AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಎನ್​ಬಿಎ ಗೇಮ್​ನಲ್ಲಿ ಮಹೇಶ್ ಬಾಬು ಸಾಂಗ್; ಹೆಚ್ಚಿತು ಫ್ಯಾನ್ಸ್ ಹೆಮ್ಮೆ

ಅಮೆರಿಕದ ಹೌಸ್ಟನ್​ ಟೊಯೊಟಾ ಸೆಂಟರ್​​ನಲ್ಲಿ ಎನ್​ಬಿಎ ಗೇಮ್ ನಡೆಯುತ್ತಿತ್ತು. ಅಲ್ಲಿ ‘ಗುಂಟೂರು ಖಾರಂ’ ಸಿನಿಮಾದ ಹಾಡನ್ನು ಪ್ಲೇ ಮಾಡಲಾಗಿದೆ. ಈ ಸಿನಿಮಾದ ಅಧಿಕೃತ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇದರಿಂದ ಮಹೇಶ್ ಬಾಬು ಖ್ಯಾತಿ ಹೆಚ್ಚುವಂತೆ ಆಗಿದೆ.

ಅಮೆರಿಕದ ಎನ್​ಬಿಎ ಗೇಮ್​ನಲ್ಲಿ ಮಹೇಶ್ ಬಾಬು ಸಾಂಗ್; ಹೆಚ್ಚಿತು ಫ್ಯಾನ್ಸ್ ಹೆಮ್ಮೆ
ಮಹೇಶ್-ಶ್ರೀಲೀಲಾ
ರಾಜೇಶ್ ದುಗ್ಗುಮನೆ
|

Updated on: Apr 02, 2024 | 2:57 PM

Share

ತೆಲುಗು ಸೂಪರ್​ಸ್ಟಾರ್ ಮಹೇಶ್ ಬಾಬು (Mahesh Babu) ಹಾಗೂ ಕನ್ನಡದ ನಟಿ ಶ್ರೀಲೀಲಾ ಅಭಿನಯದ ‘ಗುಂಟೂರು ಖಾರಂ’ ಸಿನಿಮಾ ಈ ವರ್ಷದ ಆರಂಭದಲ್ಲಿ ರಿಲೀಸ್ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತು. ಈ ಚಿತ್ರಕ್ಕೆ ಎಸ್​. ಥಮನ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ‘ಕುರ್ಚಿ ಮಾಡತಾ ಪೆಟ್ಟಿ..’ ಹಾಡು ಸಖತ್ ಫೇಮಸ್ ಆಗಿದೆ. ಈ ಹಾಡನ್ನು ಎನ್​ಬಿಎ ಗೇಮ್​ನಲ್ಲಿ ಪ್ಲೇ ಮಾಡಲಾಗಿದೆ. ಈ ಮೂಲಕ ತೆಲುಗು ಹಾಡಿನ ಕಂಪು ಅಮೆರಿಕದಲ್ಲೂ ಹರಡಿದೆ.

ಅಮೆರಿಕದ ಹೌಸ್ಟನ್​ ಟೊಯೊಟಾ ಸೆಂಟರ್​​ನಲ್ಲಿ ಎನ್​ಬಿಎ ಗೇಮ್ ನಡೆಯುತ್ತಿತ್ತು. ಅಲ್ಲಿ ‘ಗುಂಟೂರು ಖಾರಂ’ ಸಿನಿಮಾದ ಹಾಡನ್ನು ಪ್ಲೇ ಮಾಡಲಾಗಿದೆ. ಈ ಸಿನಿಮಾದ ಅಧಿಕೃತ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ಇದರಿಂದ ಮಹೇಶ್ ಬಾಬು ಖ್ಯಾತಿ ಹೆಚ್ಚುವಂತೆ ಆಗಿದೆ. ವಿದೇಶದಲ್ಲಿ ಮಹೇಶ್ ಬಾಬು ಹಾಡು ಸದ್ದು ಮಾಡುತ್ತಿರುವುದಕ್ಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

‘ಕುರ್ಚಿ ಮಡತಾ ಪೆಟ್ಟಿ’ ಹಾಡಿಗೆ ಎಸ್​​ಎಸ್​ ಥಮನ್ ಸಂಗೀತ ಸಂಯೋಜನೆ ಮಾಡಿದ್ದರು. ಅವರ ಹಾಡು ಗಮನ ಸೆಳೆದಿದೆ. ತ್ರಿವಿಕ್ರಂ ಶ್ರೀನಿವಾಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಯೂಟ್ಯೂಬ್​ನಲ್ಲಿ ಈ ಹಾಡು 15 ಕೋಟಿಗೂ ಅಧಿಕ ಜನರು ಈ ಹಾಡನ್ನು ವೀಕ್ಷಣೆ ಮಾಡಿದ್ದಾರೆ.

‘ಗುಂಟೂರು ಖಾರಂ’ ಸಿನಿಮಾ 2024ರ ಜನವರಿ 12ರಂದು ಥಿಯೇಟರ್​ನಲ್ಲಿ ರಿಲೀಸ್ ಆಗಿದೆ. ಈ ಸಿನಿಮಾ ಅಂದುಕೊಂಡಷ್ಟು ಗಳಿಕೆ ಮಾಡಿಲ್ಲ. ಈ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ಈ ಹಾಡಿನಲ್ಲಿ ಮಹೇಶ್ ಬಾಬು ಹಾಗೂ ಶ್ರೀಲೀಲಾ ಭರ್ಜರಿಯಾಗಿ ಸ್ಟೆಪ್ ಹಾಕಿದ್ದರು. ಈ ಸಿನಿಮಾದಲ್ಲಿ ರಮ್ಯಾ ಕೃಷ್ಣನ್, ಜಗಪತಿ ಬಾಬು, ಪ್ರಕಾಶ್ ರಾಜ್, ಜಯರಾಮ್ ಮತ್ತು ಮೀನಾಕ್ಷಿ ಚೌಧರಿ ಈ ಸಿನಿಮಾದಲ್ಲಿ ನಟಿಸಿದ್ದರು.

ಇದನ್ನೂ ಓದಿ: ತಾವು ನಟಿಸಿದ ಸಿನಿಮಾಗಳಲ್ಲಿ ಈ ಮೂರು ಸಿನಿಮಾಗಳು ಬಹಳ ವಿಶೇಷವಂತೆ ಮಹೇಶ್ ಬಾಬುಗೆ

ಮಹೇಶ್ ಬಾಬು ಅವರು ರಾಜಮೌಳಿ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರಕ್ಕಾಗಿ ಅವರು ಭರ್ಜರಿ ಟ್ರೇನಿಂಗ್ ಪಡೆಯುತ್ತಿದ್ದಾರೆ. ಈ ಸಿನಿಮಾಗಾಗಿ ಅವರು ದೇಹದ ತೂಕ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಅವರು ಹೆಚ್ಚಾಗಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು