AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ದಿನವನ್ನು ಹಾಳು ಮಾಡಿದ ಮಗಳು ಸಿತಾರಾ; ವೈರಲ್​ ಆಯ್ತು ಫೋಟೋ

ಮಹೇಶ್​ ಬಾಬುಗೆ ಸಿತಾರಾ ತೊಂದರೆ ಕೊಡುತ್ತಿದ್ದಾಳೆ. ಈ ಫೋಟೋವನ್ನು ಅವಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮಹೇಶ್​ ಬಾಬು ದಿನವನ್ನು ಹಾಳು ಮಾಡಿದ ಮಗಳು ಸಿತಾರಾ; ವೈರಲ್​ ಆಯ್ತು ಫೋಟೋ
ಮಹೇಶ್​ ಬಾಬು-ಸಿತಾರಾ
TV9 Web
| Edited By: |

Updated on:Feb 13, 2022 | 7:01 PM

Share

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಹೆಚ್ಚಿನ ಸಮಯವನ್ನು ಅವರು ಕುಟುಂಬದ ಜತೆ ಕಳೆಯುತ್ತಾರೆ. ಮಗಳು ಸಿತಾರಾ (Sitara), ಮಗ ಗೌತಮ್​ ಹಾಗೂ ಪತ್ನಿ ನಮ್ರತಾ ಜತೆ ಕಳೆದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಸಾಕಷ್ಟು ವೇದಿಕೆ ಮೇಲೆ ಅವರು ಕುಟುಂಬದ ಬಗ್ಗೆ ಮಾತನಾಡಿದ್ದಿದೆ. ಇನ್ನು, ಕುಟುಂಬದ ಜತೆಗೆ ಅವರು ಸಾಕಷ್ಟು ಕಡೆಗಳಲ್ಲಿ ಪ್ರವಾಸ ಕೂಡ ತೆರಳಿದ್ದಾರೆ. ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನವನ್ನು ಹೇಗೆ ಬ್ಯಾಲೆನ್ಸ್​ ಮಾಡಿಕೊಂಡು ಹೋಗಬೇಕು ಎಂಬುದು ಅವರಿಗೆ ತಿಳಿದಿದೆ. ಸಿನಿಮಾ ಕೆಲಸದಲ್ಲಿ ಎಷ್ಟೇ ಬ್ಯುಸಿ ಇದ್ದರೂ, ಕುಟುಂಬಕ್ಕಾಗಿ ಅವರು ಸಮಯ ಮೀಸಲಿಡುತ್ತಾರೆ. ಈಗ ಮಗಳು ಸಿತಾರಾ ತಂದೆಯ ದಿನವನ್ನು ಹಾಳು ಮಾಡಿದ್ದಾಳೆ. ಈ ಫೋಟೋ ಈಗ ಸಖತ್​ ವೈರಲ್​ ಆಗುತ್ತಿದೆ.

ಮಹೇಶ್​ ಬಾಬುಗೆ ಸಿತಾರಾ ತೊಂದರೆ ಕೊಡುತ್ತಿದ್ದಾಳೆ. ಈ ಫೋಟೋವನ್ನು ಅವಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ‘ಅಪ್ಪನ ಒಳ್ಳೆಯ ದಿನವನ್ನು ಹಾಳುವ ಮಾಡುವ ಮಿಷನ್​ ಮೇಲೆ ಇದ್ದೇನೆ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ. ಇದಕ್ಕೆ ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​ ಕಮೆಂಟ್​ ಮಾಡಿದ್ದು, ನಗುವ ಎಮೋಜಿ ಹಾಕಿದ್ದಾರೆ. ಈ ಫೋಟೋ ಸಖತ್​ ವೈರಲ್​ ಆಗುತ್ತಿದೆ.

ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಈ ಫೋಟೋ ತುಂಬಾನೇ ಕ್ಯೂಟ್​ ಆಗಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು, ‘ಮಿಷನ್​ ಯಶಸ್ವಿಯಾಗಿರಬೇಕು ಅಲ್ಲವೇ’ ಎಂದು ಪ್ರಶ್ನೆ ಮಾಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ, ‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ನಟಿಸಿದ್ದಾರೆ. ಈ  ಸಿನಿಮಾವನ್ನು ಮೇ 12ರಂದು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ಇತ್ತೀಚೆಗೆ ಘೋಷಣೆ ಆಗಿತ್ತು. ಕೆಲ ದಿನಗಳ ಹಿಂದೆ ಮಹೇಶ್​ ಬಾಬು ನಟನೆಯ ಹೊಸ ಸಿನಿಮಾ ಸದ್ದಿಲ್ಲದೆ ಸೆಟ್ಟೇರಿತ್ತು. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಅವರು ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಅತಡು’ ಹಾಗೂ ‘ಖಲೇಜ’ ಚಿತ್ರದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈಗ 12 ವರ್ಷಗಳ ಬಳಿಕ ಇಬ್ಬರೂ ಮೂರನೇ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ.

ಇದನ್ನೂ ಓದಿ: ಸೈಲೆಂಟ್​ ಆಗಿ ಸೆಟ್ಟೇರಿದ ಮಹೇಶ್​ ಬಾಬು ಹೊಸ ಸಿನಿಮಾ; ಫ್ಯಾನ್ಸ್​ಗೆ ಬೇಸರ ತಂದ​ ವಿಚಾರ

ಮಹೇಶ್​ ಬಾಬು ಹಾಗೂ ‘ದಳಪತಿ’ ವಿಜಯ್ ಫ್ಯಾನ್ಸ್​ ಮಧ್ಯೆ ವಾರ್​; ಕಾರಣ ಕೇಳಿದ್ರೆ ನಗ್ತೀರಾ

Published On - 5:41 pm, Sun, 13 February 22

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್