ಮಹೇಶ್​ ಬಾಬು ಪುತ್ರ ಗೌತಮ್​ ಹೆಮ್ಮೆಯ ಕ್ಷಣ; ಖುಷಿ ಹಂಚಿಕೊಂಡ ‘ಪ್ರಿನ್ಸ್​’

ಪುತ್ರ ಗೌತಮ್​ ಪದವಿ ಶಿಕ್ಷಣ ಮುಗಿಸಿದ್ದಕ್ಕೆ ಮಹೇಶ್​ ಬಾಬು ಅವರಿಗೆ ಸಖತ್​ ಹೆಮ್ಮೆ ಆಗಿದೆ. ಕಾನ್ವಕೇಷನ್​ ಸಮಾರಂಭದಲ್ಲಿ ಅವರು ಪಾಲ್ಗೊಂಡಿದ್ದಾರೆ. ಮಗನ ಜೊತೆ ಇರುವ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಂಡು ಅವರು ಸಂಭ್ರಮಿಸಿದ್ದಾರೆ. ಮಹೇಶ್​ ಬಾಬು ಮಗಳು ಸಿತಾರಾ ಹಾಗೂ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾಥ್​ ನೀಡಿದ್ದಾರೆ.

ಮಹೇಶ್​ ಬಾಬು ಪುತ್ರ ಗೌತಮ್​ ಹೆಮ್ಮೆಯ ಕ್ಷಣ; ಖುಷಿ ಹಂಚಿಕೊಂಡ ‘ಪ್ರಿನ್ಸ್​’
ಕುಟುಂಬದ ಜೊತೆ ಮಹೇಶ್​ ಬಾಬು

Updated on: May 26, 2024 | 9:55 PM

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಸಿನಿಮಾದ ಕೆಲಸಗಳಲ್ಲಿ ಎಷ್ಟೇ ಬ್ಯುಸಿ ಆಗಿದ್ದರೂ ಕೂಡ ಫ್ಯಾಮಿಲಿಗಾಗಿ ಸಮಯ ಮೀಸಲಿಡುವುದನ್ನು ತಪ್ಪಿಸುವುದಿಲ್ಲ. ಈಗ ಪುತ್ರ ಗೌತಮ್​ ಘಟ್ಟಮನೇನಿಯ ಸ್ಪೆಷಲ್​ ದಿನದಲ್ಲಿ ಮಹೇಶ್​ ಬಾಬು ಅವರು ಭಾಗಿ ಆಗಿದ್ದಾರೆ. ಹೌದು, ಗೌತಮ್​ ಘಟ್ಟಮನೇನಿ (Gautam Ghattamaneni) ಪದವಿ ಶಿಕ್ಷಣ ಪೂರೈಸಿದ್ದಾರೆ. ಪುತ್ರನ ಕಾನ್ವಕೇಷನ್​ ದಿನದಲ್ಲಿ ಮಹೇಶ್​ ಬಾಬು ಅವರು ಕುಟುಂಬ (Mahesh Babu Family) ಸಮೇತರಾಗಿ ಹಾಜರಿ ಹಾಕಿದ್ದಾರೆ. ಅಲ್ಲದೇ ಸೋಶಿಯಲ್​ ಮೀಡಿಯಾದಲ್ಲಿ ಮಗನ ಬಗ್ಗೆ ಹೆಮ್ಮೆಯ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಮಕ್ಕಳು ಸಾಧನೆ ಮಾಡಿದಾಗ ತಂದೆ-ತಾಯಿಗೆ ಎಲ್ಲಿಲ್ಲದ ಖುಷಿ ಆಗುತ್ತದೆ. ಆ ಖುಷಿಯ ಕ್ಷಣವನ್ನು ಮಹೇಶ್​ ಬಾಬು ಕೂಡ ಮಿಸ್​ ಮಾಡಿಕೊಳ್ಳುವವರಲ್ಲ. ಮಹೇಶ್​ ಬಾಬು ಅವರ ಪುತ್ರ ಗೌತಮ್​ ಘಟ್ಟಮನೇನಿ ಪದವಿ ಶಿಕ್ಷಣ ಮುಗಿಸಿದ್ದಾರೆ. ಆ ಪ್ರಯುಕ್ತ ನಡೆದ ಕಾನ್ವಕೇಷನ್​ ಸಮಾರಂಭದಲ್ಲಿ ಮಹೇಶ್​ ಬಾಬು, ಪತ್ನಿ ನಮ್ರತಾ ಶಿರೋಡ್ಕರ್​, ಮಗಳು ಸಿತಾರಾ ಘಟ್ಟಮನೇನಿ ಕೂಡ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ವಿಫಲವಾಯ್ತಾ ರಾಜಮೌಳಿ ಪ್ರಯತ್ನ? ಮಹೇಶ್​ ಬಾಬು ಲುಕ್​ ಬಹಿರಂಗ

ಗೌತಮ್​ ಘಟ್ಟಮನೇನಿ ಜೊತೆ ಸಿತಾರಾ, ಮಹೇಶ್​ ಬಾಬು, ನಮ್ರತಾ ಶಿರೋಡ್ಕರ್​ ಅವರು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಮನೆಮಗನ ಬಗ್ಗೆ ಎಲ್ಲರೂ ಹೆಮ್ಮೆಯಿಂದ ಮಾತನಾಡಿದ್ದಾರೆ. ಮುಂದಿನ ಪಯಣಕ್ಕೆ ಶುಭ ಹಾರೈಸಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋಗಳು ವೈರಲ್​ ಆಗಿವೆ. ಅಭಿಮಾನಿಗಳು ಮತ್ತು ಆಪ್ತರು ಕೂಡ ಗೌತಮ್​ ಘಟ್ಟಮನೇನಿಗೆ ಅಭಿನಂದನೆ ತಿಳಿಸಿದ್ದಾರೆ.

ಸಿನಿಮಾ ಬಗ್ಗೆ ಹೇಳುವುದಾದರೆ, ಮಹೇಶ್​ ಬಾಬು ಅವರು ಸದ್ಯ ರಾಜಮೌಳಿ ಜೊತೆ ಕೈ ಜೋಡಿಸಿದ್ದಾರೆ. ಈ ಸಿನಿಮಾಗೆ ಸಕಲ ತಯಾರಿ ನಡೆದಿದೆ. ಇದರ ಶೀರ್ಷಿಕೆ ಇನ್ನೂ ಬಹಿರಂಗ ಆಗಿಲ್ಲ. ಸದ್ಯಕ್ಕೆ ಇದನ್ನು ‘ಎಸ್​ಎಸ್​ಎಂಬಿ 29’ ಎಂದು ಕರೆಯಲಾಗುತ್ತಿದೆ. ಈ ಸಿನಿಮಾದಲ್ಲಿ ಮಹೇಶ್​ ಬಾಬು ಅವರ ಗೆಟಪ್​ ಬದಲಾಗಲಿದೆ. ಅದನ್ನು ನೋಡಲು ಅಭಿಮಾನಿಗಳು ಕಾದಿದ್ದಾರೆ. ಮಹೇಶ್​ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್ ಆದ್ದರಿಂದ ಅಭಿಮಾನಿಗಳ ನಿರೀಕ್ಷೆ ಜೋರಾಗಿದೆ. ಆದಷ್ಟು ಬೇಗ ಈ ಸಿನಿಮಾ ಬಗ್ಗೆ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us