AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​

Sitara Ghattamaneni: ಸಮಂತಾ ರುತ್​ ಪ್ರಭು ಅವರು ಮಹೇಶ್​ ಬಾಬು ಕುಟುಂಬಕ್ಕೆ ಆಪ್ತರಾಗಿದ್ದಾರೆ. ಈ ಕುರಿತು ಸಿತಾರಾ ಹೇಳಿರುವ ಮಾತುಗಳು ವೈರಲ್​ ಆಗಿವೆ.

‘ಸಮಂತಾ ಆಂಟಿ ನನ್ನ ಬೆಸ್ಟ್​ ಫ್ರೆಂಡ್​’ ಎಂದ ಮಹೇಶ್​ ಬಾಬು ಪುತ್ರಿ ಸಿತಾರಾ; ವಿಡಿಯೋ ವೈರಲ್​
ಸಮಂತಾ, ಸಿತಾರಾ, ಮಹೇಶ್ ಬಾಬು,
TV9 Web
| Edited By: |

Updated on: May 12, 2022 | 3:47 PM

Share

ಟಾಲಿವುಡ್​ನಲ್ಲಿ ಮಹೇಶ್​ ಬಾಬು (Mahesh Babu) ಅವರ ಇಡೀ ಕುಟುಂಬವೇ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿದೆ. ಅವರ ಮಗಳು ಸಿತಾರಾ ಕೂಡ ಈಗಾಗಲೇ ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ್ದಾಳೆ. ಆಕೆಗೆ ಈಗಿನ್ನೂ 9 ವರ್ಷ ವಯಸ್ಸು. ಚಿಕ್ಕ ವಯಸ್ಸಿಗೆ ಸಾಕಷ್ಟು ಸಾಧನೆ ಮಾಡಿದ್ದಾಳೆ. ತನ್ನದೇ ಯೂಟ್ಯೂಬ್ ಚಾನೆಲ್ ಹೊಂದಿರುವ ಸಿತಾರಾ ಸಾಕಷ್ಟು ಸಲೆಬ್ರಿಟಿಗಳನ್ನು ಸಂದರ್ಶನ ಮಾಡುತ್ತಾಳೆ. ಮಹೇಶ್​ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಚಿತ್ರದ ‘ಪೆನ್ನೆ..’ ಹಾಡಿನಲ್ಲಿ ಗೆಸ್ಟ್​ ಅಪಿಯರೆನ್ಸ್​ ನೀಡುವ ಮೂಲಕ ಸಿನಿಮಾ ಇಂಡಸ್ಟ್ರಿಗೆ ಅವಳು ಕಾಲಿಟ್ಟಾಗಿದೆ. ಸಿತಾರಾ (Sitara Ghattamaneni) ಕೂಚಿಪುಡಿ ನೃತ್ಯವನ್ನು ಕೂಡ ಉತ್ತಮವಾಗಿ ಮಾಡುತ್ತಾಳೆ ಅನ್ನೋದು ಅಭಿಮಾನಿಗಳಿಗೆ ತಿಳಿದಿದೆ. ಹೀಗೆ ಒಂದಿಲ್ಲೊಂದು ಕಾರಣಕ್ಕೆ ಆಗಾಗ ಮಾಧ್ಯಮಗಳಲ್ಲಿ ಸುದ್ದಿ ಆಗುವ ಮಹೇಶ್ ಬಾಬು ಮಗಳು ಸಿತಾರಾ ಈಗ ಸಮಂತಾ ರುತ್​ ಪ್ರಭು (Samantha Ruth Prabhu) ಬಗ್ಗೆ ಮಾತನಾಡಿದ್ದಾಳೆ. ಸಮಂತಾ ಜೊತೆ ತನಗೆ ಇರುವ ಆತ್ಮೀಯತೆಯ ಕುರಿತು ಆಕೆ ವಿವರಿಸಿದ್ದಾರೆ. ಸಂದರ್ಶನವೊಂದರಲ್ಲಿ ಸಿತಾರಾ ಮಾತನಾಡಿದ್ದು, ಆ ವಿಡಿಯೋ ವೈರಲ್​ ಆಗುತ್ತಿದೆ. ಮಹೇಶ್​ ಬಾಬು ಪುತ್ರಿಯ ಮಾತುಗಳಿಗೆ ಫ್ಯಾನ್ಸ್​ ಹಲವು ಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಸಮಂತಾ ಮತ್ತು ಮಹೇಶ್​ ಬಾಬು ನಡುವೆ ಮೊದಲಿನಿಂದಲೂ ಉತ್ತಮ ಒಡನಾಟ ಇದೆ. ಮಹೇಶ್​ ಬಾಬು ಕುಟುಂಬದ ಜೊತೆಗೂ ಸಮಂತಾ ಆತ್ಮೀಯತೆ ಬೆಳೆಸಿಕೊಂಡಿದ್ದಾರೆ. ಅವರಿಬ್ಬರು ಜೊತೆಯಾಗಿ ನಟಿಸಿದ್ದ ‘ದೂಕುಡು’, ‘ಬ್ರಹ್ಮೋತ್ಸವಂ’, ‘ಸೀತಮ್ಮ ವಾಕಿಟ್ಲೋ ಸಿರಿಮಲ್ಲೆ ಚೆಟ್ಟು’ ಸಿನಿಮಾಗಳಲ್ಲಿ ಅವರ ನಟನೆಯನ್ನು ಕಂಡು ಫ್ಯಾನ್ಸ್​ ಖುಷಿಪಟ್ಟರು. ತಂದೆಯ ಸಿನಿಮಾದ ಶೂಟಿಂಗ್​ ನೋಡಲು ಹೋಗುತ್ತಿದ್ದ ಸಿತಾರಾ, ಆ ದಿನಗಳ ನೆನಪನ್ನು ಮೆಲುಕು ಹಾಕಿದ್ದಾಳೆ.

ಇದನ್ನೂ ಓದಿ
Image
Sarkaru Vaari Paata Twitter review: ‘ಸರ್ಕಾರು ವಾರಿ ಪಾಟ’ ಚಿತ್ರ ನೋಡಿ ಮಹೇಶ್​ ಬಾಬು ಫ್ಯಾನ್ಸ್​ ಏನಂದ್ರು?
Image
ಹೇಗಿದೆ ಮಹೇಶ್ ಬಾಬು ನಟನೆಯ ‘ಸರ್ಕಾರು ವಾರಿ ಪಾಟ’ ಸಿನಿಮಾದ ಮೊದಲಾರ್ಧ? ಇಲ್ಲಿದೆ ಮಾಹಿತಿ
Image
ಹಿಂದಿ ಚಿತ್ರರಂಗದ ಎಂಟ್ರಿ ಬಗ್ಗೆ ಮಹೇಶ್​ ಬಾಬುಗೆ ಪದೇಪದೇ ಪ್ರಶ್ನೆ; ಅವರು ಕೊಟ್ಟ ಖಡಕ್ ಉತ್ತರ ಹೇಗಿತ್ತು ನೋಡಿ
Image
ಹೃದಯವಂತ ಮಹೇಶ್​ ಬಾಬು; 125 ಮಕ್ಕಳ ಹಾರ್ಟ್​ ಸರ್ಜರಿಗೆ ನೆರವಾಗುತ್ತಿರುವ ಸ್ಟಾರ್​ ನಟ

‘ಸಮಂತಾ ಆಂಟಿ ನನಗೆ ಬೆಸ್ಟ್​ ಫ್ರೆಂಡ್​ ಇದ್ದಂತೆ. ನನ್ನ ತಂದೆಯ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಪ್ರತಿ ಬಾರಿ ನಾನು ಶೂಟಿಂಗ್​ ಸೆಟ್​ಗೆ ಹೋದಾದ ಸಮಂತಾ ನನ್ನ ಜೊತೆ ಆಟ ಆಡುತ್ತಿದ್ದರು. ಅವರು ತುಂಬ ಖುಷಿಖುಷಿಯ ವ್ಯಕ್ತಿತ್ವದವರು’ ಎಂದು ಸಿತಾರಾ ಹೇಳಿದ್ದಾಳೆ. ಈ ಹಿಂದೆ ಮಹೇಶ್​ ಬಾಬು ಪತ್ನಿ ನಮ್ರತಾ ಕೂಡ ಸಮಂತಾ ರುತ್​ ಪ್ರಭು ಬಗ್ಗೆ ಮಾತನಾಡುತ್ತ, ‘ಅವರ ಕೂಡ ನಮ್ಮ ಕುಟುಂಬದವರು’ ಎಂದು ಹೇಳಿದ್ದರು. ಆ ಮಾತನ್ನು ಅಭಿಮಾನಿಗಳು ಈಗ ಮತ್ತೆ ನೆನಪು ಮಾಡಿಕೊಂಡಿದ್ದಾರೆ.

‘ಸರ್ಕಾರು ವಾರಿ ಪಾಟ’ ಸಿನಿಮಾದ ಹಾಡಿನಲ್ಲಿ ಸ್ಪೆಷಲ್​ ಅಪಿಯರೆನ್ಸ್ ನೀಡಿರುವುದರಿಂದ ಸಿತಾರಾ ಕೂಡ ಈ ಚಿತ್ರದ ಪ್ರಚಾರ ಕಾರ್ಯದಲ್ಲಿ ಭಾಗಿ ಆಗಿದ್ದಾಳೆ. ಈ ಪ್ರಯುಕ್ತ ನೀಡಿದ ಸಂದರ್ಶನದಲ್ಲಿ ಮನದ ಮಾತುಗಳನ್ನು ಹಂಚಿಕೊಂಡಿದ್ದಾಳೆ. ಪುತ್ರಿಯ ಎಲ್ಲ ಚಟುವಟಿಕೆಗಳಿಗೆ ಮಹೇಶ್​ ಬಾಬು ಬೆಂಬಲವಾಗಿ ನಿಂತಿದ್ದಾರೆ. ವಿದ್ಯಾಭ್ಯಾಸದ ಜೊತೆ ಜೊತೆಗೆ ಆಕೆ ಮನರಂಜನೆ ಕ್ಷೇತ್ರದಲ್ಲೂ ಮಿಂಚುತ್ತ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದಾಳೆ.

ಇತ್ತೀಚೆಗೆ ಸಿತಾರಾ ಫಾರಿನ್​ ಟ್ರಿಪ್​ಗೆ ಹೋಗಿದ್ದಳು. ಪ್ಯಾರಿಸ್​ನಿಂದ ಮರಳಿ ಬಂದಿರುವ ಆಕೆ ಅನೇಕ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿದ್ದಾಳೆ. ಇನ್​ಸ್ಟಾಗ್ರಾಮ್​ನಲ್ಲಿ ಆಕೆಯಲ್ಲಿ 7 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ. ಈ ಖಾತೆಯಲ್ಲಿ ಅವರ ತಾಯಿ ನಮ್ರತಾ ನಿಭಾಯಿಸುತ್ತಿದ್ದಾರೆ. ‘ಸರ್ಕಾರು ವಾರಿ ಪಾಟ’ ಸಿನಿಮಾದ ‘ಕಲಾವತಿ..’ ಹಾಡಿಗೆ ಸಿತಾರಾ ಇತ್ತೀಚೆಗೆ ರೀಲ್ಸ್​ ಮಾಡಿದ್ದ ವಿಡಿಯೋ ಸಖತ್​ ವೈರಲ್​ ಆಗಿತ್ತು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ