AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾರಾಜ’ ಹಿಟ್ ಆದ ಬೆನ್ನಲ್ಲೆ, ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾದ ನಿರ್ದೇಶಕ

Maharaja: ಬ್ಲಾಕ್ ಬಸ್ಟರ್ ಸಿನಿಮಾ ‘ಮಹಾರಾಜ’ ನಿರ್ದೇಶಕ ನಿಥಿಲನ್ ಸ್ವಾಮಿನಾಥನ್ ಇದೀಗ ಹೊಸ ಸಿನಿಮಾ ನಿರ್ದೇಶಿಸಲು ಮುಂದಾಗಿದ್ದಾರೆ. ಸಿನಿಮಾಕ್ಕೆ ‘ಮಹಾರಾಣಿ’ ಎಂದು ಹೆಸರಿಡಲಾಗಿದ್ದು, ನಯನತಾರಾ ನಾಯಕಿಯಂತೆ.

‘ಮಹಾರಾಜ’ ಹಿಟ್ ಆದ ಬೆನ್ನಲ್ಲೆ, ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾದ ನಿರ್ದೇಶಕ
ಮಂಜುನಾಥ ಸಿ.
|

Updated on: Sep 14, 2024 | 11:12 PM

Share

ಈ ವರ್ಷದ ಅತ್ಯುತ್ತಮ ತಮಿಳು ಸಿನಿಮಾ ಯಾವುದೆಂದರೆ ಸುಲಭವಾಗಿ ‘ಮಹಾರಾಜ’ ಎನ್ನಬಹುದು. ಅತ್ಯಂತ ಕಡಿಮೆ ಬಜೆಟ್​ನಲ್ಲಿ, ಸರಳವಾದ ಕತೆಯನ್ನೇ ಅದ್ಭುತವಾಗಿ ತೆರೆಗೆ ತಂದಿದ್ದಾರೆ ನಿರ್ದೇಶಕ ನಿತಿಲನ್ ಸ್ವಾಮಿನಾಥನ್. ವಿಜಯ್ ಸೇತುಪತಿ ನಾಯಕನಾಗಿ ನಟಿಸಿರುವ ಈ ಸಿನಿಮಾ ಬಹಳ ಸರಳವಾಗಿದ್ದರೂ ಸಹ ನಿರೂಪಣೆ, ಕತೆಯಲ್ಲಿ ಬರುವ ಅದ್ಭುತ ಟ್ವಿಸ್ಟ್ ಹಾಗೂ ಪ್ರಧಾನ ನಟರ ನಟನೆಯಿಂದಾಗಿ ಬಹಳ ಗಮನ ಸೆಳೆದಿತ್ತು. ಈ ಸಿನಿಮಾ ಚಿತ್ರಮಂದಿರದಲ್ಲಿ ಹಿಟ್ ಆಗುವ ಜೊತೆಗೆ ದೇಶದಾದ್ಯಂತ ಸಿನಿಮಾ ಪ್ರೇಮಿಗಳಿಂದ ಮೆಚ್ಚುಗೆಗೆ ಪಾತ್ರವಾಗಿತ್ತು. ಈ ಸಿನಿಮಾ ಹಿಟ್ ಆದ ಬೆನ್ನಲ್ಲೆ ನಿರ್ದೇಶಕ ಈಗ ‘ಮಹಾರಾಣಿ’ ಸಿನಿಮಾ ಪ್ರಾರಂಭ ಮಾಡಿದ್ದಾರೆ.

‘ಮಹಾರಾಜ’ ಸಿನಿಮಾ ನಿರ್ದೇಶಕ ನಿತಿಲನ್ ಸ್ವಾಮಿನಾಥನ್, ಇದೀಗ ‘ಮಹಾರಾಣಿ’ ಸಿನಿಮಾ ಮಾಡಲು ಮುಂದಾಗಿದ್ದಾರೆ. ಸಿನಿಮಾದಲ್ಲಿ ಲೇಡಿ ಸೂಪರ್ ಸ್ಟಾರ್ ನಯನತಾರಾ ನಾಯಕಿ ಎನ್ನಲಾಗುತ್ತಿದೆ. ನಯನತಾರಾ, ಕಮರ್ಶಿಯಲ್ ಸಿನಿಮಾಗಳಲ್ಲಿ ನಾಯಕಿಯಾಗಿ ನಟಿಸುತ್ತಿರುವ ಜೊತೆಗೆ ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ವರ್ಷಗಳಿಂದಲೂ ನಟಿಸಿಕೊಂಡು ಬರುತ್ತಿದ್ದಾರೆ. ಇದೀಗ ಮಹಿಳಾ ಪ್ರಧಾನ ಸಿನಿಮಾ ಆಗಿರುವ ‘ಮಹಾರಾಣಿ’ ಸಿನಿಮಾ ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ:ಘೋಷಣೆಯಾಯ್ತು ಭಾರತದ ಅತ್ಯುತ್ತಮ ಹಾರರ್ ಸಿನಿಮಾದ ಎರಡನೇ ಭಾಗ

ನಯನತಾರಾ ಅವರೊಟ್ಟಿಗೆ ಕೆಲ ಸುತ್ತಿನ ಮಾತುಕತೆ ಮಾಡಿದ್ದು, ಅವರಿಗೆ ಕತೆ ಬಹಳ ಇಷ್ಟವಾಗಿದೆಯಂತೆ. ‘ಮಹಾರಾಣಿ’ ಸಿನಿಮಾನಲ್ಲಿ ನಾಯಕ ಪಾತ್ರ ಇರುವುದಿಲ್ಲ ಎನ್ನಲಾಗುತ್ತಿದೆ. ಸಿನಿಮಾವನ್ನು ಫ್ಯಾಷನ್ ಸ್ಟುಡಿಯೋಸ್ ಬ್ಯಾನರ್​ನ ಸುದಾನ್ ನಿರ್ಮಾಣ ಮಾಡಲಿದ್ದಾರೆ. ಕಳೆದ ಸಿನಿಮಾ ಹಿಟ್ ಆಗಿರುವ ಕಾರಣ ಈ ಸಿನಿಮಾಕ್ಕೆ ತುಸು ಹೆಚ್ಚಿನ ಬಜೆಟ್ ಮೀಸಲಿಡಲಾಗಿದೆ. ಒಳ್ಳೆಯ ತಂತ್ರಜ್ಞರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ನಿತಿಲನ್ ಸ್ವಾಮಿನಾಥನ್ ಅವರ ‘ಮಹಾರಾಜ’ ಸಿನಿಮಾ ದೊಡ್ಡ ಹಿಟ್ ಎನಿಸಿಕೊಂಡಿತು. ಎಲ್ಲ ವರ್ಗದ ಪ್ರೇಕ್ಷಕರಿಗೂ ಸಹ ಸಿನಿಮಾ ಇಷ್ಟವಾಯ್ತು. ಮಾತ್ರವಲ್ಲದೆ ಒಟಿಟಿಗೆ ಬಂದ ಮೇಲಂತೂ ದೇಶದಾದ್ಯಂತ ಸಿನಿಮಾ ಪ್ರೇಮಿಗಳು ಸಿನಿಮಾ ನೋಡಿ ಮೆಚ್ಚಿಕೊಂಡರು. ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ಹಣ ಗಳಿಸಿದ ಸಿನಿಮಾ, ಒಟಿಟಿಯಲ್ಲಿ ಅತಿ ಹೆಚ್ಚು ಸ್ಟ್ರೀಮ್ ಆದ ಸಿನಿಮಾ ಎಂದೆನಿಸಿಕೊಂಡಿತು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಚೌಟ್ರಿವರೆಗೂ ಬಂದು ಮದುವೆ ಬೇಡ ಎಂದ ವಧು!
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಪೆಟ್ರೋಲ್​​ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ