‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’; ಲೈವ್​ ಬಂದು ಟ್ರೋಲಿಗರ ಬಳಿ ಮನವಿ ಮಾಡಿಕೊಂಡ ಮಹಾಲಕ್ಷ್ಮಿ

Mahalakshmi | Ravindar Chandrasekaran: ಮಹಾಲಕ್ಷ್ಮಿ ಹಾಗೂ ರವೀಂದರ್​ ಚಂದ್ರಶೇಖರನ್​ ಅವರು ಬದುಕಿನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ರವೀಂದರ್​ ಅವರನ್ನು ಒಂದು ವರ್ಗದ ನೆಟ್ಟಿಗರು ಟ್ರೋಲ್​ ಮಾಡುತ್ತಿದ್ದಾರೆ.

‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’; ಲೈವ್​ ಬಂದು ಟ್ರೋಲಿಗರ ಬಳಿ ಮನವಿ ಮಾಡಿಕೊಂಡ ಮಹಾಲಕ್ಷ್ಮಿ
ಮಹಾಲಕ್ಷ್ಮೀ, ರವೀಂದರ್ ಚಂದ್ರಶೇಖರನ್
Follow us
| Updated By: ಮದನ್​ ಕುಮಾರ್​

Updated on: Sep 13, 2022 | 1:11 PM

ತಮಿಳು ನಟಿ-ನಿರೂಪಕಿ ಮಹಾಲಕ್ಷ್ಮಿ (Mahalakshmi) ಹಾಗೂ ನಿರ್ಮಾಪಕ ರವೀಂದರ್​ ಚಂದ್ರಶೇಖರನ್​ (Ravindar Chandrasekaran) ಮದುವೆಯ ಸುದ್ದಿ ಹಾಟ್​ ಟಾಪಿಕ್​ ಆಗಿದೆ. ಕೆಲವೇ ದಿನಗಳ ಹಿಂದೆ ಈ ಜೋಡಿಯ ಕಲ್ಯಾಣ ನೆರವೇರಿತು. ಸೋಶಿಯಲ್​ ಮೀಡಿಯಾದಲ್ಲಿ ಮದುವೆ ಫೋಟೋಗಳು ಸಖತ್​ ವೈರಲ್​ ಆದವು. ಫೋಟೋ ನೋಡಿದ ನೆಟ್ಟಿಗರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಅನೇಕ ಮೀಮ್ಸ್​ (Ravindar Chandrasekaran Memes) ಹರಿದಾಡುತ್ತಿವೆ. ಎಲ್ಲದರಲ್ಲೂ ರವೀಂದರ್​ ಚಂದ್ರಶೇಖರನ್​ ಅವರಿಗೆ ಅವಮಾನ ಮಾಡಲಾಗಿದೆ. ಇದು ಮಹಾಲಕ್ಷ್ಮಿ ಅವರ ಗಮನಕ್ಕೂ ಬಂದಿದೆ. ಹಾಗಾಗಿ ಇನ್​ಸ್ಟಾಗ್ರಾಮ್​ನಲ್ಲಿ ಲೈವ್​ ಬಂದಿರುವ ಅವರು ‘ನನ್ನ ಗಂಡನಿಗೆ ಅವಮಾನ ಮಾಡಬೇಡಿ’ ಎಂದು ಮನವಿ ಮಾಡಿಕೊಂಡಿದ್ದಾರೆ. ಯಾವ ವ್ಯಕ್ತಿಯನ್ನೂ ಹೀಯಾಳಿಸಬಾರದು ಎಂದು ಮಹಾಲಕ್ಷ್ಮಿ ಹೇಳಿದ್ದಾರೆ.

ಮಹಾಲಕ್ಷ್ಮಿ ಹಾಗೂ ರವೀಂದರ್​ ಚಂದ್ರಶೇಖರನ್​ ಅವರಿಗೆ ಇದು ಎರಡನೇ ಮದುವೆ. ಇಬ್ಬರೂ ಪರಸ್ಪರ ಕೈ ಹಿಡಿಯುವ ಮೂಲಕ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭಿಸಿದ್ದಾರೆ. ರವೀಂದರ್​ ಅವರು ಹೆಚ್ಚು ದಪ್ಪ ಇದ್ದಾರೆ ಎಂಬ ಕಾರಣಕ್ಕೆ ಅವರನ್ನು ಒಂದು ವರ್ಗದ ನೆಟ್ಟಿಗರು ಟ್ರೋಲ್​ ಮಾಡುತ್ತಿರುವುದು ಬೇಸರದ ಸಂಗತಿ. ಈ ದಂಪತಿ ಹಂಚಿಕೊಂಡಿರುವ ಫೋಟೋಗಳಿಗೆ ಬಹುತೇಕ ನೆಗೆಟಿವ್​ ಕಮೆಂಟ್​ಗಳು ಬರುತ್ತಿವೆ.

ಮಹಾಲಕ್ಷ್ಮಿ ಮತ್ತು ರವೀಂದರ್ ಚಂದ್ರಶೇಖರನ್​ ಅವರು ಪರಸ್ಪರ ಪ್ರೀತಿಸುತ್ತಿದ್ದರು ಎಂಬ ವಿಚಾರ ಯಾರಿಗೂ ತಿಳಿದಿರಲಿಲ್ಲ. ಏಕಾಏಕಿ ಮದುವೆ ಆಗುವ ಮೂಲಕ ಅವರಿಬ್ಬರು ಸರ್ಪ್ರೈಸ್​ ನೀಡಿದ್ದಾರೆ. ಮಹಾಲಕ್ಷ್ಮಿ ಅವರಿಗೆ 32 ವರ್ಷ ವಯಸ್ಸು. 38ರ ಪ್ರಾಯದ ರವೀಂದರ್ ಚಂದ್ರಶೇಖರ್​ ಜತೆ ಅವರ ಕಲ್ಯಾಣ ನೆರವೇರಿದೆ. ಈಗ ಅವರು ಖಾಸಗಿ ವಿಮಾನದಲ್ಲಿ ಹನಿಮೂನ್​ಗೆ ತೆರಳಿದ್ದಾರೆ ಎಂಬ ಬಗ್ಗೆಯೂ ಸುದ್ದಿ ಹರಿದಾಡುತ್ತಿದೆ. ಆದರೆ ‘ನಾವು ಹೋಗಿದ್ದು ಹನಿಮೂನ್​ಗೆ ಅಲ್ಲ. ದೇವಸ್ಥಾನಕ್ಕೆ ಹೋಗಿದ್ವಿ’ ಎಂದು ರವೀಂದರ್​ ಚಂದ್ರಶೇಖರನ್​ ಹೇಳಿದ್ದಾರೆ.

ಇದನ್ನೂ ಓದಿ
Image
ಖ್ಯಾತ ನಿರ್ಮಾಪಕನ ಜತೆ ಮದುವೆ ಆದ ಕಿರುತೆರೆ ನಟಿ ಮಹಾಲಕ್ಷ್ಮೀ; ‘ನಿಜವಾದ ವಿವಾಹವೇ?’ ಎಂದ ಫ್ಯಾನ್ಸ್
Image
ಯಾಕೆ ನೀನಿನ್ನೂ ಮದುವೆ ಆಗಿಲ್ಲ…ವಿಡಿಯೋ ಮೂಲಕ ಉತ್ತರ ಕೊಟ್ಟ ನಟಿ ರಮ್ಯಾ
Image
Priya Anand: ನಿತ್ಯಾನಂದ ಜತೆ ಮದುವೆ ಆಗ್ತೀನಿ ಅಂತ ‘ಜೇಮ್ಸ್​’ ನಟಿ ಪ್ರಿಯಾ ಆನಂದ್​ ಹೇಳಿದ್ದೇಕೆ?
Image
Pavitra Lokesh: ‘ಸುಚೇಂದ್ರ ಪ್ರಸಾದ್​ ಜತೆ ನನ್ನ ಮದುವೆ ಆಗಿಲ್ಲ, 11 ವರ್ಷ ಒಟ್ಟಿಗೆ ಇದ್ದೆ ಅಷ್ಟೇ’: ನಟಿ ಪವಿತ್ರಾ ಲೋಕೇಶ್​

ಪತ್ನಿ ಮಹಾಲಕ್ಷ್ಮಿಗೆ ರವೀಂದರ್ ಚಂದ್ರಶೇಖರ್​ ಅವರು ದುಬಾರಿ ಗಿಫ್ಟ್​ಗಳನ್ನು ನೀಡಿದ್ದಾರೆ ಎಂಬ ಕುರಿತು ಗುಸುಗುಸು ಕೇಳಿಬರುತ್ತಿದೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಭರಣ, ಸೀರೆ, ಬಂಗಲೆಯನ್ನು ಉಡುಗೊರೆಯಾಗಿ ಕೊಟ್ಟಿದ್ದಾರೆ ಎಂದು ಕೆಲವು ಕಡೆ ಸುದ್ದಿ ಬಿತ್ತರ ಆಗಿದೆ. ಆದರೆ ಈ ವಿಚಾರಗಳ ಬಗ್ಗೆ ಮಹಾಲಕ್ಷ್ಮಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

‘ಫಸ್ಟ್​ಲುಕ್​’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ಮಹಾಲಕ್ಷ್ಮಿ ನಟಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅವರು ಸಕ್ರಿಯರಾಗಿದ್ದಾರೆ. ಪತಿಯ ಜೊತೆ ಇರುವ ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಿದ್ದಾರೆ. ಮನಸ್ಸಿಗೆ ಬಂದಂತೆ ಟ್ರೋಲ್​ ಮಾಡುವವರ ಬಗ್ಗೆ ಅವರು ಹೆಚ್ಚು ತಲೆ ಕೆಡಿಸಿಕೊಂಡಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?