AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’; ಲೈವ್​ ಬಂದು ಟ್ರೋಲಿಗರ ಬಳಿ ಮನವಿ ಮಾಡಿಕೊಂಡ ಮಹಾಲಕ್ಷ್ಮಿ

Mahalakshmi | Ravindar Chandrasekaran: ಮಹಾಲಕ್ಷ್ಮಿ ಹಾಗೂ ರವೀಂದರ್​ ಚಂದ್ರಶೇಖರನ್​ ಅವರು ಬದುಕಿನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ರವೀಂದರ್​ ಅವರನ್ನು ಒಂದು ವರ್ಗದ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’; ಲೈವ್​ ಬಂದು ಟ್ರೋಲಿಗರ ಬಳಿ ಮನವಿ ಮಾಡಿಕೊಂಡ ಮಹಾಲಕ್ಷ್ಮಿ
ಮಹಾಲಕ್ಷ್ಮೀ, ರವೀಂದರ್ ಚಂದ್ರಶೇಖರನ್
TV9 Web
| Edited By: |

Updated on: Sep 13, 2022 | 1:11 PM

Share

ತಮಿಳು ನಟಿ-ನಿರೂಪಕಿ ಮಹಾಲಕ್ಷ್ಮಿ (Mahalakshmi) ಹಾಗೂ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ (Ravindar Chandrasekaran) ಮದುವೆಯ ಸುದ್ದಿ ಹಾಟ್​ ಟಾಪಿಕ್​ ಆಗಿದೆ. ಕೆಲವೇ ದಿನಗಳ ಹಿಂದೆ ಈ ಜೋಡಿಯ ಕಲ್ಯಾಣ ನೆರವೇರಿತು. ಸೋಶಿಯಲ್​ ಮೀಡಿಯಾದಲ್ಲಿ ಮದುವೆ ಫೋಟೋಗಳು ಸಖತ್​ ವೈರಲ್​ ಆದವು. ಫೋಟೋ ನೋಡಿದ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅನೇಕ ಮೀಮ್ಸ್​ (Ravindar Chandrasekaran Memes) ಹರಿದಾಡುತ್ತಿವೆ. ಎಲ್ಲದರಲ್ಲೂ ರವೀಂದರ್​ ಚಂದ್ರಶೇಖರನ್​ ಅವರಿಗೆ ಅವಮಾನ ಮಾಡಲಾಗಿದೆ. ಇದು ಮಹಾಲಕ್ಷ್ಮಿ ಅವರ ಗಮನಕ್ಕೂ ಬಂದಿದೆ. ಹಾಗಾಗಿ ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿರುವ ಅವರು ‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ. ಯಾವ ವ್ಯಕ್ತಿಯನ್ನೂ ಹೀಯಾಳಿಸಬಾರದು ಎಂದು ಮಹಾಲಕ್ಷ್ಮಿ ಹೇಳಿದ್ದಾರೆ.

ಮಹಾಲಕ್ಷ್ಮಿ ಹಾಗೂ ರವೀಂದರ್​ ಚಂದ್ರಶೇಖರನ್​ ಅವರಿಗೆ ಇದು ಎರಡನೇ ಮದುವೆ. ಇಬ್ಬರೂ ಪರಸ್ಪರ ಕೈ ಹಿಡಿಯುವ ಮೂಲಕ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ರವೀಂದರ್​ ಅವರು ಹೆಚ್ಚು ದಪ್ಪ ಇದ್ದಾರೆ ಎಂಬ ಕಾರಣಕ್ಕೆ ಅವರನ್ನು ಒಂದು ವರ್ಗದ ನೆಟ್ಟಿಗರು ಟ್ರೋಲ್​ ಮಾಡುತ್ತಿರುವುದು ಬೇಸರದ ಸಂಗತಿ. ಈ ದಂಪತಿ ಹಂಚಿಕೊಂಡಿರುವ ಫೋಟೋಗಳಿಗೆ ಬಹುತೇಕ ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ.

ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್​ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್​ ಜತೆ ಅವರ ಕಲ್ಯಾಣ ನೆರವೇರಿದೆ. ಈಗ ಅವರು ಖಾಸಗಿ ವಿಮಾನದಲ್ಲಿ ಹನಿಮೂನ್​ಗೆ ತೆರಳಿದ್ದಾರೆ ಎಂಬ ಬಗ್ಗೆಯೂ ಸುದ್ದಿ ಹರಿದಾಡುತ್ತಿದೆ. ಆದರೆ ‘ನಾವು ಹೋಗಿದ್ದು ಹನಿಮೂನ್​ಗೆ ಅಲ್ಲ. ದೇವಸ್ಥಾನಕ್ಕೆ ಹೋಗಿದ್ವಿ’ ಎಂದು ರವೀಂದರ್​ ಚಂದ್ರಶೇಖರನ್​ ಹೇಳಿದ್ದಾರೆ.

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್​ ಅವರು ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ ಎಂಬ ಕುರಿತು ಗುಸುಗುಸು ಕೇಳಿಬರುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎಂದು ಕೆಲವು ಕಡೆ ಸುದ್ದಿ ಬಿತ್ತರ ಆಗಿದೆ. ಆದರೆ ಈ ವಿಚಾರಗಳ ಬಗ್ಗೆ ಮಹಾಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

‘ಫಸ್ಟ್​ಲುಕ್​’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯರಾಗಿದ್ದಾರೆ. ಪತಿಯ ಜೊತೆ ಇರುವ ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ. ಮನಸ್ಸಿಗೆ ಬಂದಂತೆ ಟ್ರೋಲ್​ ಮಾಡುವವರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ