ಮಹೇಶ್​ ಬಾಬು-ರಾಜಮೌಳಿ ಹೊಸ ಚಿತ್ರದಲ್ಲಿ ‘ಅವನೇ ಶ್ರೀಮನ್ನಾರಾಯಣ’ ಕಥೆ; ಏನಿದು ಹೊಸ ಗಾಸಿಪ್​?

ಪ್ರಸ್ತುತ ‘ಆರ್​ಆರ್​ಆರ್’ ಚಿತ್ರದ ಕೆಲಸಗಳಲ್ಲಿ ರಾಜಮೌಳಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಮಹೇಶ್​ ಬಾಬು ಜೊತೆಗಿನ ಚಿತ್ರದ ಕಥೆಯ ಬಗ್ಗೆ ಗುಸುಗುಸು ಕೇಳಿಬಂದಿದೆ.

ಮಹೇಶ್​ ಬಾಬು-ರಾಜಮೌಳಿ ಹೊಸ ಚಿತ್ರದಲ್ಲಿ ‘ಅವನೇ ಶ್ರೀಮನ್ನಾರಾಯಣ’ ಕಥೆ; ಏನಿದು ಹೊಸ ಗಾಸಿಪ್​?
ರಾಜಮೌಳಿ, ರಕ್ಷಿತ್​ ಶೆಟ್ಟಿ, ಮಹೇಶ್​ ಬಾಬು
Follow us
| Updated By: ಮದನ್​ ಕುಮಾರ್​

Updated on:Jun 06, 2021 | 10:28 AM

ಸ್ಟಾರ್​ ನಿರ್ದೇಶಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿದರೂ ಅಭಿಮಾನಿಗಳ ನಿರೀಕ್ಷೆ ಗಗನಕ್ಕೇರುತ್ತದೆ. ಈ ಹಿಂದೆ ಅವರು ಅಂಥ ಅದ್ದೂರಿ ಸಿನಿಮಾಗಳನ್ನು ನೀಡಿದ್ದೇ ಇದಕ್ಕೆ ಕಾರಣ. ಇನ್ನು, ಅವರ ಸಿನಿಮಾ ಅನೌನ್ಸ್​ ಆದ ದಿನದಿಂದಲೇ ಹೊಸ ಹೊಸ ಗಾಸಿಪ್​ಗಳು ಕೂಡ ಕೇಳಿಬರಲು ಆರಂಭಿಸುತ್ತವೆ. ಈಗ ಅವರು ‘ಪ್ರಿನ್ಸ್​’ ಮಹೇಶ್​ ಬಾಬು ಜೊತೆ ಮಾಡಲಿರುವ ಚಿತ್ರದ ಬಗ್ಗೆಯೂ ಅಂಥದ್ದೇ ಒಂದು ಮಾತು ಕೇಳಿಬರುತ್ತಿದೆ. ಈ ಚಿತ್ರದ ಕಥೆಗೂ ಕನ್ನಡದ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಕಥೆಗೂ ಹೋಲಿಕೆ ಇದೆ ಎನ್ನಲಾಗುತ್ತಿದೆ.

ಮಹೇಶ್​ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​ನಲ್ಲಿ ಸಿನಿಮಾ ಆಗುತ್ತಿರುವುದೇನೋ ನಿಜ. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​ ಕಥೆ ಬರೆಯಲು ಆರಂಭಿಸಿದ್ದಾರೆ ಎಂಬುದು ಬಿಟ್ಟರೆ ಸದ್ಯಕ್ಕಂತೂ ಬೇರೆ ಯಾವ ಕೆಲಸಗಳೂ ಶುರು ಆಗಿಲ್ಲ. ಪ್ರಸ್ತುತ ‘ಆರ್​ಆರ್​ಆರ್’ ಚಿತ್ರದ ಕೆಲಸಗಳಲ್ಲಿ ರಾಜಮೌಳಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಮಹೇಶ್​ ಬಾಬು ಜೊತೆಗಿನ ಚಿತ್ರದ ಕಥೆಯ ಬಗ್ಗೆ ಗುಸುಗುಸು ಕೇಳಿಬಂದಿದೆ. ಮೂಲಗಳ ಪ್ರಕಾರ, ಕಾಡಿನೊಳಗೆ ಇರುವ ನಿಧಿ ಅಥವಾ ಖಜಾನೆ ಹುಡುಕುವ ಕಥೆಯನ್ನು ಈ ಸಿನಿಮಾ ಹೊಂದಿರಲಿದೆಯಂತೆ. 2019ರಲ್ಲಿ ರಕ್ಷಿತ್​ ಶೆಟ್ಟಿ ನಟಿಸಿದ್ದ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದಲ್ಲಿಯೂ ಇಂಥದ್ದೇ ಕಥೆ ಇತ್ತು. ಅದಕ್ಕೂ ಇದಕ್ಕೂ ಏನಾದರೂ ಸಂಬಂಧ ಇರಬಹುದೇ ಎಂದು ತಲೆ ಕೆರೆದುಕೊಳ್ಳುತ್ತಿದ್ದಾರೆ ಸಿನಿಪ್ರಿಯರು.

ಆದರೆ ಈ ಗಾಸಿಪ್​ಗಳನ್ನು ನಿರ್ಮಾಪಕ ಕೆಎಲ್​ ನಾರಾಯಣ ತಳ್ಳಿ ಹಾಕಿದ್ದಾರೆ. ‘ಕಥೆಗೆ ಸಂಬಂಧಿಸಿದಂತೆ ರಾಜಮೌಳಿ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಈ ರೀತಿಯ ಗಾಸಿಪ್​ಗಳು ಎಲ್ಲಿಂದ ಶುರು ಆಗುತ್ತವೋ ಗೊತ್ತಿಲ್ಲ’ ಎಂದು ಅವರು ಹೇಳಿದ್ದಾರೆ.

ಇನ್ನು, ಬಜೆಟ್​ ವಿಚಾರದಲ್ಲಿಯೂ ಈ ಸಿನಿಮಾ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಆರ್​ಆರ್​ಆರ್​ ಚಿತ್ರಕ್ಕಿಂತಲೂ ಹೆಚ್ಚಿನ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ ಎನ್ನಲಾಗುತ್ತಿದೆ. ಹಾಲಿವುಡ್​ ಪ್ರೊಡಕ್ಷನ್​ ಹೌಸ್​ ಜೊತೆ ರಾಜಮೌಳಿ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಆದರೆ ಅವುಗಳ ಬಗ್ಗೆ ರಾಜಮೌಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸದ್ಯ ರಾಜಮೌಳಿ ಅವರ ಗಮನವೆಲ್ಲ ‘ಆರ್​ಆರ್​ಆರ್​’ ಸಿನಿಮಾ ಮೇಲಿದೆ. ಲಾಕ್​ಡೌನ್​ ಕಾರಣದಿಂದಾಗಿ ಆ ಚಿತ್ರದ ಕೆಲಸಗಳು ಸ್ಥಗಿತಗೊಂಡಿವೆ. ಜ್ಯೂ. ಎನ್​ಟಿಆರ್​ ಸೇರಿದಂತೆ ಚಿತ್ರತಂಡದ ಕೆಲವರಿಗೆ ಕೊರೊನಾ ಪಾಸಿಟಿವ್​ ಆಗಿದ್ದರಿಂದ ಸಿನಿಮಾ ಕೆಲಸಗಳು ತಡವಾಗಿವೆ.

ಇದನ್ನೂ ಓದಿ:

ರಾಜಮೌಳಿ ತಂದೆ ಮೊಬೈಲ್​ ವಾಲ್​ಪೇಪರ್​ನಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಫೋಟೋ; ಕಾರಣ ಏನು?

RRR ಫೈಟಿಂಗ್​ ದೃಶ್ಯದಲ್ಲಿ ರಾಜಮೌಳಿ ಹೊಸ ಪ್ರಯೋಗ; ತಂದೆಯಿಂದಲೇ ಬಯಲಾದ ಸೀಕ್ರೆಟ್​ ಏನು?

Published On - 9:50 am, Sun, 6 June 21

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ