AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಕರೀನಾ ಕಪೂರ್​ಗೆ ನೊಟೀಸ್

ಬಾಲಿವುಡ್ ನಟಿ ಕರೀನಾ ಕಪೂರ್ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕರೀನಾ ಕಪೂರ್ ಕೆಲ ವರ್ಷಗಳ ಹಿಂದೆ ಬರೆದಿದ್ದ ಪುಸ್ತಕವೊಂದಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯವು ಕರೀನಾಗೆ ನೊಟೀಸ್ ನೀಡಿದ್ದು, ಉತ್ತರ ನೀಡುವಂತೆ ಸೂಚಿಸಿದೆ.

ಧಾರ್ಮಿಕ ಭಾವನೆಗೆ ಧಕ್ಕೆ ಆರೋಪ: ಕರೀನಾ ಕಪೂರ್​ಗೆ ನೊಟೀಸ್
ಮಂಜುನಾಥ ಸಿ.
|

Updated on:May 11, 2024 | 4:00 PM

Share

ಬಾಲಿವುಡ್ ಬೆಬೊ ಕರೀನಾ ಕಪೂರ್ (Kareena Kapoor)​ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ. ಕರೀನಾ ಕಪೂರ್​ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ದೂರು ದಾಖಲಾಗಿದ್ದು, ವಿಚಾರಣೆ ನಡೆಸಿರುವ ಮಧ್ಯ ಪ್ರದೇಶ ನ್ಯಾಯಾಲಯವು ಕರೀನಾ ಕಪೂರ್ ಅವರಿಗೆ ನೊಟೀಸ್ ಜಾರಿ ಮಾಡಿದ್ದು, ನಿರ್ದಿಷ್ಟ ದಿನದ ಒಳಗಾಗಿ ಉತ್ತರ ನೀಡುವಂತೆ ಸೂಚಿಸಿದೆ. ಕರೀನಾ ಕಪೂರ್ ಕೆಲ ವರ್ಷಗಳ ಹಿಂದೆ ಬರೆದಿದ್ದ ಪುಸ್ತಕದಿಂದಾಗಿ ಅವರೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮೂರು ವರ್ಷಗಳ ಹಿಂದೆ ನಟಿ ಕರೀನಾ ಕಪೂರ್, ತಾಯಿಯಾದ ತಮ್ಮ ಅನುಭವ, ಗರ್ಭ ಧರಿಸಿದ್ದಾಗ ತೆಗೆದುಕೊಂಡ ಎಚ್ಚರಿಕೆಗಳು ಇನ್ನಿತರೆ ಅನುಭವವಗಳನ್ನು ಸೇರಿಸಿ ‘ಕರೀನಾ ಕಪೂರ್ ಖಾನ್, ಪ್ರೆಗ್ನೆನ್ಸಿ ಬೈಬಲ್’ ಹೆಸರಿನ ಪುಸ್ತಕ ಬರೆದು ಪ್ರಕಟಿಸಿದ್ದರು. ಆ ಪುಸ್ತಕದ ಸಹಸ್ರಾರು ಪ್ರತಿಗಳು ಮಾರಾಟವಾಗಿದ್ದವು. ಪುಸ್ತಕದಲ್ಲಿ ಗರ್ಭಧರಿಸಿದ್ದಾಗಿನ ಅನುಭವಗಳು ಇನ್ನಿತರೆ ವಿಷಯಗಳನ್ನು ಅವರು ಹಂಚಿಕೊಂಡಿದ್ದರು. ಜೊತೆಗೆ ಗರ್ಭಿಣಿಯರು ತೆಗೆದುಕೊಳ್ಳಬೇಕಾದ ಎಚ್ಚರಿಕೆಗಳ ಬಗ್ಗೆಯೂ ಕರೀನಾ ಕಪೂರ್ ಬರೆದಿದ್ದರು. ಕರೀನಾರ ಈ ಪ್ರಯತ್ನದ ಬಗ್ಗೆ ಆಗ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಈಗ ಇದೇ ಪುಸ್ತಕ ಅವರನ್ನು ವಿವಾದಕ್ಕೆ ದೂಡಿದೆ.

ಕರೀನಾ ಕಪೂರ್, ತಮ್ಮ ಪುಸ್ತಕಕ್ಕೆ ನೀಡಿರುವ ಹೆಸರು ವಿವಾದಕ್ಕೆ ಕಾರಣವಾಗಿದೆ. ಪುಸ್ತಕದಲ್ಲಿ ‘ಬೈಬಲ್’ ಎಂಬ ಪದ ಬಳಸಿರುವ ಬಗ್ಗೆ ವಕೀಲ ಕ್ರಿಸ್ಟೊಫರ್ ಆಂಟೊನಿ ಎಂಬುವರು ಕರೀನಾ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್​ನಲ್ಲಿ ಮೊಕದ್ದಮೆ ಹೂಡಿದ್ದು, ಕ್ರೈಸ್ತರ ಪವಿತ್ರ ಗ್ರಂಥ ಬೈಬಲ್ ಹೆಸರನ್ನು ತಮ್ಮ ಪುಸ್ತಕಕ್ಕೆ ಇರಿಸುವ ಮೂಲಕ ಕ್ರೈಸ್ತ ಧರ್ಮೀಯರ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದಿದ್ದಾರೆ. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್, ನಟಿ ಕರೀನಾ ಕಪೂರ್​ಗೆ ನೊಟೀಸ್ ಜಾರಿ ಮಾಡಿದ್ದು, ಉತ್ತರ ನೀಡುವಂತೆ ಸೂಚಿಸಿದೆ.

ಇದನ್ನೂ ಓದಿ:43ರ ಪ್ರಾಯದಲ್ಲೂ ಭರ್ಜರಿ ಡಿಮ್ಯಾಂಡ್​ ಉಳಿಸಿಕೊಂಡ ಕರೀನಾ ಕಪೂರ್​

ಕರೀನಾ ಕಪೂರ್, ತಮ್ಮ ಪುಸ್ತಕದಲ್ಲಿ ‘ಬೈಬಲ್’ ಪದವನ್ನು ಅಗೌರವಪೂರ್ವಕವಾಗಿ ಬಳಸಿದ್ದಾರೆ. ಬೈಬಲ್, ವಿಶ್ವದಾದ್ಯಂತ ಇರುವ ಕ್ರಿಶ್ಚಿಯನ್ನರ ಪವಿತ್ರ ಗ್ರಂಥ, ಅದನ್ನು ತಮ್ಮ ಪ್ರೆಗ್ನೆನ್ಸಿ ಅನುಭವ ಹಂಚಿಕೊಳ್ಳಲು ಬಳಸಿದ್ದು ಸರಿಯಲ್ಲ. ಬೈಬಲ್ ಪದವನ್ನು ಅಗೌರವಪೂರ್ವಕವಾಗಿ ಕರೀನಾ ಕಪೂರ್ ತಮ್ಮ ಪುಸ್ತಕದಲ್ಲಿ ಬಳಸಿದ್ದಾರೆ. ಇದರಿಂದಾಗಿ ಕ್ರೈಸ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗಿದೆ’ ಎಂದು ವಕೀಲ ಕ್ರಿಸ್ಟೊಫರ್ ಆಂಟೊನಿ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಕರೀನಾ ಕಪೂರ್ ನಟಿಸಿರುವ ‘ಕ್ರೂವ್’ ಸಿನಿಮಾ ಕೆಲವು ದಿನಗಳ ಹಿಂದಷ್ಟೆ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. ಪ್ರಸ್ತುತ ಅವರು ‘ಸಿಂಘಂ ರಿಟರ್ನ್ಸ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಸಿನಿಮಾವನ್ನು ರೋಹಿತ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದು, ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್ ಸಹ ಇದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:00 pm, Sat, 11 May 24

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ