AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ, ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆ: ನಟನಿಗೆ ಕೋರ್ಟ್ ತಪರಾಕಿ

Chiranjeevi-Trisha: ತ್ರಿಷಾ ವಿರುದ್ಧ ಕೀಳು ಹೇಳಿಕೆ ನೀಡಿದ್ದ ಮನ್ಸೂರ್ ಅಲಿ ಖಾನ್ ಬಳಿಕ ತ್ರಿಷಾ, ಚಿರಂಜೀವಿ, ಖುಷ್ಬು ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದರು. ನ್ಯಾಯಮೂರ್ತಿಗಳು ಮನ್ಸೂರ್ ನಡೆಯನ್ನು ಕಠು ಪದಗಳಲ್ಲಿ ಟೀಕಿಸಿದ್ದಾರೆ.

ಚಿರಂಜೀವಿ, ತ್ರಿಷಾ ವಿರುದ್ಧ ಮಾನನಷ್ಟ ಮೊಕದ್ದಮೆ: ನಟನಿಗೆ ಕೋರ್ಟ್ ತಪರಾಕಿ
ಮನ್ಸೂರ್ ಅಲಿ ಖಾನ್
ಮಂಜುನಾಥ ಸಿ.
|

Updated on: Dec 12, 2023 | 4:36 PM

Share

ನಟಿ ತ್ರಿಷಾ (Trisha) ವಿರುದ್ಧ ನೀಚವಾಗಿ ಮಾತನಾಡಿದ್ದ ನಟ ಮನ್ಸೂರ್ ಖಾನ್​ಗೆ (Mansoor Ali Khan) ಮದ್ರಾಸ್ ಹೈಕೋರ್ಟ್ ತಪರಾಕಿ ಹಾಕಿದೆ. ಮನ್ಸೂರ್ ಅಲಿ ಖಾನ್​ರ ನೀಚ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ತ್ರಿಷಾ ಹಾಗೂ ತ್ರಿಷಾಗೆ ಬೆಂಬಲ ನೀಡಿದ್ದ ನಟ ಮೆಗಾಸ್ಟಾರ್ ಚಿರಂಜೀವಿ, ನಟಿ ಖುಷ್ಬು ವಿರುದ್ಧ ಮನ್ಸೂರ್ ಅಲಿ ಖಾನ್ ಮಾನನಷ್ಟ ಮೊಕದ್ದಮೆ ಹೂಡಿದ್ದರು, ಈ ಪ್ರಕರಣದ ವಿಚಾರಣೆ ವೇಳೆ ಮನ್ಸೂರ್ ಖಾನ್​ಗೆ ನ್ಯಾಯಮೂರ್ತಿ ತಪರಾಕಿ ಹಾಕಿದ್ದಾರೆ.

ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿದ್ದ ನ್ಯಾಯಮೂರ್ತಿ ಎನ್ ಸತೀಶ್ ಕುಮಾರ್, ‘‘ಈ ಪ್ರಕರಣದಲ್ಲಿ ನಟಿ ತ್ರಿಷಾ ನ್ಯಾಯಾಲಯದ ಮೆಟ್ಟಿಲೇರಬೇಕಿತ್ತು, ಮನ್ಸೂರ್ ಅಲಿ ಖಾನ್ ಆ ರೀತಿಯ ಕೀಳು ಮಟ್ಟದ ಮಾತುಗಳನ್ನು ನಟಿಯ ವಿರುದ್ಧ ಆಡಿದ್ದಾರೆ. ಒಬ್ಬ ನಟ, ಬಹಿರಂಗವಾಗಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಅರಿತಿರಬೇಕು, ಸಾವಿರಾರು ಜನ ಆತನನ್ನು ನೋಡುತ್ತಿರುತ್ತಾರೆ ಹೀಗಿರುವಾಗ ಹೆಚ್ಚಿನ ಜವಾಬ್ದಾರಿ ನಟನ ಮೇಲಿರುತ್ತದೆ’ ಎಂದಿದ್ದಾರೆ.

ಖಾನ್ ಹೆಸರು ಆಗಾಗ್ಗೆ ಇಂಥಹಾ ವಿವಾದಗಳಲ್ಲಿ ಕೇಳಿ ಬರುತ್ತಲೇ ಇರುತ್ತದೆ. ಖಾನ್, ಮಾಧ್ಯಮಗಳೊಂದಿಗೆ ಸಂವಹನ ನಡೆಸುವಾಗ ಆಡುವ ಮಾತುಗಳ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು ಎಂದು ನ್ಯಾಯಾಧೀಶರು ಸೂಚಿಸಿದರು. ಅಲ್ಲದೆ, ಈಗ ಖಾನ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಂಧನದಿಂದ ಪಾರಾಗಲು ಖಾನ್ ಈ ಮಾನನಷ್ಟ ಮೊಕದ್ದಮೆ ಹೂಡಿದ್ದಾರಾ? ಎಂಬ ಅನುಮಾನವನ್ನೂ ವ್ಯಕ್ತಪಡಿಸಿದರು.

ಇದನ್ನೂ ಓದಿ:ರೇಪ್ ಕಮೆಂಟ್: ಕೊನೆಗೂ ನಟಿ ತ್ರಿಷಾ ಬಳಿ ಕ್ಷಮೆ ಕೇಳಿದ ಮನ್ಸೂರ್ ಅಲಿ ಖಾನ್

ಚೆನ್ನೈನ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡಿದ್ದ ಮನ್ಸೂರ್ ಖಾನ್, ‘‘ಲಿಯೋ’ ಸಿನಿಮಾನಲ್ಲಿ ತ್ರಿಷಾ ಜೊತೆ ಬೆಡ್​ರೂಂ ಸೀನ್ ಇರುತ್ತದೆ ಎಂದುಕೊಂಡಿದ್ದೆ ಆದರೆ ಅವರು ತ್ರಿಷಾ ಮುಖವನ್ನು ಸಹ ನನಗೆ ತೋರಿಸಲಿಲ್ಲ. ಬೆಡ್​ರೂಂ ಇದ್ದಿದ್ದರೆ ಹಿಂದೆ ರೋಜಾ, ಶ್ರೀದೇವಿ ಅವರುಗಳನ್ನು ಎತ್ತಿ ಬೆಡ್​ ಮೇಲೆ ಎಸೆದಂತೆ ಎಸೆದು ‘ಫರ್ಮಾರ್ಮ್’ ಮಾಡಿರುತ್ತಿದ್ದೆ’’ ಎಂದಿದ್ದರು.

ಮನ್ಸೂರ್ ಅಲಿ ಖಾನ್​ರ ಈ ಹೇಳಿಕೆಯನ್ನು ಮೆಗಾಸ್ಟಾರ್ ಚಿರಂಜೀವಿ, ನಟಿ, ಬಿಜೆಪಿ ನಾಯಕಿ ಖುಷ್ಬು, ನಿರ್ದೇಶಕ ಲೋಕೇಶ್ ಕನಗರಾಜ್, ಸಚಿವೆ ರೋಜಾ ಸೇರಿದಂತೆ ಇನ್ನೂ ಹಲವರು ಖಂಡಿಸಿದ್ದರು. ಆರಂಭದಲ್ಲಿ ಕ್ಷಮೆ ಕೇಳದೆ ಉದ್ಧಟತನ ಮೆರೆದ ಮನ್ಸೂರ್ ಆ ಬಳಿಕ ಕ್ಷಮೆ ಕೇಳಿದರಾದರೂ, ಬಳಿಕ ತ್ರಿಷಾ, ಚಿರಂಜೀವಿ, ಖುಷ್ಬು ವಿರುದ್ಧ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ