AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ದಾಖಲೆ ಬರೆದ ಹೊಂಬಾಳೆಯ ‘ಮಹಾವತಾರ ನರಸಿಂಹ’

Mahavatar Narasimha: ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿರುವ ಅನಿಮೇಷನ್ ಸಿನಿಮಾ ‘ಮಹಾವತಾರ ನರಸಿಂಹ’ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆದಿದೆ. ಅತ್ಯಂತ ಕಡಿಮೆ ಬಜೆಟ್​ನಲ್ಲಿ ನಿರ್ಮಾಣಗೊಂಡ ಈ ಸಿನಿಮಾ 100 ಕೋಟಿ ಕಲೆಕ್ಷನ್ ಅನ್ನು ದಾಟಿದೆ. ಅಷ್ಟಕ್ಕೂ ಈ ಸಿನಿಮಾದ ಬಜೆಟ್ ಎಷ್ಟು? ಎಷ್ಟು ಪಟ್ಟು ಲಾಭವನ್ನು ಈ ಸಿನಿಮಾ ಮಾಡಿದೆ? ಇಲ್ಲಿದೆ ಮಾಹಿತಿ...

ಹೊಸ ದಾಖಲೆ ಬರೆದ ಹೊಂಬಾಳೆಯ ‘ಮಹಾವತಾರ ನರಸಿಂಹ’
Mahavat Narasimha
ಮಂಜುನಾಥ ಸಿ.
|

Updated on: Aug 05, 2025 | 4:34 PM

Share

‘ಕೆಜಿಎಫ್’, ‘ಕೆಜಿಎಫ್ 2’ ‘ಸಲಾರ್’ ಅಂಥಹಾ ಭಾರಿ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಮ್ಸ್ (Hombale Films) ಇತ್ತೀಚೆಗಷ್ಟೆ ಸಣ್ಣ ಬಜೆಟ್​ನ ಸಿನಿಮಾ ಒಂದನ್ನು ಪ್ರಸ್ತುತಪಡಿಸಿತು. ಸಿನಿಮಾದ ಹೆಸರು ‘ಮಹಾವತಾರ ನರಸಿಂಹ’. ಅನಿಮೇಷನ್ ಸಿನಿಮಾ ಆಗಿದ್ದ ಇದನ್ನು ಹೊಂಬಾಳೆ ಪ್ರಸ್ತುತ ಪಡಿಸುವ ಜೊತೆಗೆ ದೇಶದಾದ್ಯಂತ ಬಿಡುಗಡೆ ಸಹ ಮಾಡಿತು. ಕೆಲವು ದೊಡ್ಡ ಸಿನಿಮಾಗಳ ಜೊತೆಗೆ ಬಿಡುಗಡೆ ಆದ ಈ ಸಿನಿಮಾ ‘ಕಿಂಗ್ಡಮ್’, ‘ಸು ಫ್ರಂ ಸೋ’, ‘ಎಕ್ಕ’, ‘ಜೂನಿಯರ್’,‘ಎಫ್1’, ‘ಜುರಾಸಿಕ್ ವರ್ಲ್ಡ್’ ಎಲ್ಲ ಸಿನಿಮಾಗಳೊಟ್ಟಿಗೆ ಹೋರಾಡಿ ಬಾಕ್ಸ್ ಆಫೀಸ್​ನಲ್ಲಿ ಭಾರಿ ಜಯ ಗಳಿಸಿದೆ. ಅಷ್ಟು ಮಾತ್ರವೇ ಅಲ್ಲದೆ ಭಾರತದ ಬಾಕ್ಸ್ ಆಫೀಸ್​ನಲ್ಲಿ ಹೊಸ ದಾಖಲೆಯನ್ನೇ ಬರೆದಿದೆ.

‘ಮಹಾವತಾರ ನರಸಿಂಹ’ ಸಿನಿಮಾದ ಶಕ್ತಿಯನ್ನು ಅರಿತ ಹೊಂಬಾಳೆ ಆ ಸಿನಿಮಾವನ್ನು ಪ್ರಸ್ತುತ ಪಡಿಸಿ, ಪ್ರಚಾರ ಮಾಡಿಸಿ, ಸಿನಿಮಾವನ್ನು ಸರಿಯಾದ ಸಮಯಕ್ಕೆ, ಸರಿಯಾದ ಸ್ಥಳಗಳಲ್ಲಿ ಬಿಡುಗಡೆ ಮಾಡಿಸಿದ ಪರಿಣಾಮ ಇಂದು ಈ ಸಿನಿಮಾ 100 ಕೋಟಿ ಕ್ಲಬ್ ಸೇರಿಕೊಂಡಿದೆ! ಹೌದು, ‘ಮಹಾವತಾರ್ ನರಸಿಂಹ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಹಣ ಗಳಿಕೆ ಮಾಡಿದೆ. ಭಾರತೀಯ ಅನಿಮೇಷನ್ ಸಿನಿಮಾ ಒಂದು ಬಾಕ್ಸ್ ಆಫೀಸ್​​ನಲ್ಲಿ 100 ಕೋಟಿ ರೂಪಾಯಿ ಬಾಚಿರುವುದು ಇದೇ ಮೊದಲು. ಭಾರತದಲ್ಲಿ ಹಾಲಿವುಡ್​ನ ಅನಿಮೇಷನ್ ಸಿನಿಮಾಗಳು ಸಹ 100 ಕೋಟಿ ಬಾಚಿರಲಿಲ್ಲ.

‘ಮಹಾವತಾರ್ ನರಸಿಂಹ’ ಸಿನಿಮಾದ ನಿರ್ಮಾಣ ವೆಚ್ಚ ಒಂದು ಕೋಟಿಗೂ ಕಡಿಮೆ. ಕೆಲ ಮೂಲಗಳ ಪ್ರಕಾರ ಸಿನಿಮಾದ ನಿರ್ಮಾಣಕ್ಕೆ ಖರ್ಚಾಗಿರುವದು ಕೇವಲ 80 ಲಕ್ಷ ರೂಪಾಯಿಗಳು. ಆದರೆ ಸಿನಿಮಾದ ಪ್ರಚಾರ, ಬಿಡುಗಡೆ ಇನ್ನಿತರೆಗಳಿಗೆ ತುಸು ಹೆಚ್ಚು ಹಣ ಖರ್ಚು ಮಾಡಲಾಗಿದ್ದು, ಅದೆಲ್ಲದರ ಕಾರಣಕ್ಕೆ ಸಿನಿಮಾದ ಬಜೆಟ್ ಹೆಚ್ಚಿ 4 ಕೋಟಿ ವರೆಗೂ ತಲುಪಿದೆಯಂತೆ. ನಾಲ್ಕು ಕೋಟಿ ಬಜೆಟ್​ನ ಈ ಸಿನಿಮಾ ಈಗ 100 ಕೋಟಿ ಗಳಿಸಿದೆ. ಅಲ್ಲಿಗೆ ಸುಮಾರು 25 ಪಟ್ಟು ಲಾಭವನ್ನು ಈ ಸಿನಿಮಾ ಮಾಡಿದೆ.

ಇದನ್ನೂ ಓದಿ:ಹೊಂಬಾಳೆಗೆ ಮತ್ತೊಂದು ಯಶಸ್ಸು, ‘ಮಹಾವತಾರ್’ ಗಳಿಸಿದ್ದೆಷ್ಟು?

ಕೆಲ ವಾರಗಳ ಹಿಂದೆ ಸಿನಿಮಾದ ಟ್ರೈಲರ್ ಬಿಡುಗಡೆ ಆದಾಗ ಅನಿಮೇಷನ್​ನ ಗುಣಮಟ್ಟದ ಬಗ್ಗೆ ವಿಮರ್ಶೆಗಳು ವ್ಯಕ್ತವಾಗಿದ್ದವು. ಚೋಟಾ ಭೀಮ್​ಗಿಂತಲೂ ಕಳಪೆಯಾದ ಅನಿಮೇಷನ್ ಗುಣಮಟ್ಟವನ್ನು ಈ ಸಿನಿಮಾ ಒಳಗೊಂಡಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಆದರೆ ಕತೆ ಮತ್ತು ನಿರೂಪಣಾ ಶೈಲಿಯ ಕಾರಣಕ್ಕೆ ಸಿನಿಮಾ ಇದೀಗ ದೊಡ್ಡ ಯಶಸ್ಸು ಗಳಿಸಿದೆ. ವಿಶೇಷವಾಗಿ ಮಕ್ಕಳಿಗೆ ಈ ಸಿನಿಮಾ ಬಲುವಾಗಿ ಇಷ್ಟವಾಗಿದೆ. ಸಿನಿಮಾದ ಯಶಸ್ಸಿನ ಬಳಿಕ ಮಾತನಾಡಿರುವ ನಿರ್ದೇಶಕ ಅಶ್ವಿಕ್‌ ಕುಮಾರ್‌ ಮತ್ತು ನಿರ್ಮಾಪಕರಾದ ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ಮುಂದಿನ ಸಿನಿಮಾಗಳಲ್ಲಿ ಗುಣಮಟ್ಟದ ಬಗ್ಗೆ ವಿಶೇಷ ಗಮನ ಹರಿಸಲಾಗುವುದು ಎಂದಿದ್ದಾರೆ.

‘ಮಹಾವತಾರ್ ಯೂನಿವರ್ಸ್’

“ಮಹಾವತಾರ್ ನರಸಿಂಹ” ಸಿನಿಮಾ ಭಗವಾನ್ ವಿಷ್ಣುವಿನ ದಶಾವತಾರಗಳ ಆಧಾರದ ಮೇಲೆ ಬರಲಿರುವ ಸಿನಿಮಾ ಆಗಿರಲಿದೆ. ಮುಂದಿನ ಹತ್ತು ವರ್ಷಗಳಲ್ಲಿ ‘ಮಹಾವತಾರ್’ ಯೂನಿವರ್ಸ್​ನ ಏಳು ಸಿನಿಮಾಗಳು ತೆರೆಗೆ ಬರಲಿದೆ. ಸಿನಿಮಾಗಳ ಟೈಂಲೈನ್ ಹೀಗಿದೆ. “ಮಹಾವತಾರ್ ನರಸಿಂಹ” (2025), “ಮಹಾವತಾರ್ ಪರಶುರಾಮ” (2027), “ಮಹಾವತಾರ್ ರಘುನಂದನ” (2029), “ಮಹಾವತಾರ್ ಧ್ವಾಕಾಧೀಶ್” (2031), “ಮಹಾವತಾರ್ ಗೋಕುಲನಂದ” (2033), “ಮಹಾವತಾರ್ ಕಲ್ಕಿ ಭಾಗ 1” (2035), “ಮಹಾವತಾರ್ ಕಲ್ಕಿ ಭಾಗ 2” (2037) ಮೂಡಿಬರಲಿವೆ. ಜುಲೈ 25ರಂದು “ಮಹಾವತಾರ್‌ ನರಸಿಂಹ” ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!