AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು-ರಾಜಮೌಳಿ ಹೊಸ ಚಿತ್ರದಲ್ಲಿ ‘ಅವನೇ ಶ್ರೀಮನ್ನಾರಾಯಣ’ ಕಥೆ; ಏನಿದು ಹೊಸ ಗಾಸಿಪ್​?

ಪ್ರಸ್ತುತ ‘ಆರ್​ಆರ್​ಆರ್’ ಚಿತ್ರದ ಕೆಲಸಗಳಲ್ಲಿ ರಾಜಮೌಳಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಮಹೇಶ್​ ಬಾಬು ಜೊತೆಗಿನ ಚಿತ್ರದ ಕಥೆಯ ಬಗ್ಗೆ ಗುಸುಗುಸು ಕೇಳಿಬಂದಿದೆ.

ಮಹೇಶ್​ ಬಾಬು-ರಾಜಮೌಳಿ ಹೊಸ ಚಿತ್ರದಲ್ಲಿ ‘ಅವನೇ ಶ್ರೀಮನ್ನಾರಾಯಣ’ ಕಥೆ; ಏನಿದು ಹೊಸ ಗಾಸಿಪ್​?
ರಾಜಮೌಳಿ, ರಕ್ಷಿತ್​ ಶೆಟ್ಟಿ, ಮಹೇಶ್​ ಬಾಬು
TV9 Web
| Edited By: |

Updated on:Jun 06, 2021 | 10:28 AM

Share

ಸ್ಟಾರ್​ ನಿರ್ದೇಶಕ ರಾಜಮೌಳಿ ಅವರು ಯಾವುದೇ ಹೊಸ ಸಿನಿಮಾ ಘೋಷಣೆ ಮಾಡಿದರೂ ಅಭಿಮಾನಿಗಳ ನಿರೀಕ್ಷೆ ಗಗನಕ್ಕೇರುತ್ತದೆ. ಈ ಹಿಂದೆ ಅವರು ಅಂಥ ಅದ್ದೂರಿ ಸಿನಿಮಾಗಳನ್ನು ನೀಡಿದ್ದೇ ಇದಕ್ಕೆ ಕಾರಣ. ಇನ್ನು, ಅವರ ಸಿನಿಮಾ ಅನೌನ್ಸ್​ ಆದ ದಿನದಿಂದಲೇ ಹೊಸ ಹೊಸ ಗಾಸಿಪ್​ಗಳು ಕೂಡ ಕೇಳಿಬರಲು ಆರಂಭಿಸುತ್ತವೆ. ಈಗ ಅವರು ‘ಪ್ರಿನ್ಸ್​’ ಮಹೇಶ್​ ಬಾಬು ಜೊತೆ ಮಾಡಲಿರುವ ಚಿತ್ರದ ಬಗ್ಗೆಯೂ ಅಂಥದ್ದೇ ಒಂದು ಮಾತು ಕೇಳಿಬರುತ್ತಿದೆ. ಈ ಚಿತ್ರದ ಕಥೆಗೂ ಕನ್ನಡದ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದ ಕಥೆಗೂ ಹೋಲಿಕೆ ಇದೆ ಎನ್ನಲಾಗುತ್ತಿದೆ.

ಮಹೇಶ್​ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​ನಲ್ಲಿ ಸಿನಿಮಾ ಆಗುತ್ತಿರುವುದೇನೋ ನಿಜ. ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​ ಕಥೆ ಬರೆಯಲು ಆರಂಭಿಸಿದ್ದಾರೆ ಎಂಬುದು ಬಿಟ್ಟರೆ ಸದ್ಯಕ್ಕಂತೂ ಬೇರೆ ಯಾವ ಕೆಲಸಗಳೂ ಶುರು ಆಗಿಲ್ಲ. ಪ್ರಸ್ತುತ ‘ಆರ್​ಆರ್​ಆರ್’ ಚಿತ್ರದ ಕೆಲಸಗಳಲ್ಲಿ ರಾಜಮೌಳಿ ಬ್ಯುಸಿ ಆಗಿದ್ದಾರೆ. ಅದರ ನಡುವೆಯೇ ಮಹೇಶ್​ ಬಾಬು ಜೊತೆಗಿನ ಚಿತ್ರದ ಕಥೆಯ ಬಗ್ಗೆ ಗುಸುಗುಸು ಕೇಳಿಬಂದಿದೆ. ಮೂಲಗಳ ಪ್ರಕಾರ, ಕಾಡಿನೊಳಗೆ ಇರುವ ನಿಧಿ ಅಥವಾ ಖಜಾನೆ ಹುಡುಕುವ ಕಥೆಯನ್ನು ಈ ಸಿನಿಮಾ ಹೊಂದಿರಲಿದೆಯಂತೆ. 2019ರಲ್ಲಿ ರಕ್ಷಿತ್​ ಶೆಟ್ಟಿ ನಟಿಸಿದ್ದ ‘ಅವನೇ ಶ್ರೀಮನ್ನಾರಾಯಣ’ ಸಿನಿಮಾದಲ್ಲಿಯೂ ಇಂಥದ್ದೇ ಕಥೆ ಇತ್ತು. ಅದಕ್ಕೂ ಇದಕ್ಕೂ ಏನಾದರೂ ಸಂಬಂಧ ಇರಬಹುದೇ ಎಂದು ತಲೆ ಕೆರೆದುಕೊಳ್ಳುತ್ತಿದ್ದಾರೆ ಸಿನಿಪ್ರಿಯರು.

ಆದರೆ ಈ ಗಾಸಿಪ್​ಗಳನ್ನು ನಿರ್ಮಾಪಕ ಕೆಎಲ್​ ನಾರಾಯಣ ತಳ್ಳಿ ಹಾಕಿದ್ದಾರೆ. ‘ಕಥೆಗೆ ಸಂಬಂಧಿಸಿದಂತೆ ರಾಜಮೌಳಿ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಈ ರೀತಿಯ ಗಾಸಿಪ್​ಗಳು ಎಲ್ಲಿಂದ ಶುರು ಆಗುತ್ತವೋ ಗೊತ್ತಿಲ್ಲ’ ಎಂದು ಅವರು ಹೇಳಿದ್ದಾರೆ.

ಇನ್ನು, ಬಜೆಟ್​ ವಿಚಾರದಲ್ಲಿಯೂ ಈ ಸಿನಿಮಾ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಆರ್​ಆರ್​ಆರ್​ ಚಿತ್ರಕ್ಕಿಂತಲೂ ಹೆಚ್ಚಿನ ಬಜೆಟ್​ನಲ್ಲಿ ಈ ಚಿತ್ರ ಮೂಡಿಬರಲಿದೆ ಎನ್ನಲಾಗುತ್ತಿದೆ. ಹಾಲಿವುಡ್​ ಪ್ರೊಡಕ್ಷನ್​ ಹೌಸ್​ ಜೊತೆ ರಾಜಮೌಳಿ ಕೈ ಜೋಡಿಸುತ್ತಾರೆ ಎಂಬ ಸುದ್ದಿ ಕೂಡ ಹರಿದಾಡುತ್ತಿದೆ. ಆದರೆ ಅವುಗಳ ಬಗ್ಗೆ ರಾಜಮೌಳಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸದ್ಯ ರಾಜಮೌಳಿ ಅವರ ಗಮನವೆಲ್ಲ ‘ಆರ್​ಆರ್​ಆರ್​’ ಸಿನಿಮಾ ಮೇಲಿದೆ. ಲಾಕ್​ಡೌನ್​ ಕಾರಣದಿಂದಾಗಿ ಆ ಚಿತ್ರದ ಕೆಲಸಗಳು ಸ್ಥಗಿತಗೊಂಡಿವೆ. ಜ್ಯೂ. ಎನ್​ಟಿಆರ್​ ಸೇರಿದಂತೆ ಚಿತ್ರತಂಡದ ಕೆಲವರಿಗೆ ಕೊರೊನಾ ಪಾಸಿಟಿವ್​ ಆಗಿದ್ದರಿಂದ ಸಿನಿಮಾ ಕೆಲಸಗಳು ತಡವಾಗಿವೆ.

ಇದನ್ನೂ ಓದಿ:

ರಾಜಮೌಳಿ ತಂದೆ ಮೊಬೈಲ್​ ವಾಲ್​ಪೇಪರ್​ನಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಫೋಟೋ; ಕಾರಣ ಏನು?

RRR ಫೈಟಿಂಗ್​ ದೃಶ್ಯದಲ್ಲಿ ರಾಜಮೌಳಿ ಹೊಸ ಪ್ರಯೋಗ; ತಂದೆಯಿಂದಲೇ ಬಯಲಾದ ಸೀಕ್ರೆಟ್​ ಏನು?

Published On - 9:50 am, Sun, 6 June 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ