AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾರಾಜ’ ಹಿಟ್ ಆದ ಬೆನ್ನಲ್ಲೆ, ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾದ ನಿರ್ದೇಶಕ

Maharaja: ಬ್ಲಾಕ್ ಬಸ್ಟರ್ ಸಿನಿಮಾ ‘ಮಹಾರಾಜ’ ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಇದೀಗ ಹೊಸ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ. ಸಿನಿಮಾಕ್ಕೆ ‘ಮಹಾರಾಣಿ’ ಎಂದು ಹೆಸರಿಡಲಾಗಿದ್ದು, ನಯನತಾರಾ ನಾಯಕಿಯಂತೆ.

‘ಮಹಾರಾಜ’ ಹಿಟ್ ಆದ ಬೆನ್ನಲ್ಲೆ, ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾದ ನಿರ್ದೇಶಕ
ಮಂಜುನಾಥ ಸಿ.
|

Updated on: Sep 14, 2024 | 11:12 PM

Share

ಈ ವರ್ಷದ ಅತ್ಯುತ್ತಮ ತಮಿಳು ಸಿನಿಮಾ ಯಾವುದೆಂದರೆ ಸುಲಭವಾಗಿ ‘ಮಹಾರಾಜ’ ಎನ್ನಬಹುದು. ಅತ್ಯಂತ ಕಡಿಮೆ ಬಜೆಟ್​ನಲ್ಲಿ, ಸರಳವಾದ ಕತೆಯನ್ನೇ ಅದ್ಭುತವಾಗಿ ತೆರೆಗೆ ತಂದಿದ್ದಾರೆ ನಿರ್ದೇಶಕ ನಿತಿಲನ್ ಸ್ವಾಮಿನಾಥನ್. ವಿಜಯ್ ಸೇತುಪತಿ ನಾಯಕನಾಗಿ ನಟಿಸಿರುವ ಈ ಸಿನಿಮಾ ಬಹಳ ಸರಳವಾಗಿದ್ದರೂ ಸಹ ನಿರೂಪಣೆ, ಕತೆಯಲ್ಲಿ ಬರುವ ಅದ್ಭುತ ಟ್ವಿಸ್ಟ್ ಹಾಗೂ ಪ್ರಧಾನ ನಟರ ನಟನೆಯಿಂದಾಗಿ ಬಹಳ ಗಮನ ಸೆಳೆದಿತ್ತು. ಈ ಸಿನಿಮಾ ಚಿತ್ರಮಂದಿರದಲ್ಲಿ ಹಿಟ್ ಆಗುವ ಜೊತೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನಿಮಾ ಹಿಟ್ ಆದ ಬೆನ್ನಲ್ಲೆ ನಿರ್ದೇಶಕ ಈಗ ‘ಮಹಾರಾಣಿ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

‘ಮಹಾರಾಜ’ ಸಿನಿಮಾ ನಿರ್ದೇಶಕ ನಿತಿಲನ್ ಸ್ವಾಮಿನಾಥನ್, ಇದೀಗ ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾಗಿದ್ದಾರೆ. ಸಿನಿಮಾದಲ್ಲಿ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ ಎನ್ನಲಾಗುತ್ತಿದೆ. ನಯನತಾರಾ, ಕಮರ್ಶಿಯಲ್ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿರುವ ಜೊತೆಗೆ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ವರ್ಷಗಳಿಂದಲೂ ನಟಿಸಿಕೊಂಡು ಬರುತ್ತಿದ್ದಾರೆ. ಇದೀಗ ಮಹಿಳಾ ಪ್ರಧಾನ ಸಿನಿಮಾ ಆಗಿರುವ ‘ಮಹಾರಾಣಿ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:ಘೋಷಣೆಯಾಯ್ತು ಭಾರತದ ಅತ್ಯುತ್ತಮ ಹಾರರ್ ಸಿನಿಮಾದ ಎರಡನೇ ಭಾಗ

ನಯನತಾರಾ ಅವರೊಟ್ಟಿಗೆ ಕೆಲ ಸುತ್ತಿನ ಮಾತುಕತೆ ಮಾಡಿದ್ದು, ಅವರಿಗೆ ಕತೆ ಬಹಳ ಇಷ್ಟವಾಗಿದೆಯಂತೆ. ‘ಮಹಾರಾಣಿ’ ಸಿನಿಮಾನಲ್ಲಿ ನಾಯಕ ಪಾತ್ರ ಇರುವುದಿಲ್ಲ ಎನ್ನಲಾಗುತ್ತಿದೆ. ಸಿನಿಮಾವನ್ನು ಫ್ಯಾಷನ್ ಸ್ಟುಡಿಯೋಸ್ ಬ್ಯಾನರ್​ನ ಸುದಾನ್ ನಿರ್ಮಾಣ ಮಾಡಲಿದ್ದಾರೆ. ಕಳೆದ ಸಿನಿಮಾ ಹಿಟ್ ಆಗಿರುವ ಕಾರಣ ಈ ಸಿನಿಮಾಕ್ಕೆ ತುಸು ಹೆಚ್ಚಿನ ಬಜೆಟ್ ಮೀಸಲಿಡಲಾಗಿದೆ. ಒಳ್ಳೆಯ ತಂತ್ರಜ್ಞರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ನಿತಿಲನ್ ಸ್ವಾಮಿನಾಥನ್ ಅವರ ‘ಮಹಾರಾಜ’ ಸಿನಿಮಾ ದೊಡ್ಡ ಹಿಟ್ ಎನಿಸಿಕೊಂಡಿತು. ಎಲ್ಲ ವರ್ಗದ ಪ್ರೇಕ್ಷಕರಿಗೂ ಸಹ ಸಿನಿಮಾ ಇಷ್ಟವಾಯ್ತು. ಮಾತ್ರವಲ್ಲದೆ ಒಟಿಟಿಗೆ ಬಂದ ಮೇಲಂತೂ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಸಿನಿಮಾ ನೋಡಿ ಮೆಚ್ಚಿಕೊಂಡರು. ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ಹಣ ಗಳಿಸಿದ ಸಿನಿಮಾ, ಒಟಿಟಿಯಲ್ಲಿ ಅತಿ ಹೆಚ್ಚು ಸ್ಟ್ರೀಮ್ ಆದ ಸಿನಿಮಾ ಎಂದೆನಿಸಿಕೊಂಡಿತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್