AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಧುರಿ ದೀಕ್ಷಿತ್​​ಗೂ ಕಾಡಿತು ಎಐ ವಿಡಿಯೋ ಕಾಟ

ಮಾಧುರಿ ದೀಕ್ಷಿತ್ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇದು ಫೇಕ್ ಎಂಬುದು ಅನೇಕರಿಗೆ ತಿಳಿದಿಲ್ಲ. ಇದೇ ನಿಜವಾದ ವಿಡಿಯೋ ಎಂದುಕೊಂಡು ಕಮೆಂಟ್ ಮಾಡುತ್ತಿದ್ದಾರೆ. ಆ ವಿಡಿಯೋ ಬಗ್ಗೆ ಇಲ್ಲಿದೆ ವಿವರ. 

ಮಾಧುರಿ ದೀಕ್ಷಿತ್​​ಗೂ ಕಾಡಿತು ಎಐ ವಿಡಿಯೋ ಕಾಟ
ಮಾಧುರಿ
ರಾಜೇಶ್ ದುಗ್ಗುಮನೆ
|

Updated on:May 29, 2026 | 12:32 PM

Share

ಬಾಲಿವುಡ್‌ನ ಧಕ್ ಧಕ್ ಗರ್ಲ್ ಮಾಧುರಿ ದೀಕ್ಷಿತ್ ಅವರದ್ದೇ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಮಾಧುರಿ ಅವರು ಅತ್ಯಂತ ಗ್ಲಾಮರಸ್ ಹಾಗೂ ಬೋಲ್ಡ್ ಆದ ಕಪ್ಪು ಬಣ್ಣದ ಸ್ಲಿಟ್ ಗೌನ್ ಧರಿಸಿ ಕುಳಿತಿರುವಂತೆ ಈ ವಿಡಿಯೋದಲ್ಲಿ ಬಿಂಬಿಸಲಾಗಿದೆ. ಇದನ್ನು ನೋಡಿದ ಅನೇಕ ಅಭಿಮಾನಿಗಳು ಮತ್ತು ನೆಟ್ಟಿಗರು ಇದು ನಿಜವಾದ ವಿಡಿಯೋ ಎಂದುಕೊಂಡು ತರಹೇವಾರಿ ಕಮೆಂಟ್ ಮಾಡುತ್ತಿದ್ದಾರೆ. ಆದರೆ, ಈ ವಿಡಿಯೋದ ಹಿಂದಿರುವ ಅಸಲಿ ಸತ್ಯವೇ ಬೇರೆ.

ಸದ್ಯ ಹರಿದಾಡುತ್ತಿರುವ ಮಾಧುರಿ ದೀಕ್ಷಿತ್ ಅವರ ಈ ವಿಡಿಯೋ ಸಂಪೂರ್ಣವಾಗಿ ಫೇಕ್ ಆಗಿದೆ. ಎಐ ಮೂಲಕ ಡೀಪ್‌ಫೇಕ್ ಮಾಡಿ ಎಡಿಟ್ ಮಾಡಲಾಗಿದೆ. ತಂತ್ರಜ್ಞಾನದ ದುರ್ಬಳಕೆಯಿಂದಾಗಿ ಈ ವಿಡಿಯೋ ಎಷ್ಟು ನೈಜವಾಗಿ ಮೂಡಿಬಂದಿದೆಯೆಂದರೆ, ಮೊದಲ ನೋಟಕ್ಕೆ ಇದು ನಕಲಿ ಎಂದು ಪತ್ತೆಹಚ್ಚುವುದು ಸಾಮಾನ್ಯ ಜನರಿಗೆ ಅಸಾಧ್ಯವಾಗಿದೆ.

ಈ ವಿಡಿಯೋದಲ್ಲಿ ಇರುವುದು ಬಾಲಿವುಡ್‌ನ ಮತ್ತೊಬ್ಬ ಗ್ಲಾಮರಸ್ ನಟಿ ಭಾಗ್ಯಶ್ರೀ ಬೋರ್ಸೆ. ಪ್ರಶಸ್ತಿ ಸಮಾರಂಭವೊಂದರಲ್ಲಿ ಭಾಗ್ಯಶ್ರೀ ಅವರು ಧರಿಸಿದ್ದ ಬೋಲ್ಡ್ ಉಡುಪಿನ ವಿಡಿಯೋವನ್ನು ಕೆಲವರು ಎಡಿಟ್ ಮಾಡಿದ್ದಾರೆ. ತಂತ್ರಜ್ಞಾನದ ಸಹಾಯದಿಂದ ಭಾಗ್ಯಶ್ರೀ ಅವರ ಮುಖದ ಜಾಗಕ್ಕೆ ಮಾಧುರಿ ದೀಕ್ಷಿತ್ ಅವರ ಮುಖವನ್ನು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ.

ಇದನ್ನೂ ಓದಿ: ಸೀರಿಯಲ್ ಕಿಲ್ಲರ್ ಆದ ಮಾಧುರಿ ದೀಕ್ಷಿತ್; ಹೊಸ ಅವತಾರದಲ್ಲಿ ಧಕ್ ಧಕ್ ಗರ್ಲ್

ಇತ್ತೀಚಿನ ದಿನಗಳಲ್ಲಿ ಸೆಲೆಬ್ರಿಟಿಗಳನ್ನು ಗುರಿಯಾಗಿಸಿಕೊಂಡು ಇಂತಹ ಡೀಪ್‌ಫೇಕ್ ವಿಡಿಯೋಗಳನ್ನು ಹರಿಬಿಡುವುದು ಹೆಚ್ಚಾಗುತ್ತಿದ್ದು, ಇಂಟರ್ನೆಟ್‌ನಲ್ಲಿ ಕಾಣುವ ಎಲ್ಲವೂ ನಿಜವಲ್ಲ ಎಂಬುದಕ್ಕೆ ಈ ವಿಡಿಯೋ ಮತ್ತೊಂದು ಸಾಕ್ಷಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 12:30 pm, Fri, 29 May 26

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ