AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ದಿನವನ್ನು ಹಾಳು ಮಾಡಿದ ಮಗಳು ಸಿತಾರಾ; ವೈರಲ್​ ಆಯ್ತು ಫೋಟೋ

ಮಹೇಶ್​ ಬಾಬುಗೆ ಸಿತಾರಾ ತೊಂದರೆ ಕೊಡುತ್ತಿದ್ದಾಳೆ. ಈ ಫೋಟೋವನ್ನು ಅವಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮಹೇಶ್​ ಬಾಬು ದಿನವನ್ನು ಹಾಳು ಮಾಡಿದ ಮಗಳು ಸಿತಾರಾ; ವೈರಲ್​ ಆಯ್ತು ಫೋಟೋ
ಮಹೇಶ್​ ಬಾಬು-ಸಿತಾರಾ
TV9 Web
| Edited By: |

Updated on:Feb 13, 2022 | 7:01 PM

Share

ಟಾಲಿವುಡ್​ ನಟ ಮಹೇಶ್​ ಬಾಬು (Mahesh Babu) ಅವರು ಪಕ್ಕಾ ಫ್ಯಾಮಿಲಿ ಮ್ಯಾನ್​. ಹೆಚ್ಚಿನ ಸಮಯವನ್ನು ಅವರು ಕುಟುಂಬದ ಜತೆ ಕಳೆಯುತ್ತಾರೆ. ಮಗಳು ಸಿತಾರಾ (Sitara), ಮಗ ಗೌತಮ್​ ಹಾಗೂ ಪತ್ನಿ ನಮ್ರತಾ ಜತೆ ಕಳೆದ ಫೋಟೋಗಳನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಸಾಕಷ್ಟು ವೇದಿಕೆ ಮೇಲೆ ಅವರು ಕುಟುಂಬದ ಬಗ್ಗೆ ಮಾತನಾಡಿದ್ದಿದೆ. ಇನ್ನು, ಕುಟುಂಬದ ಜತೆಗೆ ಅವರು ಸಾಕಷ್ಟು ಕಡೆಗಳಲ್ಲಿ ಪ್ರವಾಸ ಕೂಡ ತೆರಳಿದ್ದಾರೆ. ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನವನ್ನು ಹೇಗೆ ಬ್ಯಾಲೆನ್ಸ್​ ಮಾಡಿಕೊಂಡು ಹೋಗಬೇಕು ಎಂಬುದು ಅವರಿಗೆ ತಿಳಿದಿದೆ. ಸಿನಿಮಾ ಕೆಲಸದಲ್ಲಿ ಎಷ್ಟೇ ಬ್ಯುಸಿ ಇದ್ದರೂ, ಕುಟುಂಬಕ್ಕಾಗಿ ಅವರು ಸಮಯ ಮೀಸಲಿಡುತ್ತಾರೆ. ಈಗ ಮಗಳು ಸಿತಾರಾ ತಂದೆಯ ದಿನವನ್ನು ಹಾಳು ಮಾಡಿದ್ದಾಳೆ. ಈ ಫೋಟೋ ಈಗ ಸಖತ್​ ವೈರಲ್​ ಆಗುತ್ತಿದೆ.

ಮಹೇಶ್​ ಬಾಬುಗೆ ಸಿತಾರಾ ತೊಂದರೆ ಕೊಡುತ್ತಿದ್ದಾಳೆ. ಈ ಫೋಟೋವನ್ನು ಅವಳು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾಳೆ. ‘ಅಪ್ಪನ ಒಳ್ಳೆಯ ದಿನವನ್ನು ಹಾಳುವ ಮಾಡುವ ಮಿಷನ್​ ಮೇಲೆ ಇದ್ದೇನೆ’ ಎನ್ನುವ ಕ್ಯಾಪ್ಶನ್​ ನೀಡಿದ್ದಾರೆ. ಇದಕ್ಕೆ ಮಹೇಶ್​ ಬಾಬು ಪತ್ನಿ ನಮ್ರತಾ ಶಿರೋಡ್ಕರ್​ ಕಮೆಂಟ್​ ಮಾಡಿದ್ದು, ನಗುವ ಎಮೋಜಿ ಹಾಕಿದ್ದಾರೆ. ಈ ಫೋಟೋ ಸಖತ್​ ವೈರಲ್​ ಆಗುತ್ತಿದೆ.

ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ‘ಈ ಫೋಟೋ ತುಂಬಾನೇ ಕ್ಯೂಟ್​ ಆಗಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು, ‘ಮಿಷನ್​ ಯಶಸ್ವಿಯಾಗಿರಬೇಕು ಅಲ್ಲವೇ’ ಎಂದು ಪ್ರಶ್ನೆ ಮಾಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬರೋದಾದರೆ, ‘ಸರ್ಕಾರು ವಾರಿ ಪಾಟ’ ಸಿನಿಮಾದಲ್ಲಿ ಮಹೇಶ್​ ಬಾಬು ನಟಿಸಿದ್ದಾರೆ. ಈ  ಸಿನಿಮಾವನ್ನು ಮೇ 12ರಂದು ತೆರೆಗೆ ತರಲು ಚಿತ್ರತಂಡ ನಿರ್ಧರಿಸಿದೆ. ಈ ಬಗ್ಗೆ ಇತ್ತೀಚೆಗೆ ಘೋಷಣೆ ಆಗಿತ್ತು. ಕೆಲ ದಿನಗಳ ಹಿಂದೆ ಮಹೇಶ್​ ಬಾಬು ನಟನೆಯ ಹೊಸ ಸಿನಿಮಾ ಸದ್ದಿಲ್ಲದೆ ಸೆಟ್ಟೇರಿತ್ತು. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಂ ಶ್ರೀನಿವಾಸ್​ ಅವರು ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಮೊದಲು ‘ಅತಡು’ ಹಾಗೂ ‘ಖಲೇಜ’ ಚಿತ್ರದಲ್ಲಿ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದ್ದರು. ಈಗ 12 ವರ್ಷಗಳ ಬಳಿಕ ಇಬ್ಬರೂ ಮೂರನೇ ಚಿತ್ರಕ್ಕಾಗಿ ಮತ್ತೆ ಒಂದಾಗಿದ್ದಾರೆ.

ಇದನ್ನೂ ಓದಿ: ಸೈಲೆಂಟ್​ ಆಗಿ ಸೆಟ್ಟೇರಿದ ಮಹೇಶ್​ ಬಾಬು ಹೊಸ ಸಿನಿಮಾ; ಫ್ಯಾನ್ಸ್​ಗೆ ಬೇಸರ ತಂದ​ ವಿಚಾರ

ಮಹೇಶ್​ ಬಾಬು ಹಾಗೂ ‘ದಳಪತಿ’ ವಿಜಯ್ ಫ್ಯಾನ್ಸ್​ ಮಧ್ಯೆ ವಾರ್​; ಕಾರಣ ಕೇಳಿದ್ರೆ ನಗ್ತೀರಾ

Published On - 5:41 pm, Sun, 13 February 22

Follow Us
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!