AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಬರ್ತ್​ಡೇ ದಿನ ಅಭಿಮಾನಿಗಳಿಗೆ ಸಿಗಲಿದೆ ಬರೀ ನಿರಾಸೆ

Mahesh Babu Birthday: ಈವರೆಗೆ ‘ಗುಂಟೂರು ಖಾರಂ’ ಸಿನಿಮಾದ ಒಂದೆರಡು ಪೋಸ್ಟರ್​ ರಿಲೀಸ್ ಆಗಿದ್ದು, ಟೈಟಲ್ ಅನಾವರಣ ಆಗಿದ್ದು ಹೊರತುಪಡಿಸಿದರೆ ಸಿನಿಮಾ ತಂಡದಿಂದ ದೊಡ್ಡ ಅಪ್​ಡೇಟ್ ಎಂದು ಯಾವುದೂ ಸಿಕ್ಕಿಲ್ಲ.

ಮಹೇಶ್ ಬಾಬು ಬರ್ತ್​ಡೇ ದಿನ ಅಭಿಮಾನಿಗಳಿಗೆ ಸಿಗಲಿದೆ ಬರೀ ನಿರಾಸೆ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on:Aug 08, 2023 | 8:07 AM

Share

ಮಹೇಶ್ ಬಾಬು (Mahesh Babu) ಅವರಿಗೆ ಬುಧವಾರ (ಆಗಸ್ಟ್ 9) ಬರ್ತ್​​ಡೇ. ಈಗಾಗಲೇ ಅಭಿಮಾನಿಗಳ ವಲಯದಲ್ಲಿ ಇದಕ್ಕೆ ಸಿದ್ಧತೆ ನಡೆದಿದೆ. ಅದ್ದೂರಿಯಾಗಿ ನಟನ ಬರ್ತ್​ಡೇ ಸೆಲೆಬ್ರೇಷನ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೆಲವು ಸಾಮಾಜಿಕ ಕೆಲಸಗಳು ಕೂಡ ಆಗಲಿವೆ. ಹೀಗಿರುವಾಗಲೇ ಮಹೇಶ್ ಬಾಬು ಅಭಿಮಾನಿಗಳಿಗೆ ಬರ್ತ್​​ಡೇ ದಿನ ನಿರಾಸೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಒಂದು ಹರಿದಾಡಿದೆ. ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಮಹೇಶ್ ಬಾಬು ಅವರು ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕಳೆದ ವರ್ಷದ ಆರಂಭದಲ್ಲಿ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್ ಆಯಿತು. ಅದಾದ ಬಳಿಕ ಒಪ್ಪಿಕೊಂಡ ಸಿನಿಮಾ ಇದು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಈಗಾಗಲೇ ರಿಲೀಸ್ ಆಗಬೇಕಿತ್ತು. ಆದರೆ, ವಿಳಂಬ ಆಗುತ್ತಲೇ ಬಂತು. ಇದು ಮಹೇಶ್ ಬಾಬು ಅಭಿಮಾನಿಗಳಿಗೆ ಬೇಸರ ತಂದಿದೆ. ಒಂದೆರಡು ಪೋಸ್ಟರ್​ ರಿಲೀಸ್ ಆಗಿದ್ದು, ಟೈಟಲ್ ಅನಾವರಣ ಆಗಿದ್ದು ಹೊರತುಪಡಿಸಿದರೆ ಸಿನಿಮಾ ತಂಡದಿಂದ ದೊಡ್ಡ ಅಪ್​ಡೇಟ್ ಎಂದು ಯಾವುದೂ ಸಿಕ್ಕಿಲ್ಲ.

ಇದನ್ನೂ ಓದಿ: ಚಿನ್ನದ ಬಣ್ಣದ ಐಶಾರಾಮಿ ಕಾರು ಖರೀದಿಸಿದ ಮಹೇಶ್ ಬಾಬು: ಬೆಲೆ ಎಷ್ಟು ಗೊತ್ತೆ?

ಮಹೇಶ್ ಬಾಬು ಅವರ ಜನ್ಮದಿನಕ್ಕೆ ಚಿತ್ರತಂಡದಿಂದ ಸಾಂಗ್ ರಿಲೀಸ್ ಆಗಲಿದೆ ಎನ್ನುವ ಮಾಹಿತಿ ಹರಿದಾಡಿತ್ತು. ಆದರೆ, ಅದು ಸುಳ್ಳು. ಮಹೇಶ್ ಬಾಬು ಬರ್ತ್​ಡೇಗೆ ರಿಲೀಸ್ ಆಗೋದು ಕೇವಲ ಒಂದು ಪೋಸ್ಟರ್ ಮಾತ್ರ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಈ ಚಿತ್ರಕ್ಕೆ ತಮನ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರ ಸಂಯೋಜನೆ ಮಹೇಶ್​ ಬಾಬುಗೆ ಇಷ್ಟವಾಗುತ್ತಿಲ್ಲ. ಈವರೆಗೆ ಮಹೇಶ್ ಬಾಬು ಟ್ಯೂನ್ ಕೂಡ ಫೈನಲ್ ಮಾಡಿಲ್ಲ ಎಂದು ತಿಳಿದು ಬಂದಿದೆ.

ಮಹೇಶ್ ಬಾಬು ಹಾಗೂ ತಮನ್ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಹೀಗಿರುವಾಗ ಸಾಂಗ್ ರಿಲೀಸ್ ಆಗಲು ಹೇಗೆ ಸಾಧ್ಯ ಎಂಬುದು ಅನೇಕರ ಪ್ರಶ್ನೆ. ‘ಸರ್ಕಾರು ವಾರಿ ಪಾಟ’ ಸಿನಿಮಾದ ‘ಮಾ ಮಾ ಮಹೇಶ್..’ ಹಾಡು ಸೂಪರ್ ಹಿಟ್ ಆಯಿತು. ಈ ರೀತಿಯ ಟ್ಯೂನ್​​​ನ ತಮನ್ ಅವರಿಂದ ಮಹೇಶ್ ಬಾಬು ನಿರೀಕ್ಷಿಸುತ್ತಿದ್ದಾರೆ. ಆದರೆ, ಈ ನಿರೀಕ್ಷೆಯ ಮಟ್ಟ ತಲುಪಲು ತಮನ್​ಗೆ ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Tue, 8 August 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ