AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್​ ನಟನೆಯ ಸಲಾರ್ ಚಿತ್ರಕ್ಕೆ ಕನ್ನಡಿಗನೇ ವಿಲನ್​!

ಕೆಜಿಎಫ್​ ಸಿನಿಮಾದಲ್ಲಿ ಈ ಮೊದಲು ಕೆಲಸ ಮಾಡಿದ ತಾಂತ್ರಿಕ ವರ್ಗದ ಅನೇಕರು ಸಲಾರ್​ ಸಿನಿಮಾದಲ್ಲೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ತೆಲುಗು ಚಿತ್ರರಂಗಕ್ಕೆ ಹೋದರು ಕನ್ನಡಿಗರೆ ಆದ್ಯತೆ ನೀಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್​ ಮುಂದುವರಿಸಿದೆ.

ಪ್ರಭಾಸ್​ ನಟನೆಯ ಸಲಾರ್ ಚಿತ್ರಕ್ಕೆ ಕನ್ನಡಿಗನೇ ವಿಲನ್​!
ಮಧು ಗುರುಸ್ವಾಮಿ-ಪ್ರಭಾಸ್
ರಾಜೇಶ್ ದುಗ್ಗುಮನೆ
| Edited By: |

Updated on: Feb 07, 2021 | 9:03 PM

Share

ಕೆಜಿಎಫ್​ ಖ್ಯಾತಿಯ ಪ್ರಶಾಂತ್​ ನೀಲ್​ ನಿರ್ದೇಶನ ಮಾಡುತ್ತಿರುವ ಹಾಗೂ ಹೊಂಬಾಳೆ ಫಿಲ್ಮ್ಸ್​ ನಿರ್ಮಾಣದ ‘ಸಲಾರ್’​ ಚಿತ್ರಕ್ಕೆ ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಕನ್ನಡದಲ್ಲಿ ಹಿಟ್​ ಆದ ನಂತರ ಪ್ರಶಾಂತ್​ ನೀಲ್​ ಟಾಲಿವುಡ್​ಗೆ ಹೊರಟೇ ಬಿಟ್ಟರು, ಕನ್ನಡಿಗರನ್ನು ಮರೆತರು ಎನ್ನುವ ಆರೋಪ ಮಾಡಿದ್ದರು. ಈ ಆರೋಪಕ್ಕೆ ಸಂಬಂಧಿಸಿ ಪರ ವಿರೋಧ ಚರ್ಚೆಗಳು ಕೂಡ ನಡೆದಿದ್ದವು. ಈಗ ಸಲಾರ್​ ಚಿತ್ರತಂಡದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ.

ಪ್ರಶಾಂತ್​ ನಿಲ್​ ಹಾಗೂ ನಿರ್ಮಾಪಕ ವಿಜಯ್​ ಕಿರಗಂದೂರು ಟಾಲಿವುಡ್​ಗೆ ಹೋದರೂ ಕನ್ನಡ ಕಲಾವಿದರಿಗೆ ಆದ್ಯತೆ ನೀಡುವುದನ್ನು ಮರೆತಿಲ್ಲ. ಈಗ ‘ಸಲಾರ್‘​ ಚಿತ್ರಕ್ಕೆ ಕನ್ನಡದ ಕಲಾವಿದನನ್ನು ಆಗಿ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಮೊದಲು ಮಫ್ತಿ, ವಜ್ರಕಾಯದಂತ ಸಿನಿಮಾಗಳಲ್ಲಿ ನೆಗೆಟಿವ್​ ಶೇಡ್​ನಲ್ಲಿ ಕಾಣಿಸಿಕೊಂಡಿದ್ದ ಮಧು ಗುರುಸ್ವಾಮಿ ಈಗ ಸಲಾರ್​ನಲ್ಲಿ ನಟಿಸಲಿದ್ದು, ಪ್ರಭಾಸ್​ಗೆ ವಿಲನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನು ಕೆಜಿಎಫ್​ ಸಿನಿಮಾದಲ್ಲಿ ಈ ಮೊದಲು ಕೆಲಸ ಮಾಡಿದ ತಾಂತ್ರಿಕ ವರ್ಗದ ಅನೇಕರು ಸಲಾರ್​ ಸಿನಿಮಾದಲ್ಲೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ತೆಲುಗು ಚಿತ್ರರಂಗಕ್ಕೆ ಹೋದರು ಕನ್ನಡಿಗರೆ ಆದ್ಯತೆ ನೀಡುವ ಕೆಲಸವನ್ನು ಹೊಂಬಾಳೆ ಫಿಲ್ಮ್ಸ್​ ಮುಂದುವರಿಸಿದೆ ಅನ್ನೋದು ವಿಶೇಷ.

ಸಲಾರ್​ ಸಿನಿಮಾಗೆ ತಿಂಗಳ ಹಿಂದೆ ಮುಹೂರ್ತ ನೆರವೇರಿತ್ತು. ಕೆಜಿಎಫ್​ ಸ್ಟಾರ್​ ಯಶ್ ಸೇರಿ ಸಾಕಷ್ಟು ಮಂದಿ ಸಿನಿಮಾಗೆ ವಿಶ್​ ಮಾಡಿದ್ದರು, ಈ ಚಿತ್ರ ಸಂಪೂರ್ಣವಾಗಿ ಆ್ಯಕ್ಷನಿಂದ ಕೂಡಿರಲಿದೆ ಎನ್ನುವುದು ಮೂಲಗಳ ಮಾತು.

ಪ್ರಭಾಸ್‌ ನಟನೆಯ ಸಲಾರ್‌ ಚಿತ್ರಕ್ಕೆ ಮುಹೂರ್ತ: ಹೈದರಾಬಾದ್​ಗೆ ತೆರಳಿ ಶುಭ ಹಾರೈಸಿದ ಯಶ್​!

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ