AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ

ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತು. ಸಿನಿಮಾಗೆ ದೊಡ್ಡ ಮೊತ್ತದ ಬಂಡವಾಳ ಹೂಡಿದ್ದಾಗಿಯೂ ಹೇಳಿಕೊಂಡಿತ್ತು. ಈಗ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕೋರ್ಟ್ ಆದೇಶ ನೀಡಿದ್ದು, ‘ಯುಎ’ ಸೆನ್ಸಾರ್ ಪತ್ರ ನೀಡುವಂತೆ ಸೂಚಿಸಿದೆ.

‘ಜನ ನಾಯಗನ್’ ಚಿತ್ರಕ್ಕೆ ದೊಡ್ಡ ಜಯ; ಯುಎ ಪ್ರಮಾಣಪತ್ರ ನೀಡಲು ಕೋರ್ಟ್ ಆದೇಶ
ಜನ ನಾಯಗನ್
ರಾಜೇಶ್ ದುಗ್ಗುಮನೆ
|

Updated on:Jan 09, 2026 | 11:20 AM

Share

ಸಂಕಷ್ಟದಲ್ಲಿದ್ದ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಚಿತ್ರಕ್ಕೆ ದೊಡ್ಡ ಗೆಲುವು ಸಿಕ್ಕಿದೆ. ಈ ಸಿನಿಮಾಗೆ ತಕ್ಷಣವೇ ಸೆನ್ಸಾರ್ ಪತ್ರ ನೀಡುವಂತೆ ಕೋರ್ಟ್​ ಆದೇಶ ಹೊರಡಿಸಿದೆ. ಇದರಿಂದ ತಂಡಕ್ಕೆ ದೊಡ್ಡ ರಿಲೀಫ್ ಸಿಕ್ಕಿದೆ. ಸಿನಿಮಾನ ಯಾವಾಗ ರಿಲೀಸ್ ಮಾಡಬೇಕು ಎಂಬುದರ ಬಗ್ಗೆ ತಂಡ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಸಿನಿಮಾಗೆ ಸೆನ್ಸಾರ್ ಪತ್ರ ನೀಡದ ಬಗ್ಗೆ ಕೆವಿಎನ್ ಸಂಸ್ಥೆ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು. ಸೆನ್ಸಾರ್ ಮಂಡಳಿ ಸೂಚಿಸಿದ ಬದಲಾವಣೆ ಮಾಡಿದರೂ ನಮಗೆ ಪ್ರಮಾಣಪತ್ರ ನೀಡಿಲ್ಲ ಎಂದು ನಿರ್ಮಾಣ ಸಂಸ್ಥೆ ಅಳಲು ತೋಡಿಕೊಂಡಿತ್ತು. ಸಿನಿಮಾಗೆ ದೊಡ್ಡ ಮೊತ್ತದ ಬಂಡವಾಳ ಹೂಡಿದ್ದಾಗಿಯೂ ಹೇಳಿಕೊಂಡಿತ್ತು. ಈಗ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕೋರ್ಟ್ ಆದೇಶ ನೀಡಿದ್ದು, ‘ಯುಎ’ ಸೆನ್ಸಾರ್ ಪತ್ರ ನೀಡುವಂತೆ ಸೂಚಿಸಿದೆ.

ಡಿಸೆಂಬರ್ ತಿಂಗಳಲ್ಲೇ ಸೆನ್ಸಾರ್ ಮಂಡಳಿಗೆ ‘ಜನ ನಾಯಗನ್’ ಚಿತ್ರ ತೋರಿಸಲಾಯಿತು. ಇದನ್ನು ವೀಕ್ಷಿಸಿದ ಮಂಡಳಿಯವರು 27 ಕಡೆಗಳಲ್ಲಿ ಬದಲಾವಣೆ/ಕಟ್/ಮ್ಯೂಟ್​​ಗೆ ಸೂಚಿಸಿತ್ತು. ಈ ಚಿತ್ರಕ್ಕೆ ಯುಎ 16+ ಪ್ರಮಾಣಪತ್ರ ನೀಡಿತ್ತು. ಈ ಬದಲಾವಣೆಗಳ ಬಳಿಕವೂ ಸೆನ್ಸಾರ್ ಮಂಡಳಿಯ ಸದಸ್ಯರೊಬ್ಬರು ಚಿತ್ರವನ್ನು ರಿವ್ಯೂ ಕಮಿಟಿಗೆ ನಿರ್ದೇಶಿಸುವ ನಿರ್ಧಾರ ಮಾಡಿದರು. ಇದರಿಂದ ಸಿನಿಮಾಗೆ ಸೆನ್ಸಾರ್ ಪ್ರಮಾಣಪತ್ರ ಸಿಕ್ಕಿರಲಿಲ್ಲ.

ಸೆನ್ಸಾರ್ ಮಂಡಳಿಯವರು ಹೇಳಿದ ಬದಲಾವಣೆ ಮಾಡಿದ ಬಳಿಕವೂ ರಿವ್ಯೂ ಸಮಿತಿಗೆ ಚಿತ್ರವನ್ನು ಸಲ್ಲಿಕೆ ಮಾಡುವ ಅವಶ್ಯಕತೆ ಏನಿದೆ ಎಂಬ ಪ್ರಶ್ನೆ ಚಿತ್ರತಂಡದ್ದಾಗಿತ್ತು. ಈಗ ಕೋರ್ಟ್​​ನಲ್ಲಿ ಸಿನಿಮಾ ಪರವಾಗಿ ಆದೇಶ ಬಂದಿದೆ.

ಇದನ್ನೂ ಓದಿ: ‘ಜನ ನಾಯಗನ್’ vs ಸಿಬಿಎಫ್​​ಸಿ: ವಿಜಯ್​​ಗೆ ಬೆಂಬಲಿಸಿದ ಕಾಂಗ್ರೆಸ್: ಡಿಎಂಕೆ?

ಈ ವಾರ ‘ಜನ ನಾಯಗನ್’ ರಿಲೀಸ್ ಅನುಮಾನ ಎನ್ನಲಾಗುತ್ತಿದೆ. ಈಗಾಗಲೇ ತಮಿಳುನಾಡಿನಲ್ಲಿ ‘ಪರಾಶಕ್ತಿ’ ಚಿತ್ರ ತೆರೆಗೆ ಬರುತ್ತಿದೆ. ಜನವರಿ 10ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ಥಿಯೇಟರ್​​​ಗಳು ಹಂಚಿಕೆ ಆಗಿರುವುದರಿಂದ ಚಿತ್ರವು ಜನವರಿ 14ರಂದು ತೆರೆಗೆ ಬರುವ ಎಲ್ಲಾ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:04 am, Fri, 9 January 26

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ