AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲಿಷ್​ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಮಹೇಶ್​ ಬಾಬು ಮಗಳು? ನಟನ ಅಚ್ಚರಿಯ ಹೇಳಿಕೆ

ಮಹೇಶ್​ ಬಾಬು ಮಗಳು ಸಿತಾರಾ ತುಂಬಾನೆ ಚೂಟಿ. ಸಣ್ಣ ವಯಸ್ಸಿನಲ್ಲೇ ಅವಳು ಸ್ವಂತ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾಳೆ. ಸ್ಟಾರ್​ ನಟರನ್ನು ಅದ್ಭುತವಾಗಿ ಸಂದರ್ಶನ ಮಾಡಿ ಎಲ್ಲರ ಮನ ಗೆದ್ದಿದ್ದಾಳೆ.

ಇಂಗ್ಲಿಷ್​ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡಲಿದ್ದಾರೆ ಮಹೇಶ್​ ಬಾಬು ಮಗಳು? ನಟನ ಅಚ್ಚರಿಯ ಹೇಳಿಕೆ
ಮಹೇಶ್​ ಬಾಬು-ಸಿತಾರಾ
TV9 Web
| Edited By: |

Updated on: Sep 25, 2021 | 4:06 PM

Share

ಮಹೇಶ್​ ಬಾಬು ತೆಲುಗು ಸಿನಿಮಾಗಳಲ್ಲಿ ನಟಿಸಿ ದೊಡ್ಡ ಮಟ್ಟದ ಹೆಸರು ಮಾಡಿದ್ದಾರೆ. ಅವರಿಗೆ ಟಾಲಿವುಡ್​ನಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಈ ಕಾರಣಕ್ಕೆ ಅವರು ಬೇರೆ ಭಾಷೆಗಳಲ್ಲಿ ಸಿನಿಮಾ ಮಾಡೋಕೆ ಅಷ್ಟೊಂದು ಆಸಕ್ತಿ ತೋರುತ್ತಿಲ್ಲ. ವರ್ಷಕ್ಕೆ ಒಂದು ಎರಡು ಸಿನಿಮಾ ಮಾಡುತ್ತಾ ಟಾಲಿವುಡ್​ ಮಂದಿಯನ್ನು ಅವರು ಖುಷಿಪಡಿಸುತ್ತಿದ್ದಾರೆ. ಆದರೆ, ಅವರ ಮಗಳು ಇಂಗ್ಲಿಷ್​ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡುವ ಆಲೋಚನೆ ಮಾಡಿದ್ದಾರೆ. ಈ ವಿಚಾರವನ್ನು ಮಹೇಶ್​ ಬಾಬು ಅವರೇ ಹೇಳಿಕೊಂಡಿದ್ದಾರೆ.

ಮಹೇಶ್​ ಬಾಬು ಮಗಳು ಸಿತಾರಾ ತುಂಬಾನೆ ಚೂಟಿ. ಸಣ್ಣ ವಯಸ್ಸಿನಲ್ಲೇ ಅವಳು ಸ್ವಂತ ಯೂಟ್ಯೂಬ್​ ಚಾನೆಲ್​ ಹೊಂದಿದ್ದಾಳೆ. ಸ್ಟಾರ್​ ನಟರನ್ನು ಅದ್ಭುತವಾಗಿ ಸಂದರ್ಶನ ಮಾಡಿ ಎಲ್ಲರ ಮನ ಗೆದ್ದಿದ್ದಾಳೆ. ಸಿತಾರಾ ದೇಹ ಭಾಷೆ ನೋಡಿದ ಅನೇಕರು ಅವಳು ಚಿತ್ರರಂಗಕ್ಕೆ ಬರೋದು ಪಕ್ಕಾ ಎನ್ನುತ್ತಿದ್ದಾರೆ. ಇದೇ ಪ್ರಶ್ನೆಯನ್ನು ಮಹೇಶ್​ ಬಾಬುಗೂ ಕೇಳಲಾಯಿತು. ಆದರೆ, ಅವರ ಕಡೆಯಿಂದ ಬಂದ ಉತ್ತರ ತುಂಬಾನೇ ಅಚ್ಚರಿದಾಯಕವಾಗಿತ್ತು.

ಸಿತಾರಾಗೆ ತೆಲುಗು ಸಿನಿಮಾಗಳೆಂದರೆ ಅಷ್ಟಕ್ಕಷ್ಟೆ. ಅವಳು ಇಷ್ಟಪಡೋದು ಇಂಗ್ಲಿಷ್​ ಸಿನಿಮಾಗಳನ್ನು. ಈ ಬಗ್ಗೆ ಮಾತನಾಡಿರುವ ಮಹೇಶ್​ ಬಾಬು, ‘ಸಿತಾರಾಗೆ ತೆಲುಗು ಸಿನಿಮಾ ಇಷ್ಟವಿಲ್ಲ. ಅವಳು ಇಂಗ್ಲಿಷ್​ ಚಿತ್ರಗಳನ್ನು ಹೆಚ್ಚು ಇಷ್ಟಪಡುತ್ತಾಳೆ. ಅದು ಅವಳ ಇಷ್ಟ. ಏನಾಗುತ್ತಾಳೆ ಎಂಬುದನ್ನು ಅವಳೇ ನಿರ್ಧರಿಸಲಿ’ ಎಂದು ಹೇಳುವ ಮೂಲಕ ಅದೆಲ್ಲವೂ ಮಗಳ ಆಯ್ಕೆ ಎಂದಿದ್ದಾರೆ ಮಹೇಶ್​.

ಜೆಮಿನಿ ಟಿವಿಯಲ್ಲಿ ‘ಎವರು ಮೀಲೊ ಕೋಟಿಶ್ವರುಲು’ ಶೋ ಪ್ರಸಾರವಾಗುತ್ತಿದೆ. ‘ಕೌನ್​ ಬನೇಗಾ ಕರೋಡ್​​ಪತಿಯ’ ತೆಲುಗು ವರ್ಷನ್​ ಇದು. ಇದನ್ನು ಖ್ಯಾತ ನಟ ಜ್ಯೂ.ಎನ್​ಟಿಆರ್​ ನಡೆಸಿಕೊಡುತ್ತಿದ್ದಾರೆ. ಈ ಶೋಗೆ ಮಹೇಶ್​ ಬಾಬು ಅವರು ಅತಿಥಿಯಾಗಿ ಆಗಮಿಸಿದ್ದರು. ಇತ್ತೀಚೆಗೆ ಇದರ ಶೂಟಿಂಗ್​ ಪೂರ್ಣಗೊಂಡಿದೆ. ಮಹೇಶ್​ ಬಾಬು ಈ ಸ್ಪರ್ಧೆಯಲ್ಲಿ 25 ಲಕ್ಷ ರೂಪಾಯಿ ಗೆದ್ದಿದ್ದಾರೆ. ಈ ಎಪಿಸೋಡ್​ ಟಿವಿಯಲ್ಲಿ ದಸರಾ ಹಬ್ಬದ ಸಮಯದಲ್ಲಿ ಪ್ರಸಾರವಾಗಲಿದೆ.

ಇದನ್ನೂ ಓದಿ: ಮಹೇಶ್​ ಬಾಬು ಮನೆಯಲ್ಲಿರುವ ಐಷಾರಾಮಿ ಹೋಮ್​ ಥಿಯೇಟರ್ ಹೇಗಿದೆ ಗೊತ್ತಾ?; ಇಲ್ಲಿದೆ ಫೋಟೋ

ಮಹೇಶ್​ ಬಾಬುಗೆ ಸಿಕ್ತು 25 ಲಕ್ಷ ಬಹುಮಾನ​ ಹಣ; ಅವರು ಪಾಲ್ಗೊಂಡ ಸ್ಪರ್ಧೆ ಯಾವುದು?

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ