AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ಸ್ಥಾನ ತುಂಬಲು ಬಂದ ಮಹಾಭಾರತದ ಅರ್ಜುನ; ಫ್ಯಾನ್ಸ್​ ಇದನ್ನು ಒಪ್ತಾರಾ?

Sushant Singh Rajput: ಇಂಥ ಒಂದು ದೊಡ್ಡ ಜವಾಬ್ದಾರಿಯನ್ನು ಶಾಹೀರ್​ ಶೇಖ್​ ಹೊತ್ತುಕೊಂಡಿದ್ದಾರೆ. ಸುಶಾಂತ್​ ಜಾಗದಲ್ಲಿ ಈ ನಟನನ್ನು ಜನರು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬ ಕುತೂಹಲ ಈಗ ಎಲ್ಲರ ಮನದಲ್ಲಿ ಮೂಡಿದೆ.

ಸುಶಾಂತ್​ ಸಿಂಗ್​ ಸ್ಥಾನ ತುಂಬಲು ಬಂದ ಮಹಾಭಾರತದ ಅರ್ಜುನ; ಫ್ಯಾನ್ಸ್​ ಇದನ್ನು ಒಪ್ತಾರಾ?
ಶಾಹೀರ್​ ಶೇಖ್​, ಸುಶಾಂತ್​ ಸಿಂಗ್​ ರಜಪೂತ್​
TV9 Web
| Edited By: |

Updated on: Jul 07, 2021 | 3:45 PM

Share

ನಟ ಸುಶಾಂತ್​ ಸಿಂಗ್​ ರಜಪೂತ್​ ಅವರನ್ನು ಕಳೆದುಕೊಂಡ ಬಳಿಕ ಬಾಲಿವುಡ್​ಗೆ ದೊಡ್ಡ ನಷ್ಟವಾಯಿತು. ಅವರ ಅನುಪಸ್ಥಿತಿಯನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ. ಹಾಗಿದ್ದರೂ ಕೂಡ ಅವರ ಸ್ಥಾನವನ್ನು ತಾವು ತುಂಬುವುದಾಗಿ ನಟ ಶಾಹೀರ್​ ಶೇಖ್​ ಮುಂದೆಬಂದಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಸುದ್ದಿ ಹೊರಬಿದ್ದಿದೆ. ಅಷ್ಟಕ್ಕೂ ಸುಶಾಂತ್ ಸ್ಥಾನವನ್ನು ಶಾಹೀರ್​ ಶೇಖ್​ ತುಂಬುವುದು ಹೇಗೆ? ಅದಕ್ಕೆ ಉತ್ತರ; ‘ಪವಿತ್ರ ರಿಶ್ತಾ 2’!

ಚಿತ್ರರಂಗಕ್ಕೆ ಬರುವುದಕ್ಕೂ ಮುನ್ನ ಸುಶಾಂತ್​ ಸಿಂಗ್​ ರಜಪೂತ್​ ಅವರು ಸೀರಿಯಲ್​ನಲ್ಲಿ ನಟಿಸುತ್ತಿದ್ದರು. ಜೀ ಟಿವಿಯಲ್ಲಿ ಪ್ರಸಾರವಾದ ‘ಪವಿತ್ರ ರಿಶ್ತಾ’ ಧಾರಾವಾಹಿಯಲ್ಲಿ ಅವರು ಮಾಡಿದ ಪಾತ್ರ ಸೂಪರ್​ ಹಿಟ್​ ಆಗಿತ್ತು. ಆ ಮೂಲಕ ಸುಶಾಂತ್​ ಅವರು ಹಿಂದಿ ಕಿರುತೆರೆ ಪ್ರೇಕ್ಷಕರ ಮನೆಮಾತಾಗಿದ್ದರು. ಅವರಿಗೆ ಜೋಡಿಯಾಗಿ ಅಂಕಿತಾ ಲೋಖಂಡೆ ನಟಿಸಿದ್ದರು. ಈಗ ಅದೇ ಸೀರಿಯನ್​ನ ಸೀಕ್ವೆಲ್​ ಬರುತ್ತಿದೆ. ‘ಪವಿತ್ರ ರಿಶ್ತಾ 2.0’ ಎಂಬ ಶೀರ್ಷಿಕೆಯಲ್ಲಿ ಆ ಧಾರಾವಾಹಿಯ ಕಥೆ ಮುಂದುವರಿಯಲಿದೆ. ಅಂದು ಸುಶಾಂತ್​ ಮಾಡಿದ್ದ ಪಾತ್ರವನ್ನು ಇಂದು ಶಾಹೀರ್​ ಶೇಖ್​ ಮಾಡಲು ಮುಂದೆಬಂದಿದ್ದಾರೆ.

‘ಪವಿತ್ರ ರಿಶ್ತಾ 2.0’ ಬರುವುದು ನಿಜ ಎಂದು ಕೆಲವೇ ದಿನಗಳ ಹಿಂದೆ ಸುಶಾಂತ್​ ಮಾಜಿ ಪ್ರೇಯಸಿ ಅಂಕಿತಾ ಲೋಖಂಡೆ ಹೇಳಿದ್ದರು. ಈಗ ಆ ಧಾರಾವಾಹಿಯ ಅಧಿಕೃತ ಮೂಲಗಳಿಂದ ಸುದ್ದಿ ಹೊರಬಿದ್ದಿದೆ. ಸುಶಾಂತ್​ ಮಾಡಿದ್ದ ಪಾತ್ರವನ್ನು ಶಾಹೀರ್​ ಶೇಖ್​ ಮಾಡುವುದು ಖಚಿತ ಆಗಿದೆ. ಈ ಹಿಂದೆ ಸ್ಟಾರ್​ ಪ್ಲಸ್​ ವಾಹಿನಿಯಲ್ಲಿ ಪ್ರಸಾರವಾದ ‘ಮಹಾಭಾರತ’ ಧಾರಾವಾಹಿಯಲ್ಲಿ ಅರ್ಜುನನ ಪಾತ್ರವನ್ನು ಮಾಡುವ ಮೂಲಕ ಶಾಹೀರ್​ ಶೇಖ್​ ಫೇಮಸ್​ ಆಗಿದ್ದರು. ಈಗ ‘ಪವಿತ್ರ ರಿಶ್ತಾ 2.0’ ಸೀರಿಯಲ್​ನಲ್ಲಿ ಅವರಿಗೆ ದೊಡ್ಡ ಜವಾಬ್ದಾರಿ ಹೊರಿಸಲಾಗುತ್ತಿದೆ.

ಟಿವಿ ಬದಲಿಗೆ ಈ ಬಾರಿ ಆನ್​ಲೈನ್​ನಲ್ಲಿ ಈ ಸೀರಿಯಲ್​ ಪ್ರಸಾರ ಆಗಲಿದೆ. ದಿನಾಂಕ, ಸಮಯ ಮುಂತಾದ ವಿವರಗಳು ಇನ್ನಷ್ಟೇ ಸಿಗಬೇಕಿದೆ. ‘ಪವಿತ್ರ ರಿಶ್ತಾ’ ಸೀರಿಯಲ್​ ಈಗಾಗಲೇ ಒಂದು ದೊಡ್ಡ ಮೈಲುಗಲ್ಲು ಸ್ತಾಪಿಸಿತ್ತು. ಅದನ್ನು ಮೀರಿಸುವ ಸವಾಲಿನೊಂದಿಗೆ ‘ಪವಿತ್ರ ರಿಶ್ತಾ 2.0’ ತಂಡ ಸಜ್ಜಾಗಿದೆ. ಸುಶಾಂತ್​ ಜಾಗದಲ್ಲಿ ಶಾಹೀರ್​ ಶೇಖ್​ ಅವರನ್ನು ಜನರು ಒಪ್ಪಿಕೊಳ್ಳುತ್ತಾರೋ ಇಲ್ಲವೋ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ:

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ
ಎಸ್​​. ಜಾನಕಿ ಅಂತಿಮ ದರ್ಶನದ ನೇರಪ್ರಸಾರ