನೋಟಿಸ್ ನೀಡಿದ ಜಾರಿ ನಿರ್ದೇಶನಾಲಯ

ಸೆಪ್ಟೆಂಬರ್ 14ರಂದು ಹೈದರಾಬಾದ್​ನ ನಾರ್ಕೋಟಿಕ್ಸ್ ಬ್ಯೂರೋ ಅಧಿಕಾರಿಗಳು ಮಾದಾಪುರ ಪೊಲೀಸರೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಬೆಂಗಳೂರಿನ ಮೂವರು, ನೈಜೀರಿಯನ್ ಪ್ರಜೆಗಳು, ನಿರ್ದೇಶಕರು ಇದ್ದರು.

ಡ್ರಗ್ಸ ಪ್ರಕರಣದ ಆರೋಪಿ ನವದೀಪ್​ಗೆ ನೋಟಿಸ್ ನೀಡಿದ ಜಾರಿ ನಿರ್ದೇಶನಾಲಯ
ನವದೀಪ್
ರಾಜೇಶ್ ದುಗ್ಗುಮನೆ
|

Updated on:Oct 07, 2023 | 12:31 PM

Share

ಟಾಲಿವುಡ್ ಹೀರೋ ನವದೀಪ್​ಗೆ (Navdeep) ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ಜಾರಿ ಮಾಡಿದೆ. ಮಾದಾಪುರ ಡ್ರಗ್ಸ್ ಪ್ರಕರಣದಲ್ಲಿ ನವದೀಪ್ ಹೆಸರು ಕೇಳಿ ಬಂದಿದೆ. ಈ ಪ್ರಕರಣದಲ್ಲಿ ಅವರು 37ನೇ ಆರೋಪಿ ಆಗಿದ್ದಾರೆ. ಈ ಪ್ರಕರಣದಲ್ಲಿ ಮಾದಕವಸ್ತು ನಿಗ್ರಹ ದಳ ತನಿಖೆ ನಡೆಸಿತ್ತು. ಡ್ರಗ್ಸ್ ಪ್ರಕರಣ ಆಧರಿಸಿ ನವದೀಪ್​ಗೆ ಇಡಿ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 10ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಸೆಪ್ಟೆಂಬರ್ 14ರಂದು ಹೈದರಾಬಾದ್​ನ ನಾರ್ಕೋಟಿಕ್ಸ್ ಬ್ಯೂರೋ ಅಧಿಕಾರಿಗಳು ಮಾದಾಪುರ ಪೊಲೀಸರೊಂದಿಗೆ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು ಎಂಟು ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ಬೆಂಗಳೂರಿನ ಮೂವರು, ನೈಜೀರಿಯನ್ ಪ್ರಜೆಗಳು, ನಿರ್ದೇಶಕರು ಇದ್ದರು. ಇವರಿಂದ ಅಪಾರ ಪ್ರಮಾಣದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿತ್ತು.

ತನಗೂ ಈ ಪ್ರಕರಣಕ್ಕೂ ಸಂಬಂಧ ಇಲ್ಲ ಎಂದು ನವದೀಪ್ ಹೇಳಿದ್ದರು. ಆ ಬಳಿಕ ಅವರು ಕೆಲವು ದಿನ ತಲೆಮರಿಸಿಕೊಂಡಿದ್ದರು. ಇದು ಸಾಕಷ್ಟು ಅನುಮಾನ ಹುಟ್ಟುಹಾಕಿತ್ತು. ನವದೀಪ್ ಗೆಳೆಯ ರಾಮಚಂದರ್ ವಿಚಾರಣೆ ಎದರುಸಿದ್ದರು. ಈ ವೇಳೆ ನವದೀಪ್​​ ಡ್ರಗ್ ಖರೀದಿಸಿದ ವಿಚಾರವನ್ನು ರಾಮಚಂದರ್ ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ ಕೇಸ್​ನಲ್ಲಿ ತಲೆಮರೆಸಿಕೊಂಡ ತೆಲುಗು ನಟ; ಶೀಘ್ರವೇ ನವದೀಪ್ ಅರೆಸ್ಟ್?  

ಹೀರೋ ನವದೀಪ್ ಅವರನ್ನು ಪೊಲೀಸರು ಇತ್ತೀಚೆಗೆ ವಿಚಾರಣೆಗೆ ಒಳಪಡಿಸಿದ್ದರು. ಅವರ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈಗ ಇಡಿ ಕಡೆಯಿಂದ ನವದೀಪ್ ವಿಚಾರಣೆಗೆ ಹಾಜರಾಗಬೇಕಿದೆ.

ಹೈಕೋರ್ಟ್ ಮೆಟ್ಟಿಲೇರಿದ್ರು

ಡ್ರಗ್ಸ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬರುತ್ತಿದ್ದಂತೆ ನವದೀಪ್ ಹೈಕೋರ್ಟ್ ಮೆಟ್ಟಿಲೇರಿದರು. ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಇದನ್ನು ಕೋರ್ಟ್ ರಿಜೆಕ್ಟ್ ಮಾಡಿತ್ತು. 2004ರಲ್ಲಿ ನವದೀಪ್ ಚಿತ್ರರಂಗಕ್ಕೆ ಕಾಲಿಟ್ಟರು. ಆ ಬಳಿಕ ಹಲವು ತೆಲುಗು ಚಿತ್ರಗಳಲ್ಲಿ ಅವರು ನಟಿಸಿದರು. ಧಾರಾವಾಹಿಗಳಲ್ಲೂ ಅವರು ಬಣ್ಣ ಹಚ್ಚಿದ್ದಾರೆ, ಆದರೆ, ದೊಡ್ಡ ಮಟ್ಟದ ಗೆಲುವು ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:25 pm, Sat, 7 October 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ