AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾರಾಜ’ ಹಿಟ್ ಆದ ಬೆನ್ನಲ್ಲೆ, ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾದ ನಿರ್ದೇಶಕ

Maharaja: ಬ್ಲಾಕ್ ಬಸ್ಟರ್ ಸಿನಿಮಾ ‘ಮಹಾರಾಜ’ ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಇದೀಗ ಹೊಸ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ. ಸಿನಿಮಾಕ್ಕೆ ‘ಮಹಾರಾಣಿ’ ಎಂದು ಹೆಸರಿಡಲಾಗಿದ್ದು, ನಯನತಾರಾ ನಾಯಕಿಯಂತೆ.

‘ಮಹಾರಾಜ’ ಹಿಟ್ ಆದ ಬೆನ್ನಲ್ಲೆ, ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾದ ನಿರ್ದೇಶಕ
ಮಂಜುನಾಥ ಸಿ.
|

Updated on: Sep 14, 2024 | 11:12 PM

Share

ಈ ವರ್ಷದ ಅತ್ಯುತ್ತಮ ತಮಿಳು ಸಿನಿಮಾ ಯಾವುದೆಂದರೆ ಸುಲಭವಾಗಿ ‘ಮಹಾರಾಜ’ ಎನ್ನಬಹುದು. ಅತ್ಯಂತ ಕಡಿಮೆ ಬಜೆಟ್​ನಲ್ಲಿ, ಸರಳವಾದ ಕತೆಯನ್ನೇ ಅದ್ಭುತವಾಗಿ ತೆರೆಗೆ ತಂದಿದ್ದಾರೆ ನಿರ್ದೇಶಕ ನಿತಿಲನ್ ಸ್ವಾಮಿನಾಥನ್. ವಿಜಯ್ ಸೇತುಪತಿ ನಾಯಕನಾಗಿ ನಟಿಸಿರುವ ಈ ಸಿನಿಮಾ ಬಹಳ ಸರಳವಾಗಿದ್ದರೂ ಸಹ ನಿರೂಪಣೆ, ಕತೆಯಲ್ಲಿ ಬರುವ ಅದ್ಭುತ ಟ್ವಿಸ್ಟ್ ಹಾಗೂ ಪ್ರಧಾನ ನಟರ ನಟನೆಯಿಂದಾಗಿ ಬಹಳ ಗಮನ ಸೆಳೆದಿತ್ತು. ಈ ಸಿನಿಮಾ ಚಿತ್ರಮಂದಿರದಲ್ಲಿ ಹಿಟ್ ಆಗುವ ಜೊತೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನಿಮಾ ಹಿಟ್ ಆದ ಬೆನ್ನಲ್ಲೆ ನಿರ್ದೇಶಕ ಈಗ ‘ಮಹಾರಾಣಿ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

‘ಮಹಾರಾಜ’ ಸಿನಿಮಾ ನಿರ್ದೇಶಕ ನಿತಿಲನ್ ಸ್ವಾಮಿನಾಥನ್, ಇದೀಗ ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾಗಿದ್ದಾರೆ. ಸಿನಿಮಾದಲ್ಲಿ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ ಎನ್ನಲಾಗುತ್ತಿದೆ. ನಯನತಾರಾ, ಕಮರ್ಶಿಯಲ್ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿರುವ ಜೊತೆಗೆ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ವರ್ಷಗಳಿಂದಲೂ ನಟಿಸಿಕೊಂಡು ಬರುತ್ತಿದ್ದಾರೆ. ಇದೀಗ ಮಹಿಳಾ ಪ್ರಧಾನ ಸಿನಿಮಾ ಆಗಿರುವ ‘ಮಹಾರಾಣಿ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:ಘೋಷಣೆಯಾಯ್ತು ಭಾರತದ ಅತ್ಯುತ್ತಮ ಹಾರರ್ ಸಿನಿಮಾದ ಎರಡನೇ ಭಾಗ

ನಯನತಾರಾ ಅವರೊಟ್ಟಿಗೆ ಕೆಲ ಸುತ್ತಿನ ಮಾತುಕತೆ ಮಾಡಿದ್ದು, ಅವರಿಗೆ ಕತೆ ಬಹಳ ಇಷ್ಟವಾಗಿದೆಯಂತೆ. ‘ಮಹಾರಾಣಿ’ ಸಿನಿಮಾನಲ್ಲಿ ನಾಯಕ ಪಾತ್ರ ಇರುವುದಿಲ್ಲ ಎನ್ನಲಾಗುತ್ತಿದೆ. ಸಿನಿಮಾವನ್ನು ಫ್ಯಾಷನ್ ಸ್ಟುಡಿಯೋಸ್ ಬ್ಯಾನರ್​ನ ಸುದಾನ್ ನಿರ್ಮಾಣ ಮಾಡಲಿದ್ದಾರೆ. ಕಳೆದ ಸಿನಿಮಾ ಹಿಟ್ ಆಗಿರುವ ಕಾರಣ ಈ ಸಿನಿಮಾಕ್ಕೆ ತುಸು ಹೆಚ್ಚಿನ ಬಜೆಟ್ ಮೀಸಲಿಡಲಾಗಿದೆ. ಒಳ್ಳೆಯ ತಂತ್ರಜ್ಞರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ನಿತಿಲನ್ ಸ್ವಾಮಿನಾಥನ್ ಅವರ ‘ಮಹಾರಾಜ’ ಸಿನಿಮಾ ದೊಡ್ಡ ಹಿಟ್ ಎನಿಸಿಕೊಂಡಿತು. ಎಲ್ಲ ವರ್ಗದ ಪ್ರೇಕ್ಷಕರಿಗೂ ಸಹ ಸಿನಿಮಾ ಇಷ್ಟವಾಯ್ತು. ಮಾತ್ರವಲ್ಲದೆ ಒಟಿಟಿಗೆ ಬಂದ ಮೇಲಂತೂ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಸಿನಿಮಾ ನೋಡಿ ಮೆಚ್ಚಿಕೊಂಡರು. ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ಹಣ ಗಳಿಸಿದ ಸಿನಿಮಾ, ಒಟಿಟಿಯಲ್ಲಿ ಅತಿ ಹೆಚ್ಚು ಸ್ಟ್ರೀಮ್ ಆದ ಸಿನಿಮಾ ಎಂದೆನಿಸಿಕೊಂಡಿತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ನಿಧಿ ಸಂಗ್ರಹ ಮಾಡೋದೇ ಈ ಅಜ್ಜನ ಕಾಯಕ; ಸರ್ಕಾರಕ್ಕೆ ನೀಡಿಲ್ಲ ಎಂದ ತೋಟಯ್ಯ
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ಕಾಡ್ಗಿಚ್ಚಿನಿಂದ ನಾಶವಾಯ್ತು ನಂದಾ ದೇವಿ ಅರಣ್ಯದ ಅಪರೂಪದ ಸಸ್ಯ ಸಂಪತ್ತು
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು