AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​

ವಾಕ್ಸಿನ್​ ಬಂದಿದ್ದರೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ ಕೆಲವರು ತಪ್ಪು ಮಾಹಿತಿ ಹರಡುತ್ತಿರುವುದು ವಿಪರ್ಯಾಸ. ಅಂಥವರಲ್ಲಿ ಕೆಲವು ಸೆಲೆಬ್ರಿಟಿಗಳು ಕೂಡ ಸೇರಿಕೊಂಡಿದ್ದಾರೆ.

ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ ನಟನಿಗೆ 2 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​
ಮನ್ಸೂರ್ ಅಲಿ ಖಾನ್ - ಕೊವಿಡ್ ವ್ಯಾಕ್ಸಿನ್
ಮದನ್​ ಕುಮಾರ್​
|

Updated on: May 01, 2021 | 10:07 AM

Share

ಕೊರೊನಾ ವೈರಸ್​ ಎರಡನೇ ಅಲೆಗೆ ದೇಶದ ಜನರು ತತ್ತರಿಸಿದ್ದಾರೆ. ಪ್ರಾಣ ಹೋಗುತ್ತಿದ್ದರೂ ಕೂಡ ಆಸ್ಪತ್ರೆಗಳಲ್ಲಿ ಬೆಡ್​ ಸಿಗದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ವಾಕ್ಸಿನ್​ ಬಂದಿದ್ದರೂ ಸಹ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಈ ಪರಿಸ್ಥಿತಿಯಲ್ಲಿ ಕೆಲವರು ತಪ್ಪು ಮಾಹಿತಿ ಹರಡುತ್ತಿರುವುದು ವಿಪರ್ಯಾಸ. ಅಂಥವರಲ್ಲಿ ಕೆಲವು ಸೆಲೆಬ್ರಿಟಿಗಳು ಕೂಡ ಸೇರಿಕೊಂಡಿದ್ದಾರೆ. ಕೊವಿಡ್​ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ್ದಕ್ಕಾಗಿ ಕಾಲಿವುಡ್​ ನಟ ಮನ್ಸೂರ್​ ಅಲಿ ಖಾನ್​ ಅವರಿಗೆ 2 ಲಕ್ಷ ರೂ. ದಂಡ ವಿಧಿಸಲಾಗಿದೆ.

ಕಳೆದ ತಿಂಗಳು ಕಾಲಿವುಡ್​ ನಟ ವಿವೇಕ್​ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಕೊವಿಡ್​ ವ್ಯಾಕ್ಸಿನ್​ ಪಡೆದುಕೊಂಡ ಮರುದಿನವೇ ಅವರಿಗೆ ಹೃದಯಾಘಾತ ಆಗಿದ್ದು ಕಾಕತಾಳೀಯ. ಆ ಘಟನೆಯನ್ನು ಉಲ್ಲೇಖವಾಗಿ ಇಟ್ಟುಕೊಂಡು ನಟ ಮನ್ಸೂರ್​ ಅಲಿ ಖಾನ್​ ಅವರು ಕೊರೊನಾ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ್ದರು ಎಂದು ದೂರು ದಾಖಲಿಸಲಾಗಿತ್ತು.

ವಿವೇಕ್​ ಅವರ ಹೃದಯಾಘಾತಕ್ಕೆ ವ್ಯಾಕ್ಸಿನ್​ ಕಾರಣ ಎಂದು ಮನ್ಸೂರ್​ ಅಲಿ ಖಾನ್​ ಹೇಳಿದ್ದ ವಿಡಿಯೋ ವೈರಲ್​ ಆಗಿತ್ತು. ಅವರ ವಿರುದ್ಧ ಆರೋಗ್ಯಾಧಿಕಾರಿಗಳು ದೂರು ದಾಖಲಿಸಿದ್ದರು. ವಡಪಳನಿ ಪೊಲೀಸರು ಮನ್ಸೂರ್​ ಅಲಿ ಖಾನ್​ ವಿರುದ್ಧ ಎಫ್​ಐಆರ್​ ಸಿದ್ಧಪಡಿಸಿದ್ದರು. ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಮದ್ರಾಸ್​ ಹೈಕೋರ್ಟ್​ ಈಗ ತೀರ್ಪು ನೀಡಿದೆ. ತಮಿಳುನಾಡು ಆರೋಗ್ಯ ಇಲಾಖೆಗೆ 2 ಲಕ್ಷ ರೂ.ಗಳನ್ನು ದಂಡದ ರೂಪದಲ್ಲಿ ಮನ್ಸೂರ್ ಅಲಿ ಖಾನ್​ ನೀಡಬೇಕು ಎಂದು ತೀರ್ಪಿನಲ್ಲಿ ಸೂಚಿಸಲಾಗಿದೆ.

ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ನೀಡುವುದು ನನ್ನ ಉದ್ದೇಶ ಆಗಿರಲಿಲ್ಲ. ವಿವೇಕ್​ ನಿಧನದ ಬಳಿಕ ತೀವ್ರ ನೋವು ಉಂಟಾಗಿತ್ತು. ಆ ಭಾವುಕತೆಯ ಭರದಲ್ಲಿ ಹಾಗೆ ಮಾತನಾಡಿದ್ದೆ ಎಂದು ಕೋರ್ಟ್​ನಲ್ಲಿ ಮನ್ಸೂರ್​ ಅಲಿ ಖಾನ್​ ಹೇಳಿಕೆ ನೀಡಿದ್ದಾರೆ ಎಂದು ವರದಿ ಆಗಿದೆ. ಏ.17ರಂದು ನಟ ವಿವೇಕ್​ ನಿಧನರಾಗಿದ್ದರು. ಆ ಬಳಿಕ ಮನ್ಸೂರ್​ ಅಲಿ ಖಾನ್​ ಅವರು ಕೊರೊನಾ ವ್ಯಾಕ್ಸಿನ್​ ಬಗ್ಗೆ ತಪ್ಪು ಮಾಹಿತಿ ಹರಡಿದ್ದರು.

ಇದನ್ನೂ ಓದಿ: ಕೊವಿಡ್​ ಲಸಿಕೆ ಪಡೆದ ಮರುದಿನವೇ ನಟ ವಿವೇಕ್​ಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು

Vivek: ತಮಿಳು ನಟ ವಿವೇಕ್​ ನಿಧನಕ್ಕೆ ಕಂಬನಿ ಮಿಡಿದ ಪುನೀತ್​, ರಜನಿಕಾಂತ್​, ಪ್ರಕಾಶ್​ ರೈ, ರೆಹಮಾನ್​

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು