AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಬರ್ತ್​ಡೇ ದಿನ ಅಭಿಮಾನಿಗಳಿಗೆ ಸಿಗಲಿದೆ ಬರೀ ನಿರಾಸೆ

Mahesh Babu Birthday: ಈವರೆಗೆ ‘ಗುಂಟೂರು ಖಾರಂ’ ಸಿನಿಮಾದ ಒಂದೆರಡು ಪೋಸ್ಟರ್​ ರಿಲೀಸ್ ಆಗಿದ್ದು, ಟೈಟಲ್ ಅನಾವರಣ ಆಗಿದ್ದು ಹೊರತುಪಡಿಸಿದರೆ ಸಿನಿಮಾ ತಂಡದಿಂದ ದೊಡ್ಡ ಅಪ್​ಡೇಟ್ ಎಂದು ಯಾವುದೂ ಸಿಕ್ಕಿಲ್ಲ.

ಮಹೇಶ್ ಬಾಬು ಬರ್ತ್​ಡೇ ದಿನ ಅಭಿಮಾನಿಗಳಿಗೆ ಸಿಗಲಿದೆ ಬರೀ ನಿರಾಸೆ
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on:Aug 08, 2023 | 8:07 AM

Share

ಮಹೇಶ್ ಬಾಬು (Mahesh Babu) ಅವರಿಗೆ ಬುಧವಾರ (ಆಗಸ್ಟ್ 9) ಬರ್ತ್​​ಡೇ. ಈಗಾಗಲೇ ಅಭಿಮಾನಿಗಳ ವಲಯದಲ್ಲಿ ಇದಕ್ಕೆ ಸಿದ್ಧತೆ ನಡೆದಿದೆ. ಅದ್ದೂರಿಯಾಗಿ ನಟನ ಬರ್ತ್​ಡೇ ಸೆಲೆಬ್ರೇಷನ್ ಮಾಡಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಮತ್ತೊಂದು ಕಡೆ ಕೆಲವು ಸಾಮಾಜಿಕ ಕೆಲಸಗಳು ಕೂಡ ಆಗಲಿವೆ. ಹೀಗಿರುವಾಗಲೇ ಮಹೇಶ್ ಬಾಬು ಅಭಿಮಾನಿಗಳಿಗೆ ಬರ್ತ್​​ಡೇ ದಿನ ನಿರಾಸೆ ಆಗುವ ಸಾಧ್ಯತೆ ಇದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಒಂದು ಹರಿದಾಡಿದೆ. ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಮಹೇಶ್ ಬಾಬು ಅವರು ತ್ರಿವಿಕ್ರಂ ಶ್ರೀನಿವಾಸ್ ನಿರ್ದೇಶನದ ‘ಗುಂಟೂರು ಖಾರಂ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಕಳೆದ ವರ್ಷದ ಆರಂಭದಲ್ಲಿ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾ ರಿಲೀಸ್ ಆಯಿತು. ಅದಾದ ಬಳಿಕ ಒಪ್ಪಿಕೊಂಡ ಸಿನಿಮಾ ಇದು. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಸಿನಿಮಾ ಈಗಾಗಲೇ ರಿಲೀಸ್ ಆಗಬೇಕಿತ್ತು. ಆದರೆ, ವಿಳಂಬ ಆಗುತ್ತಲೇ ಬಂತು. ಇದು ಮಹೇಶ್ ಬಾಬು ಅಭಿಮಾನಿಗಳಿಗೆ ಬೇಸರ ತಂದಿದೆ. ಒಂದೆರಡು ಪೋಸ್ಟರ್​ ರಿಲೀಸ್ ಆಗಿದ್ದು, ಟೈಟಲ್ ಅನಾವರಣ ಆಗಿದ್ದು ಹೊರತುಪಡಿಸಿದರೆ ಸಿನಿಮಾ ತಂಡದಿಂದ ದೊಡ್ಡ ಅಪ್​ಡೇಟ್ ಎಂದು ಯಾವುದೂ ಸಿಕ್ಕಿಲ್ಲ.

ಇದನ್ನೂ ಓದಿ: ಚಿನ್ನದ ಬಣ್ಣದ ಐಶಾರಾಮಿ ಕಾರು ಖರೀದಿಸಿದ ಮಹೇಶ್ ಬಾಬು: ಬೆಲೆ ಎಷ್ಟು ಗೊತ್ತೆ?

ಮಹೇಶ್ ಬಾಬು ಅವರ ಜನ್ಮದಿನಕ್ಕೆ ಚಿತ್ರತಂಡದಿಂದ ಸಾಂಗ್ ರಿಲೀಸ್ ಆಗಲಿದೆ ಎನ್ನುವ ಮಾಹಿತಿ ಹರಿದಾಡಿತ್ತು. ಆದರೆ, ಅದು ಸುಳ್ಳು. ಮಹೇಶ್ ಬಾಬು ಬರ್ತ್​ಡೇಗೆ ರಿಲೀಸ್ ಆಗೋದು ಕೇವಲ ಒಂದು ಪೋಸ್ಟರ್ ಮಾತ್ರ. ಈ ವಿಚಾರ ಕೇಳಿ ಅಭಿಮಾನಿಗಳಿಗೆ ನಿರಾಸೆ ಆಗಿದೆ. ಈ ಚಿತ್ರಕ್ಕೆ ತಮನ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಅವರ ಸಂಯೋಜನೆ ಮಹೇಶ್​ ಬಾಬುಗೆ ಇಷ್ಟವಾಗುತ್ತಿಲ್ಲ. ಈವರೆಗೆ ಮಹೇಶ್ ಬಾಬು ಟ್ಯೂನ್ ಕೂಡ ಫೈನಲ್ ಮಾಡಿಲ್ಲ ಎಂದು ತಿಳಿದು ಬಂದಿದೆ.

ಮಹೇಶ್ ಬಾಬು ಹಾಗೂ ತಮನ್ ಮಧ್ಯೆ ಯಾವುದೂ ಸರಿ ಇಲ್ಲ ಎಂದು ಈ ಮೊದಲಿನಿಂದಲೂ ಕೇಳಿ ಬರುತ್ತಲೇ ಇದೆ. ಹೀಗಿರುವಾಗ ಸಾಂಗ್ ರಿಲೀಸ್ ಆಗಲು ಹೇಗೆ ಸಾಧ್ಯ ಎಂಬುದು ಅನೇಕರ ಪ್ರಶ್ನೆ. ‘ಸರ್ಕಾರು ವಾರಿ ಪಾಟ’ ಸಿನಿಮಾದ ‘ಮಾ ಮಾ ಮಹೇಶ್..’ ಹಾಡು ಸೂಪರ್ ಹಿಟ್ ಆಯಿತು. ಈ ರೀತಿಯ ಟ್ಯೂನ್​​​ನ ತಮನ್ ಅವರಿಂದ ಮಹೇಶ್ ಬಾಬು ನಿರೀಕ್ಷಿಸುತ್ತಿದ್ದಾರೆ. ಆದರೆ, ಈ ನಿರೀಕ್ಷೆಯ ಮಟ್ಟ ತಲುಪಲು ತಮನ್​ಗೆ ಸಾಧ್ಯವಾಗುತ್ತಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Tue, 8 August 23

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ