ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಅರೆಸ್ಟ್ ಆದ ರವೀಂದರ್ ಚಂದ್ರಶೇಖರನ್?

ಲಿಬ್ರಾ ಪ್ರೊಡಕ್ಷನ್ ಹೆಸರಿನ ನಿರ್ಮಾಣ ಸಂಸ್ಥೆಯನ್ನು ರವೀಂದರ್ ಚಂದ್ರಶೇಖರನ್ ನಡೆಸುತ್ತಿದ್ದಾರೆ.   ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆ ಆರಂಭಿಸುವುದಾಗಿ ರವೀಂದರ್ ಹೇಳಿದ್ದರಂತೆ. ಶೇರುದಾರರನ್ನಾಗಿ ಸೇರಿಸಿಕೊಳ್ಳುವುದಾಗಿ ಕೆಲವರಿಂದ ಹಣ ಪಡೆದಿದ್ದರು.

ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡ ಬೆನ್ನಲ್ಲೇ ಅರೆಸ್ಟ್ ಆದ ರವೀಂದರ್ ಚಂದ್ರಶೇಖರನ್?
ರವೀಂದರ್ ಚಂದ್ರಶೇಖರನ್-ಮಹಾಲಕ್ಷ್ಮಿ

Updated on: Sep 08, 2023 | 10:22 AM

ಕಾಲಿವುಡ್ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಬಂಧನಕ್ಕೆ ಒಳಗಾಗಿದ್ದಾರೆ ಎಂದು ವರದಿ ಆಗಿದೆ. ತಮಿಳು ಮಾಧ್ಯಮಗಳು ಈ ಕುರಿತು ಸುದ್ದಿ ಪ್ರಕಟ ಮಾಡಿವೆ. ಕಿರುತೆರೆ ನಟಿ ಮಹಾಲಕ್ಷ್ಮಿ ಶಂಕರ್ (Mahalakshmi Shankar) ಅವರನ್ನು ರವೀಂದರ್ ಮದುವೆ ಆಗಿದ್ದರು. ಇತ್ತೀಚೆಗೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಕೂಡ ಆಚರಿಸಿಕೊಂಡಿತ್ತು. ಈ ಬೆನ್ನಲ್ಲೇ ವಂಚನೆ ಪ್ರಕರಣದಲ್ಲಿ ರವೀಂದರ್ ಬಂಧನಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ಈ ಬೆಳವಣಿಗೆಯಿಂದ ಮಹಾಲಕ್ಷ್ಮಿ ಅವರು ಮತ್ತಷ್ಟು ನೊಂದಿದ್ದಾರೆ.

ಲಿಬ್ರಾ ಪ್ರೊಡಕ್ಷನ್ ಹೆಸರಿನ ನಿರ್ಮಾಣ ಸಂಸ್ಥೆಯನ್ನು ರವೀಂದರ್ ಚಂದ್ರಶೇಖರನ್ ನಡೆಸುತ್ತಿದ್ದಾರೆ.   ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಯೋಜನೆ ಆರಂಭಿಸುವುದಾಗಿ ರವೀಂದರ್ ಹೇಳಿದ್ದರಂತೆ. ಶೇರುದಾರರನ್ನಾಗಿ ಸೇರಿಸಿಕೊಳ್ಳುವುದಾಗಿ ಕೆಲವರಿಂದ ಹಣ ಪಡೆದಿದ್ದರು. ಒಟ್ಟೂ 16 ಕೋಟಿ ರೂಪಾಯಿ ಪಡೆದು ಅವರು ವಂಚಿಸಿದ್ದಾರೆ ಎಂದು ಚೆನ್ನೈನ ಬಾಲಾಜಿ ಎಂಬವರು ದೂರು ನೀಡಿದ್ದರು. ಈ ದೂರನ್ನು ಆಧರಿಸಿ ರವೀಂದರ್ ಅವರನ್ನು ಅರೆಸ್ಟ್ ಮಾಡಲಾಗಿದೆ ಎನ್ನಲಾಗಿದೆ.

2021ರಲ್ಲಿ ಈ ವಂಚನೆ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ದೂರು ಕೂಡ ದಾಖಲಾಗಿತ್ತು. ಈಗ ರವೀಂದರ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಅದೇ ರೀತಿ ರವೀಂದರ್ 2 ಜನರಿಗೆ 8 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನು ರವೀಂದರ್ ವಿರುದ್ಧ ಮತ್ತೊಂದು ರೀತಿಯ ದೂರು ಕೂಡ ದಾಖಲಾಗಿದೆ. ವಿಜಯ್ ಎಂಬುವವರ ಬಳಿ ಅವರು 15 ಲಕ್ಷ ರೂಪಾಯಿ ಪಡೆದಿದ್ದರು. ಈ ಹಣವನ್ನು ಸಿನಿಮಾ ಒಂದಕ್ಕೆ ಹೂಡಿಕೆ ಮಾಡಿದ್ದರು. ಬಂದ ಲಾಭದಲ್ಲಿ ಪಾಲು ನೀಡುವುದಾಗಿ ಭರವಸೆ ನೀಡಿ. ಆದರೆ, ಚಿತ್ರ ಬಿಡುಗಡೆಯಾಗಿ ತಿಂಗಳು ಕಳೆದರೂ ರವೀಂದರ್ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ. ಹೀಗಾಗಿ, ವಿಜಯ್ ಅವರು ದೂರು ಕೊಟ್ಟಿದ್ದರು.

ಇದನ್ನೂ ಓದಿ: ಮೋಸ ಮಾಡಿದ್ರಾ ನಟಿ ಮಹಾಲಕ್ಷ್ಮಿ ಪತಿ ರವೀಂದರ್ ಚಂದ್ರಶೇಖರನ್? ಕೇಸ್ ಹಾಕಿದ ಪೊಲೀಸರು

ನಟಿ ಮಹಾಲಕ್ಷ್ಮಿ ಹಾಗೂ ರವೀಂದರ್ ಚಂದ್ರಶೇಖರನ್ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಚಾರ ಗುಟ್ಟಾಗಿಯೇ ಇತ್ತು. ಕಳೆದ ಆಗಸ್ಟ್​ನಲ್ಲಿ ಮದುವೆ ಆಗುವ ಮೂಲಕ ಎಲ್ಲರಿಗೂ ಅಚ್ಚರಿ ನೀಡಿದರು. ಇತ್ತೀಚೆಗೆ ಈ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಮಹಾಲಕ್ಷ್ಮಿ ಹಾಗೂ ರವೀಂದರ್​ ಮಧ್ಯೆ 6 ವರ್ಷಗಳ ಅಂತರ ಇದೆ. ಮಹಾಲಕ್ಷ್ಮಿಗಿಂತ ರವೀಂದರ್ ದಪ್ಪವಾಗಿದ್ದಾರೆ ಎಂದು ಅನೇಕರು ಅವರನ್ನು ಟೀಕಿಸಿದ್ದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us