AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆಗೆ ಮತ್ತೊಂದು ಯಶಸ್ಸು, ‘ಮಹಾವತಾರ್’ ಗಳಿಸಿದ್ದೆಷ್ಟು?

Mahavatar Narasimha movie: ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿರುವ ‘ಮಹಾವತಾರ್: ನರಸಿಂಹ’ ಅನಿಮೇಷನ್ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿತ್ತು. ‘ಸು ಫ್ರಂ ಸೋ’ ಅಬ್ಬರದಲ್ಲಿ ಈ ಸಿನಿಮಾದ ಸುದ್ದಿಯೇ ಇರಲಿಲ್ಲ. ಹಾಗೆಂದು ಸಿನಿಮಾ ಫ್ಲಾಪ್ ಆಗಿಲ್ಲ ಬದಲಿಗೆ ಒಳ್ಳೆಯ ಗಳಿಕೆಯನ್ನೇ ಮಾಡುತ್ತಿದೆ. ಬಿಡುಗಡೆ ಆದ ಐದು ದಿನಗಳಲ್ಲಿ ಈ ಸಿನಿಮಾ ಗಳಿಸಿದ್ದೆಷ್ಟು? ಇಲ್ಲಿದೆ ಮಾಹಿತಿ...

ಹೊಂಬಾಳೆಗೆ ಮತ್ತೊಂದು ಯಶಸ್ಸು, ‘ಮಹಾವತಾರ್’ ಗಳಿಸಿದ್ದೆಷ್ಟು?
Mahavatar Narasimha
ಮಂಜುನಾಥ ಸಿ.
|

Updated on: Jul 30, 2025 | 7:44 PM

Share

ಕರ್ನಾಟಕದ ಹೆಮ್ಮೆಯ ಸಿನಿಮಾ ನಿರ್ಮಾಣ ಮತ್ತು ವಿತರಣಾ ಸಂಸ್ಥೆ ಹೊಂಬಾಳೆ ಫಿಲಮ್ಸ್ (Hombale Films) ಪ್ರಸ್ತುತ ಪಡಿಸಿರುವ ಅನಿಮೇಟೆಡ್ ಸಿನಿಮಾ ‘ಮಹಾವಾತಾರ್: ನರಸಿಂಹ’ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿದೆ. ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆ ಆದ ದಿನದಂದೇ ಬಿಡುಗಡೆ ಆದ ‘ಮಹಾವಾತಾರ್’ ಸಿನಿಮಾ ಭರ್ಜರಿ ಕಲೆಕ್ಷನ್ ಅನ್ನೇ ಮಾಡುತ್ತಿದೆ. ‘ಸು ಫ್ರಂ ಸೋ’ನ ಅಬ್ಬರದಲ್ಲಿ ‘ಮಹಾವಾತಾರ್: ನರಸಿಂಹ’ ಗೆಲುವಿನ ಸುದ್ದಿ ಕಳೆದು ಹೋಗಿದೆ ಅಷ್ಟೆ.

‘ಮಹಾವತಾರ್: ನರಸಿಂಹ’ ಸಿನಿಮಾ ಬಿಡುಗಡೆ ಆದ ಐದು ದಿನದಲ್ಲಿ 30 ಕೋಟಿ ರೂಪಾಯಿ ಗಳಿಕೆ ಮಾಡಿದೆ. ನಿನ್ನೆಗೆ ಸಿನಿಮಾದ ಗಳಿಕೆ 26.43 ಕೋಟಿ ಇತ್ತು. ಇಂದು ಖಾತೆಗೆ ಮೂರು ಕೋಟಿಗೂ ಹೆಚ್ಚು ಮೊತ್ತ ಸೇರಿಸಿಕೊಂಡಿದ್ದು ಸಿನಿಮಾದ ಗಳಿಕೆ ಹೆಚ್ಚಿ 30 ಕೋಟಿ ದಾಟಿದೆ. ಯಾವುದೇ ಸ್ಟಾರ್​ಗಳಲ್ಲಿದೆ, ಅಬ್ಬರದ ಪ್ರಚಾರಗಳಿಲ್ಲದೆಯೂ ಸಹ ಈ ಅನಿಮೇಷನ್ ಸಿನಿಮಾ 30 ಕೋಟಿ ಹಣ ಗಳಿಸಿರುವುದು ಕಡಿಮೆ ಸಾಧನೆಯಲ್ಲ.

ಅನಿಮೇಷನ್ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ವಿಷ್ಣುವಿನ ನರಸಿಂಹ ಅವತಾರದ ಕತೆಯನ್ನು ಅನಿಮೇಷನ್ ಮೂಲಕ ಹೇಳಲಾಗಿದೆ. ‘ಮಹಾವತಾರ: ನರಸಿಂಹ’ ಸಿನಿಮಾವನ್ನು ಅಶ್ವಿಕ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ನಿರ್ಮಾಣ ಮಾಡಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಗಳಿಗೆ ಡಬ್ ಆಗಿ ಏಕಕಾಲದಲ್ಲಿ ದಕ್ಷಿಣ ಮತ್ತು ಉತ್ತರ ಭಾರತದಲ್ಲಿ ಬಿಡುಗಡೆ ಆಗಿದೆ.

ಇದನ್ನೂ ಓದಿ:ಹೊಂಬಾಳೆ ಫಿಲಮ್ಸ್​ನ ‘ಮಹಾವತಾರ: ನರಸಿಂಹ’ ಟ್ರೈಲರ್ ಬಿಡುಗಡೆ, ಹೇಗಿದೆ?

ಸಿನಿಮಾ ಅನ್ನು ಹೊಂಬಾಳೆ ಫಿಲಮ್ಸ್ ಪ್ರೆಸೆಂಟ್ ಮಾಡಿದ್ದು, ಸಿನಿಮಾದ ವಿತರಣೆಯನ್ನೂ ಹೊಂಬಾಳೆಯೇ ಮಾಡಿದೆ ಎನ್ನಲಾಗುತ್ತಿದೆ. “ಮಹಾವತಾರ್ ನರಸಿಂಹ” ಸಿನಿಮಾ ಭಗವಾನ್ ವಿಷ್ಣುವಿನ ದಶಾವತಾರಗಳ ಆಧಾರದ ಮೇಲೆ ಬರಲಿರುವ ಸಿನಿಮಾ ಆಗಿರಲಿದೆ. ಮುಂದಿನ ಹತ್ತು ವರ್ಷಗಳಲ್ಲಿ ‘ಮಹಾವತಾರ್’ ಯೂನಿವರ್ಸ್​ನ ಏಳು ಸಿನಿಮಾಗಳು ತೆರೆಗೆ ಬರಲಿದೆ. ಸಿನಿಮಾಗಳ ಟೈಂಲೈನ್ ಹೀಗಿದೆ. “ಮಹಾವತಾರ್ ನರಸಿಂಹ” (2025), “ಮಹಾವತಾರ್ ಪರಶುರಾಮ” (2027), “ಮಹಾವತಾರ್ ರಘುನಂದನ” (2029), “ಮಹಾವತಾರ್ ಧ್ವಾಕಾಧೀಶ್” (2031), “ಮಹಾವತಾರ್ ಗೋಕುಲನಂದ” (2033), “ಮಹಾವತಾರ್ ಕಲ್ಕಿ ಭಾಗ 1” (2035), “ಮಹಾವತಾರ್ ಕಲ್ಕಿ ಭಾಗ 2” (2037) ಮೂಡಿಬರಲಿವೆ. ಜುಲೈ 25ರಂದು “ಮಹಾವತಾರ್‌ ನರಸಿಂಹ” ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!