AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬುಗೆ ತೆಲುಗು ಬರೆಯೋಕೆ, ಓದೋಕೆ ಬರಲ್ಲ ಅನ್ನೋದು ಗೊತ್ತಾ?

ಮಹೇಶ್ ಬಾಬು ಅವರೇ ಹೇಳಿಕೊಂಡಿರುವ ಪ್ರಕಾರ ಅವರು ಹುಟ್ಟಿ ಬೆಳೆದಿದ್ದು ಚೆನ್ನೈನಲ್ಲಿ. ಅಲ್ಲಿಯೇ ಅವರು ವಿದ್ಯಾಭ್ಯಾಸ ಮಾಡಿದರು. ಹೀಗಾಗಿ, ತೆಲುಗು ಸ್ಕ್ರಿಪ್ಟ್ ಓದಲು ಅವರಿಗೆ ಸಾಧ್ಯವಾಗುವುದಿಲ್ಲ. ಈ ಭಾಷೆಯನ್ನು ಚೆನ್ನೈನಲ್ಲಿ ಕಲಿಯಲು ಅವರಿಗೆ ಅವಕಾಶ ಸಿಗಲೇ ಇಲ್ಲ.

ಮಹೇಶ್​ ಬಾಬುಗೆ ತೆಲುಗು ಬರೆಯೋಕೆ, ಓದೋಕೆ ಬರಲ್ಲ ಅನ್ನೋದು ಗೊತ್ತಾ?
ಮಹೇಶ್ ಬಾಬು
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 02, 2024 | 8:03 AM

Share

ಮಹೇಶ್ ಬಾಬು ಟಾಲಿವುಡ್​ನ ಸ್ಟಾರ್ ಹೀರೋ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಆರಾಧಿಸುವ ಅನೇಕರು ಇದ್ದಾರೆ. ಅವರು ತೆಲುಗಿನಲ್ಲಿ ಡೈಲಾಗ್ ಹೇಳೋಕೆ ಆರಂಭಿಸಿದರೆ ಫ್ಯಾನ್ಸ್ ಸಿಳ್ಳೆ ಹಾಕುತ್ತಾರೆ. ಥಿಯೇಟರ್ ರೂಫ್ ಕಿತ್ತು ಹೋಗುವ ತರಹ ಕೂಗುತ್ತಾರೆ. ಅಚ್ಚರಿಯ ವಿಚಾರ ಎಂದರೆ ಟಾಲಿವುಡ್​ನಲ್ಲಿ ಮಹೇಶ್ ಬಾಬು ಸ್ಟಾರ್ ಹೀರೋ ಆದರೂ ಅವರಿಗೆ ತೆಲುಗು ಓದಲು ಹಾಗೂ ಬರೆಯಲು ಬರೋದಿಲ್ಲ ಎಂದು ಹೇಳಲಾಗುತ್ತಿದೆ. 2015ರ ಸಂದರ್ಶನದಲ್ಲಿ ಅವರು ಇದನ್ನು ಹೇಳಿಕೊಂಡಿದ್ದರು.

ಮಹೇಶ್ ಬಾಬು ಅವರೇ ಹೇಳಿಕೊಂಡಿರುವ ಪ್ರಕಾರ ಅವರು ಹುಟ್ಟಿ ಬೆಳೆದಿದ್ದು ಚೆನ್ನೈನಲ್ಲಿ. ಅಲ್ಲಿಯೇ ಅವರು ವಿದ್ಯಾಭ್ಯಾಸ ಮಾಡಿದರು. ಹೀಗಾಗಿ, ತೆಲುಗು ಸ್ಕ್ರಿಪ್ಟ್ ಓದಲು ಅವರಿಗೆ ಸಾಧ್ಯವಾಗುವುದಿಲ್ಲ. ಈ ಭಾಷೆಯನ್ನು ಚೆನ್ನೈನಲ್ಲಿ ಕಲಿಯಲು ಅವರಿಗೆ ಅವಕಾಶ ಸಿಗಲೇ ಇಲ್ಲ. ಅವರು ತೆಲುಗು ಭಾಷೆಯನ್ನು ಆರಾಮಾಗಿ ಮಾತನಾಡುತ್ತಾರೆ. ಆದರೆ, ಓದಲು ಬರೋದಿಲ್ಲ.

ಹಾಗಾದರೆ ಮಹೇಶ್ ಬಾಬು ಡೈಲಾಗ್ ಹೇಳೋದು ಹೇಗೆ? ಅದಕ್ಕೂ ಉತ್ತರ ಇದೆ. ಮಹೇಶ್ ಬಾಬು ಅವರಿಗೆ ಮೆಮೋರಿ ಚೆನ್ನಾಗಿ ಇದೆ. ನಿರ್ದೇಶಕರು ಡೈಲಾಗ್​ ಏನು ಎಂಬುದನ್ನು ಹೇಳುತ್ತಾರೆ. ಅದನ್ನು ಮನನ ಮಾಡಿಕೊಂಡು ಮಹೇಶ್ ಬಾಬು ಡೈಲಾಗ್ ಹೇಳುತ್ತಾರೆ. ಇದು ಅವರ ಟ್ಯಾಲೆಂಟ್. ಈಗ ಅವರು ತೆಲುಗು ಓದಲು ಹಾಗೂ ಬರೆಯಲು ಕಲಿತಿದ್ದಾರೋ ಎಂಬುದು ತಿಳಿದಿಲ್ಲ.

ಮಹೇಶ್ ಬಾಬು ‘ಶ್ರೀಮಂತುಡು’, ‘ಪೋಕಿತಿ’, ‘ದೂಕುಡು’ ರೀತಿಯ ಸಿನಿಮಾಗಳನ್ನು ನೀಡಿದ್ದಾರೆ. ಆದರೆ, ಅವರಿಗೆ ತೆಲುಗು ಓದಲು ಹಾಗೂ ಬರೆಯಲು ಬರೋದಿಲ್ಲ ಎಂಬ ವಿಚಾರ ಅನೇಕರಿಗೆ ಅಚ್ಚರಿ ತಂದಿದೆ. ಆದರೆ, ಅವರ ಅಭಿಮಾನಿಗಳಿಗೆ ಈ ಬಗ್ಗೆ ಬೇಸರ ಇಲ್ಲ.

ಮಹೇಶ್ ಬಾಬು ಅವರಿಗೆ ತೆಲುಗು ಸಿನಿಮಾಗಳ ಮೇಲೆ ವಿಶೇಷ ಪ್ರೀತಿ ಇದೆ. ತೆಲುಗಿನ ಸಿನಿಮಾಗಳು ರಿಲೀಸ್ ಆದಾಗ ಅದನ್ನು ವೀಕ್ಷಣೆ ಮಾಡಿ ಚಿತ್ರತಂಡದ ಬೆನ್ನು ತಟ್ಟುವ ಕೆಲಸವನ್ನು ಮಹೇಶ್ ಬಾಬು ಮಾಡುತ್ತಾರೆ. ಈ ಕಾರಣಕ್ಕೆ ಅವರು ಇಷ್ಟ ಆಗುತ್ತಾರೆ.

ಇದನ್ನೂ ಓದಿ: ಬಿಗ್ ಬಾಸ್ ವೇದಿಕೆ ಮೇಲೆ ಮಹೇಶ್ ಬಾಬು ಸರಳತೆಯನ್ನು ಕೊಂಡಾಡಿದ ಸಲ್ಮಾನ್ ಖಾನ್

ಮಹೇಶ್ ಬಾಬು ಸದ್ಯ ‘SSMB29’ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರವನ್ನು ಎಸ್​ಎಸ್​ ರಾಜಮೌಳಿ ನಿರ್ದೇಶನ ಮಾಡುತ್ತಿದ್ದಾರೆ. ಈ ವರ್ಷದ ಅಂತ್ಯಕ್ಕೆ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆಫ್ರಿಕಾದಲ್ಲಿ ಸಿನಿಮಾದ ಶೂಟ್ ನಡೆಯೋ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ