AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆಗೆ ಮತ್ತೊಂದು ಯಶಸ್ಸು, ‘ಮಹಾವತಾರ್’ ಗಳಿಸಿದ್ದೆಷ್ಟು?

Mahavatar Narasimha movie: ಹೊಂಬಾಳೆ ಫಿಲಮ್ಸ್ ಪ್ರಸ್ತುತ ಪಡಿಸಿರುವ ‘ಮಹಾವತಾರ್: ನರಸಿಂಹ’ ಅನಿಮೇಷನ್ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿತ್ತು. ‘ಸು ಫ್ರಂ ಸೋ’ ಅಬ್ಬರದಲ್ಲಿ ಈ ಸಿನಿಮಾದ ಸುದ್ದಿಯೇ ಇರಲಿಲ್ಲ. ಹಾಗೆಂದು ಸಿನಿಮಾ ಫ್ಲಾಪ್ ಆಗಿಲ್ಲ ಬದಲಿಗೆ ಒಳ್ಳೆಯ ಗಳಿಕೆಯನ್ನೇ ಮಾಡುತ್ತಿದೆ. ಬಿಡುಗಡೆ ಆದ ಐದು ದಿನಗಳಲ್ಲಿ ಈ ಸಿನಿಮಾ ಗಳಿಸಿದ್ದೆಷ್ಟು? ಇಲ್ಲಿದೆ ಮಾಹಿತಿ...

ಹೊಂಬಾಳೆಗೆ ಮತ್ತೊಂದು ಯಶಸ್ಸು, ‘ಮಹಾವತಾರ್’ ಗಳಿಸಿದ್ದೆಷ್ಟು?
Mahavatar Narasimha
ಮಂಜುನಾಥ ಸಿ.
|

Updated on: Jul 30, 2025 | 7:44 PM

Share

ಕರ್ನಾಟಕದ ಹೆಮ್ಮೆಯ ಸಿನಿಮಾ ನಿರ್ಮಾಣ ಮತ್ತು ವಿತರಣಾ ಸಂಸ್ಥೆ ಹೊಂಬಾಳೆ ಫಿಲಮ್ಸ್ (Hombale Films) ಪ್ರಸ್ತುತ ಪಡಿಸಿರುವ ಅನಿಮೇಟೆಡ್ ಸಿನಿಮಾ ‘ಮಹಾವಾತಾರ್: ನರಸಿಂಹ’ ಸಿನಿಮಾ ಕಳೆದ ಶುಕ್ರವಾರ ಬಿಡುಗಡೆ ಆಗಿದೆ. ‘ಸು ಫ್ರಂ ಸೋ’ ಸಿನಿಮಾ ಬಿಡುಗಡೆ ಆದ ದಿನದಂದೇ ಬಿಡುಗಡೆ ಆದ ‘ಮಹಾವಾತಾರ್’ ಸಿನಿಮಾ ಭರ್ಜರಿ ಕಲೆಕ್ಷನ್ ಅನ್ನೇ ಮಾಡುತ್ತಿದೆ. ‘ಸು ಫ್ರಂ ಸೋ’ನ ಅಬ್ಬರದಲ್ಲಿ ‘ಮಹಾವಾತಾರ್: ನರಸಿಂಹ’ ಗೆಲುವಿನ ಸುದ್ದಿ ಕಳೆದು ಹೋಗಿದೆ ಅಷ್ಟೆ.

‘ಮಹಾವತಾರ್: ನರಸಿಂಹ’ ಸಿನಿಮಾ ಬಿಡುಗಡೆ ಆದ ಐದು ದಿನದಲ್ಲಿ 30 ಕೋಟಿ ರೂಪಾಯಿ ಗಳಿಕೆ ಮಾಡಿದೆ. ನಿನ್ನೆಗೆ ಸಿನಿಮಾದ ಗಳಿಕೆ 26.43 ಕೋಟಿ ಇತ್ತು. ಇಂದು ಖಾತೆಗೆ ಮೂರು ಕೋಟಿಗೂ ಹೆಚ್ಚು ಮೊತ್ತ ಸೇರಿಸಿಕೊಂಡಿದ್ದು ಸಿನಿಮಾದ ಗಳಿಕೆ ಹೆಚ್ಚಿ 30 ಕೋಟಿ ದಾಟಿದೆ. ಯಾವುದೇ ಸ್ಟಾರ್​ಗಳಲ್ಲಿದೆ, ಅಬ್ಬರದ ಪ್ರಚಾರಗಳಿಲ್ಲದೆಯೂ ಸಹ ಈ ಅನಿಮೇಷನ್ ಸಿನಿಮಾ 30 ಕೋಟಿ ಹಣ ಗಳಿಸಿರುವುದು ಕಡಿಮೆ ಸಾಧನೆಯಲ್ಲ.

ಅನಿಮೇಷನ್ ಸಿನಿಮಾ ಇದಾಗಿದ್ದು, ಸಿನಿಮಾನಲ್ಲಿ ವಿಷ್ಣುವಿನ ನರಸಿಂಹ ಅವತಾರದ ಕತೆಯನ್ನು ಅನಿಮೇಷನ್ ಮೂಲಕ ಹೇಳಲಾಗಿದೆ. ‘ಮಹಾವತಾರ: ನರಸಿಂಹ’ ಸಿನಿಮಾವನ್ನು ಅಶ್ವಿಕ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ಶಿಲ್ಪಾ ಧವನ್, ಕುಶಾಲ್ ದೇಸಾಯಿ, ಚೈತನ್ಯ ದೇಸಾಯಿ ನಿರ್ಮಾಣ ಮಾಡಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಗಳಿಗೆ ಡಬ್ ಆಗಿ ಏಕಕಾಲದಲ್ಲಿ ದಕ್ಷಿಣ ಮತ್ತು ಉತ್ತರ ಭಾರತದಲ್ಲಿ ಬಿಡುಗಡೆ ಆಗಿದೆ.

ಇದನ್ನೂ ಓದಿ:ಹೊಂಬಾಳೆ ಫಿಲಮ್ಸ್​ನ ‘ಮಹಾವತಾರ: ನರಸಿಂಹ’ ಟ್ರೈಲರ್ ಬಿಡುಗಡೆ, ಹೇಗಿದೆ?

ಸಿನಿಮಾ ಅನ್ನು ಹೊಂಬಾಳೆ ಫಿಲಮ್ಸ್ ಪ್ರೆಸೆಂಟ್ ಮಾಡಿದ್ದು, ಸಿನಿಮಾದ ವಿತರಣೆಯನ್ನೂ ಹೊಂಬಾಳೆಯೇ ಮಾಡಿದೆ ಎನ್ನಲಾಗುತ್ತಿದೆ. “ಮಹಾವತಾರ್ ನರಸಿಂಹ” ಸಿನಿಮಾ ಭಗವಾನ್ ವಿಷ್ಣುವಿನ ದಶಾವತಾರಗಳ ಆಧಾರದ ಮೇಲೆ ಬರಲಿರುವ ಸಿನಿಮಾ ಆಗಿರಲಿದೆ. ಮುಂದಿನ ಹತ್ತು ವರ್ಷಗಳಲ್ಲಿ ‘ಮಹಾವತಾರ್’ ಯೂನಿವರ್ಸ್​ನ ಏಳು ಸಿನಿಮಾಗಳು ತೆರೆಗೆ ಬರಲಿದೆ. ಸಿನಿಮಾಗಳ ಟೈಂಲೈನ್ ಹೀಗಿದೆ. “ಮಹಾವತಾರ್ ನರಸಿಂಹ” (2025), “ಮಹಾವತಾರ್ ಪರಶುರಾಮ” (2027), “ಮಹಾವತಾರ್ ರಘುನಂದನ” (2029), “ಮಹಾವತಾರ್ ಧ್ವಾಕಾಧೀಶ್” (2031), “ಮಹಾವತಾರ್ ಗೋಕುಲನಂದ” (2033), “ಮಹಾವತಾರ್ ಕಲ್ಕಿ ಭಾಗ 1” (2035), “ಮಹಾವತಾರ್ ಕಲ್ಕಿ ಭಾಗ 2” (2037) ಮೂಡಿಬರಲಿವೆ. ಜುಲೈ 25ರಂದು “ಮಹಾವತಾರ್‌ ನರಸಿಂಹ” ಸಿನಿಮಾ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್