AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗುಂಟೂರು ಖಾರಂ’ ಸ್ಟೈಲ್​ನಲ್ಲಿ ಅಪ್ಪನ ಥಿಯೇಟರ್​ಗೆ ಬಂದ ಸಿತಾರಾ; ಟ್ರೋಲ್ ಆದ ಮಹೇಶ್ ಬಾಬು ಮಗಳು

ಸಿತಾರಾ ತಂದೆ ಮಹೇಶ್ ಬಾಬು ಒಡೆತನದ ಎಎಂಬಿ ಸಿನಿಮಾಸ್​ಗೆ ಬಂದಿದ್ದಾರೆ. ಅವರ ಜೊತೆ ನಿರ್ದೇಶಕ ವಂಶಿ ಪೈಡಿಪಲ್ಲಿ ಹಾಗೂ ಮೆಹೆರ್ ರಮೇಶ್ ಮಗಳು ಇದ್ದರು. ‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬು ಒಂದು ಶರ್ಟ್ ಧರಿಸಿದ್ದರು. ಇದೇ ಮಾದರಿಯ ಶರ್ಟ್​ನಲ್ಲಿ ಆಗಮಿಸಿದ್ದಾರೆ ಸಿತಾರಾ.

‘ಗುಂಟೂರು ಖಾರಂ’ ಸ್ಟೈಲ್​ನಲ್ಲಿ ಅಪ್ಪನ ಥಿಯೇಟರ್​ಗೆ ಬಂದ ಸಿತಾರಾ; ಟ್ರೋಲ್ ಆದ ಮಹೇಶ್ ಬಾಬು ಮಗಳು
ಸಿತಾರಾ-ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Feb 02, 2024 | 7:00 AM

Share

ಮಹೇಶ್ ಬಾಬು (Mahesh Babu) ನಟನೆಯ ‘ಗುಂಟೂರು ಖಾರಂ’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿ ಮಿಶ್ರಪ್ರತಿಕ್ರಿಯೆ ಪಡೆಯಿತು. ಈ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಮಹೇಶ್​ ಬಾಬು ಅಂಥ ಸ್ಟಾರ್ ಹೀರೋ ಸಿನಿಮಾಗೆ ಈ ಗಳಿಕೆ ಏನೂ ಅಲ್ಲ. ರೇಟಿಂಗ್ ವಿಚಾರದಲ್ಲಿ ಈ ಸಿನಿಮಾ ಅಂಥ ಒಳ್ಳೆಯ ಪರ್ಫಾರ್ಮೆನ್ಸ್ ನೀಡಿಲ್ಲ. ಈ ಮಧ್ಯೆ ಮಹೇಶ್ ಬಾಬು ಮಗಳು ಸಿತಾರಾ (Sitara) ಅವರು ಈ ಸಿನಿಮಾ ನೋಡಲು ಅಪ್ಪನ ಥಿಯೇಟರ್​ಗೆ ಬಂದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕೆಲವರು ಸಿತಾರಾನ ಟ್ರೋಲ್ ಮಾಡಿದ್ದಾರೆ.

ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್ ಹಾಗೂ ಮಹೇಶ್ ಬಾಬು ಅವರದ್ದು ಹಿಟ್ ಕಾಂಬಿನೇಷನ್. ಈ ಕಾರಣದಿಂದಲೇ ‘ಗುಂಟೂರು ಖಾರಂ’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿತ್ತು. ಈ ನಿರೀಕ್ಷೆ ಸುಳ್ಳಾಗಿದೆ. ಸಿನಿಮಾ ಅಂದುಕೊಂಡ ರೀತಿಯಲ್ಲಿ ಕಲೆಕ್ಷನ್ ಮಾಡಿಲ್ಲ. ಇದು ತಂಡದವರಿಗೆ ಹಾಗೂ ಮಹೇಶ್ ಬಾಬು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಆದರೆ, ಮಹೇಶ್ ಬಾಬು ಮಗಳು ಸಿತಾರಾ ಮಾತ್ರ ಮತ್ತೆ ಮತ್ತೆ ಹೋಗಿ ಸಿನಿಮಾ ವೀಕ್ಷಣೆ ಮಾಡುತ್ತಿದ್ದಾರೆ.

ಥಿಯೇಟರ್​ನಲ್ಲಿ ಸಿತಾರಾ ಕಾಣಿಸಿಕೊಂಡಿದ್ದು ಹೀಗೆ..

ಮಹೇಶ್ ಬಾಬು ಒಡೆತನದ ಎಎಂಬಿ ಸಿನಿಮಾಸ್​ಗೆ ಸಿತಾರಾ ಬಂದಿದ್ದಾರೆ. ಅವರ ಜೊತೆ ನಿರ್ದೇಶಕ ವಂಶಿ ಪೈಡಿಪಲ್ಲಿ ಹಾಗೂ ಮೆಹೆರ್ ರಮೇಶ್ ಮಗಳು ಇದ್ದಾರೆ. ‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬು ಒಂದು ಶರ್ಟ್ ಧರಿಸಿದ್ದರು. ಇದೇ ರೀತಿಯ ಶರ್ಟ್​ನಲ್ಲಿ ಆಗಮಿಸಿದ್ದಾರೆ ಸಿತಾರಾ. ಕ್ಯಾಮೆರಾ ಕಂಡ ತಕ್ಷಣ ಅವರು ಪೋಸ್ ಕೊಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದೆ. ಕೆಲವರು ಸಿತಾರಾಳ ಟ್ರೋಲ್ ಮಾಡಿದ್ದಾರೆ. ‘ಇದೊಂದು ಕೆಟ್ಟ ಸಿನಿಮಾ. ಆದರೂ ಅಪ್ಪ ಸಿನಿಮಾ ಎಂದು ಪಾಪ ಮಗಳು ಎಷ್ಟು ಬಾರಿ ನೋಡುತ್ತಾಳೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:  ಬ್ರ್ಯಾಂಡ್ ಪ್ರಚಾರದಿಂದ ಎಷ್ಟು ಸಂಭಾವನೆ ಪಡೆಯುತ್ತಾರೆ ಮಹೇಶ್ ಬಾಬು ಮಗಳು ಸಿತಾರಾ

ಸಿತಾರಾ ವಯಸ್ಸು 12 ದಾಟಿಲ್ಲ. ಈಗಲೇ ಅವರು ಸೋಶಿಯಲ್ ಮೀಡಿಯಾದಲ್ಲಿ ಮಿಂಚುತ್ತಿದ್ದಾರೆ. ‘ಸರ್ಕಾರು ವಾರಿ ಪಾಟ’ ಪ್ರಮೋಷನಲ್ ಸಾಂಗ್​ನಲ್ಲಿ ಸಿತಾರಾ ಕಾಣಿಸಿಕೊಂಡಿದ್ದರು. ಅವರು ಮುಂದಿನ ದಿನಗಳಲ್ಲಿ ಸಿನಿಮಾದಲ್ಲಿ ನಟಿಸೋ ಆಲೋಚನೆಯಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ‘ಗುಂಟೂರು ಖಾರಂ’ ಸಿನಿಮಾದಲ್ಲಿ ಮಹೇಶ್ ಬಾಬುಗೆ ಜೊತೆಯಾಗಿ ಕನ್ನಡದ ನಟಿ ಶ್ರೀಲೀಲಾ ನಟಿಸಿದ್ದಾರೆ. ಈ ಸಿನಿಮಾ ಚೆನ್ನಾಗಿ ಮೂಡಿ ಬಂದಿಲ್ಲ ಎಂದು ಅನೇಕರು ಟೀಕೆ ಮಾಡಿದ್ದರು. ಎಸ್​. ಥಮನ್ ನೀಡಿದ ಸಂಗೀತ ಕೂಡ ಮೋಡಿ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ