AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಲೆಂಟ್​ ಆಗಿ ಸೆಟ್ಟೇರಿದ ಮಹೇಶ್​ ಬಾಬು ಹೊಸ ಸಿನಿಮಾ; ಫ್ಯಾನ್ಸ್​ಗೆ ಬೇಸರ ತಂದ​ ವಿಚಾರ

ಇಂದು (ಫೆಬ್ರವರಿ 3) ಮಹೇಶ್​ ಬಾಬು ಹೊಸ ಸಿನಿಮಾ ಸದ್ದಿಲ್ಲದೆ ಸೆಟ್ಟೇರಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಅವರು ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ.

ಸೈಲೆಂಟ್​ ಆಗಿ ಸೆಟ್ಟೇರಿದ ಮಹೇಶ್​ ಬಾಬು ಹೊಸ ಸಿನಿಮಾ; ಫ್ಯಾನ್ಸ್​ಗೆ ಬೇಸರ ತಂದ​ ವಿಚಾರ
TV9 Web
| Edited By: |

Updated on: Feb 03, 2022 | 5:45 PM

Share

ಮಹೇಶ್​ ಬಾಬುಗೆ (Mahesh Babu) ಟಾಲಿವುಡ್​ನಲ್ಲಿ ದೊಡ್ಡ ಬೇಡಿಕೆ ಇದೆ. ಹೆಚ್ಚು ಅನುಭವಿ ನಿರ್ದೇಶಕರ ಜತೆ ಕೆಲಸ ಮಾಡೋಕೆ ಅವರು ಆದ್ಯತೆ ನೀಡುತ್ತಾರೆ. ಹೊಸಬರಿಗೆ ಆದ್ಯತೆ ನೀಡಿದರೆ ಸ್ಟಾರ್​ ನಟನ ಚಿತ್ರವನ್ನು ಹ್ಯಾಂಡಲ್​ ಮಾಡುವುದು ಕಷ್ಟವಾಗಬಹುದು. ಹೀಗಾಗಿ, ಹಿಟ್​ ಚಿತ್ರಗಳನ್ನು ನೀಡಿದ ಡೈರೆಕ್ಟರ್​ಗಳ ಜತೆ ಕೆಲಸ ಮಾಡೋಕೆ ಮಹೇಶ್​ ಬಾಬು ಹೆಚ್ಚು ಆಸಕ್ತಿ ತೋರುತ್ತಾರೆ. ಈ ಬಾರಿ ಅವರು ಖ್ಯಾತ ನಿರ್ದೇಶಕ ಎಸ್​.ಎಸ್​. ರಾಜಮೌಳಿ (SS Rajamouli)ಜತೆ ಕೈ ಜೋಡಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಈ ವಿಚಾರ ಈಗ ಸುಳ್ಳಾಗಿದೆ. ಅವರ ಹೊಸ ಸಿನಿಮಾ ಸದ್ದಿಲ್ಲದೆ (Mahesh Babu New Movie) ಸೆಟ್ಟೇರಿದೆ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ಖುಷಿಪಡಬೇಕೋ ಅಥವಾ ಬೇಸರ ಮಾಡಿಕೊಳ್ಳಬೇಕೋ ಎಂಬುದು ತಿಳಿಯುತ್ತಿಲ್ಲ.

ರಾಜಮೌಳಿ ಜತೆ ಮಹೇಶ್​ ಬಾಬು ಕೈ ಜೋಡಿಸುತ್ತಿದ್ದಾರೆ ಎನ್ನುವ ಮಾತು ಈ ಮೊದಲಿನಿಂದಲೂ ಚರ್ಚೆಯಲ್ಲಿರುವ ವಿಚಾರ ಆಗಿತ್ತು. ಮಹೇಶ್​ ಬಾಬು ‘ಸರ್ಕಾರು ವಾರಿ ಪಾಟ’ ಸಿನಿಮಾದ ಕೊನೆಯ ಹಂತದ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರ ಮೇ 12ರಂದು ತೆರೆಗೆ ಬರುತ್ತಿದೆ. ಇನ್ನು, ರಾಜಮೌಳಿ ಅವರು ‘ಆರ್​ಆರ್​ಆರ್​’ ಚಿತ್ರವನ್ನು ಮಾರ್ಚ್​ 25ರಂದು ತೆರೆಗೆ ತರುತ್ತಿದ್ದಾರೆ. ಇಬ್ಬರೂ ಮುಂದಿನ ಚಿತ್ರಕ್ಕೆ ಒಂದಾಗಲಿದ್ದಾರೆ ಎನ್ನುವ ಸುದ್ದಿ ಟಾಲಿವುಡ್​ ಅಂಗಳದಲ್ಲಿ ಜೋರಾಗಿತ್ತು. ಆದರೆ, ಅದು ಈಗ ಹುಸಿಯಾಗಿದೆ.

ಇಂದು (ಫೆಬ್ರವರಿ 3) ಮಹೇಶ್​ ಬಾಬು ಹೊಸ ಸಿನಿಮಾ ಸದ್ದಿಲ್ಲದೆ ಸೆಟ್ಟೇರಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಅವರು ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಅತಡು’ ಹಾಗೂ ‘ಖಲೇಜ’ ಚಿತ್ರದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈಗ 12 ವರ್ಷಗಳ ಬಳಿಕ ಇಬ್ಬರೂ ಮೂರನೇ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ. ಈ ವಿಚಾರ ಅಭಿಮಾನಿಗಳಿಗೆ ಖುಷಿ ನೀಡಿದೆ. ಆದರೆ, ರಾಜಮೌಳಿ ಜತೆಗಿನ ಸಿನಿಮಾ ಸೆಟ್ಟೇರಿಲ್ಲವಲ್ಲ ಎನ್ನುವ ಬೇಸರವೂ ಕಾಡಿದೆ. ಹಾರಿಕಾ ಹಾಸಿನಿ ಕ್ರಿಯೇಷನ್ಸ್​ ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ.

ಈ ಚಿತ್ರದ ನಾಯಕಿ ಯಾರು ಎನ್ನುವ ಬಗ್ಗೆ ಕೆಲ ದಿನಗಳ ಹಿಂದೆ ಚರ್ಚೆ ನಡೆದಿತ್ತು. ಟಾಲಿವುಡ್​ನಲ್ಲಿ ಸಾಕಷ್ಟು ಬೇಡಿಕೆ ಸೃಷ್ಟಿಸಿಕೊಂಡಿರುವ ಸಮಂತಾ ಅವರು ಈ ಚಿತ್ರಕ್ಕೆ ನಾಯಕಿ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ, ಚಿತ್ರತಂಡ ಪಾತ್ರ ವರ್ಗವನ್ನು ಇನ್ನೂ ಅಧಿಕೃತ ಮಾಡಿಲ್ಲ. ಶೀಘ್ರದಲ್ಲೇ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಆ ಬಳಿಕ ಪಾತ್ರವರ್ಗದ ಬಗ್ಗೆ ಅಪ್​ಡೇಟ್​ ಸಿಗಲಿದೆ.

‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ನಟಿಸುತ್ತಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ 2022ರ ಸಂಕ್ರಾಂತಿ ಹಬ್ಬಕ್ಕೆ ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಬಿಡುಗಡೆ ಆಗಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾದ ಬಿಡುಗಡೆ ದಿನಾಂಕವನ್ನು ಏಪ್ರಿಲ್​ 1ಕ್ಕೆ ಮುಂದೂಡಲಾಯಿತು. ಈಗ ‘ಸರ್ಕಾರು ವಾರಿ ಪಾಟ’ ಸಿನಿಮಾವನ್ನು ಮೇ 12ರಂದು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ಇತ್ತೀಚೆಗೆ ಘೋಷಣೆ ಆಗಿತ್ತು.

ಇದನ್ನೂ ಓದಿ: ಬಿಡುಗಡೆ ಆಗ್ತಿದೆ ಸಾಲುಸಾಲು ಸ್ಟಾರ್ ಚಿತ್ರಗಳು; ಇಲ್ಲಿದೆ ಪ್ರಮುಖ 9 ಸಿನಿಮಾಗಳ ರಿಲೀಸ್ ದಿನಾಂಕ

ಮಹೇಶ್​ ಬಾಬು ಸ್ಥಾನ ಆಕ್ರಮಿಸಿಕೊಂಡ ಚಿರಂಜೀವಿ; ‘ಆಚಾರ್ಯ’ ಹೊಸ ರಿಲೀಸ್​ ದಿನಾಂಕ ಪ್ರಕಟ

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್