AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಬರ್ತ್​ಡೇ ದಿನ ಅಭಿಮಾನಿಗಳಿಗೆ ಸಿಗಲಿದೆ ಬರೀ ನಿರಾಸೆ

Mahesh Babu Birthday: ಈವರೆಗೆ ‘ಗುಂಟೂರು ಖಾರಂ’ ಸಿನಿಮಾದ ಒಂದೆರಡು ಪೋಸ್ಟರ್​ ರಿಲೀಸ್ ಆಗಿದ್ದು, ಟೈಟಲ್ ಅನಾವರಣ ಆಗಿದ್ದು ಹೊರತುಪಡಿಸಿದರೆ ಸಿನಿಮಾ ತಂಡದಿಂದ ದೊಡ್ಡ ಅಪ್​ಡೇಟ್ ಎಂದು ಯಾವುದೂ ಸಿಕ್ಕಿಲ್ಲ.

ಮಹೇಶ್ ಬಾಬು ಬರ್ತ್​ಡೇ ದಿನ ಅಭಿಮಾನಿಗಳಿಗೆ ಸಿಗಲಿದೆ ಬರೀ ನಿರಾಸೆ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on:Aug 08, 2023 | 8:07 AM

Share

ಮಹೇಶ್ ಬಾಬು (Mahesh Babu) ಅವರಿಗೆ ಬುಧವಾರ (ಆಗಸ್ಟ್ 9) ಬರ್ತ್​​ಡೇ. ಈಗಾಗಲೇ ಅಭಿಮಾನಿಗಳ ವಲಯದಲ್ಲಿ ಇದಕ್ಕೆ ಸಿದ್ಧತೆ ನಡೆದಿದೆ. ಅದ್ದೂರಿಯಾಗಿ ನಟನ ಬರ್ತ್​ಡೇ ಸೆಲೆಬ್ರೇಷನ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೆಲವು ಸಾಮಾಜಿಕ ಕೆಲಸಗಳು ಕೂಡ ಆಗಲಿವೆ. ಹೀಗಿರುವಾಗಲೇ ಮಹೇಶ್ ಬಾಬು ಅಭಿಮಾನಿಗಳಿಗೆ ಬರ್ತ್​​ಡೇ ದಿನ ನಿರಾಸೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಒಂದು ಹರಿದಾಡಿದೆ. ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಮಹೇಶ್ ಬಾಬು ಅವರು ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕಳೆದ ವರ್ಷದ ಆರಂಭದಲ್ಲಿ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್ ಆಯಿತು. ಅದಾದ ಬಳಿಕ ಒಪ್ಪಿಕೊಂಡ ಸಿನಿಮಾ ಇದು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಈಗಾಗಲೇ ರಿಲೀಸ್ ಆಗಬೇಕಿತ್ತು. ಆದರೆ, ವಿಳಂಬ ಆಗುತ್ತಲೇ ಬಂತು. ಇದು ಮಹೇಶ್ ಬಾಬು ಅಭಿಮಾನಿಗಳಿಗೆ ಬೇಸರ ತಂದಿದೆ. ಒಂದೆರಡು ಪೋಸ್ಟರ್​ ರಿಲೀಸ್ ಆಗಿದ್ದು, ಟೈಟಲ್ ಅನಾವರಣ ಆಗಿದ್ದು ಹೊರತುಪಡಿಸಿದರೆ ಸಿನಿಮಾ ತಂಡದಿಂದ ದೊಡ್ಡ ಅಪ್​ಡೇಟ್ ಎಂದು ಯಾವುದೂ ಸಿಕ್ಕಿಲ್ಲ.

ಇದನ್ನೂ ಓದಿ: ಚಿನ್ನದ ಬಣ್ಣದ ಐಶಾರಾಮಿ ಕಾರು ಖರೀದಿಸಿದ ಮಹೇಶ್ ಬಾಬು: ಬೆಲೆ ಎಷ್ಟು ಗೊತ್ತೆ?

ಮಹೇಶ್ ಬಾಬು ಅವರ ಜನ್ಮದಿನಕ್ಕೆ ಚಿತ್ರತಂಡದಿಂದ ಸಾಂಗ್ ರಿಲೀಸ್ ಆಗಲಿದೆ ಎನ್ನುವ ಮಾಹಿತಿ ಹರಿದಾಡಿತ್ತು. ಆದರೆ, ಅದು ಸುಳ್ಳು. ಮಹೇಶ್ ಬಾಬು ಬರ್ತ್​ಡೇಗೆ ರಿಲೀಸ್ ಆಗೋದು ಕೇವಲ ಒಂದು ಪೋಸ್ಟರ್ ಮಾತ್ರ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಈ ಚಿತ್ರಕ್ಕೆ ತಮನ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರ ಸಂಯೋಜನೆ ಮಹೇಶ್​ ಬಾಬುಗೆ ಇಷ್ಟವಾಗುತ್ತಿಲ್ಲ. ಈವರೆಗೆ ಮಹೇಶ್ ಬಾಬು ಟ್ಯೂನ್ ಕೂಡ ಫೈನಲ್ ಮಾಡಿಲ್ಲ ಎಂದು ತಿಳಿದು ಬಂದಿದೆ.

ಮಹೇಶ್ ಬಾಬು ಹಾಗೂ ತಮನ್ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಹೀಗಿರುವಾಗ ಸಾಂಗ್ ರಿಲೀಸ್ ಆಗಲು ಹೇಗೆ ಸಾಧ್ಯ ಎಂಬುದು ಅನೇಕರ ಪ್ರಶ್ನೆ. ‘ಸರ್ಕಾರು ವಾರಿ ಪಾಟ’ ಸಿನಿಮಾದ ‘ಮಾ ಮಾ ಮಹೇಶ್..’ ಹಾಡು ಸೂಪರ್ ಹಿಟ್ ಆಯಿತು. ಈ ರೀತಿಯ ಟ್ಯೂನ್​​​ನ ತಮನ್ ಅವರಿಂದ ಮಹೇಶ್ ಬಾಬು ನಿರೀಕ್ಷಿಸುತ್ತಿದ್ದಾರೆ. ಆದರೆ, ಈ ನಿರೀಕ್ಷೆಯ ಮಟ್ಟ ತಲುಪಲು ತಮನ್​ಗೆ ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Tue, 8 August 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್