AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಜಿಮ್​ನಲ್ಲಿ ವರ್ಕೌಟ್ ಮಾಡ್ತಿರೋ ಫೋಟೋ ಹಿಂದಿದೆ ದೊಡ್ಡ ಹಿಂಟ್

ಮಹೇಶ್ ಬಾಬು ಅವರು ಪ್ರತಿ ಸಿನಿಮಾದಲ್ಲಿ ಸಿಂಪಲ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಅವರು ಬಾಡಿ ಬೆಳೆಸಿಕೊಂಡು ಸಿನಿಮಾ ಮಾಡಿದ್ದು ಕಡಿಮೆ. ಆದರೆ, ಈಗ ಮಹೇಶ್ ಬಾಬು ಅವರು ಜಿಮ್​ನಲ್ಲಿ ಭರ್ಜರಿಯಾಗಿ ವರ್ಕೌಟ್ ಮಾಡುತ್ತಿದ್ದಾರೆ.

ಮಹೇಶ್ ಬಾಬು ಜಿಮ್​ನಲ್ಲಿ ವರ್ಕೌಟ್ ಮಾಡ್ತಿರೋ ಫೋಟೋ ಹಿಂದಿದೆ ದೊಡ್ಡ ಹಿಂಟ್
ಮಹೇಶ್ ಬಾಬು
ರಾಜೇಶ್ ದುಗ್ಗುಮನೆ
|

Updated on: Mar 03, 2023 | 3:08 PM

Share

‘ಸರ್ಕಾರು ವಾರಿ ಪಾಟ’ ಸಿನಿಮಾ (Sarkaru Vaari Paata) ರಿಲೀಸ್ ಆಗಿ ವರ್ಷ ಕಳೆಯುತ್ತಾ ಬಂದಿದೆ. ಆದಾಗ್ಯೂ ಅವರ ಹೊಸ ಸಿನಿಮಾದ ಕೆಲಸಗಳು ಪೂರ್ಣಪ್ರಮಾಣದಲ್ಲಿ ಶುರುವಾಗಿಲ್ಲ. ಮಹೇಶ್ ಬಾಬು (Mahesh Babu) ಅವರ 28ನೇ ಸಿನಿಮಾ ಇದಾಗಿದ್ದು, ತ್ರಿವಿಕ್ರಂ ಶ್ರೀನಿವಾಸ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಮಧ್ಯೆ ಮಹೇಶ್ ಬಾಬು ಅವರು ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿರುವ ಫೋಟೋ ವೈರಲ್ ಆಗಿದೆ. ಇದನ್ನು ನೋಡಿದ ಫ್ಯಾನ್ಸ್ ಬೇರೆಯದೇ ಊಹಿಸುತ್ತಿದ್ದಾರೆ. ಸದ್ಯ ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಮಹೇಶ್ ಬಾಬು ಅವರು ಪ್ರತಿ ಸಿನಿಮಾದಲ್ಲಿ ಸಿಂಪಲ್​ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ. ಉಳಿದ ಸ್ಟಾರ್ಸ್​​ಗಳಂತೆ ಅವರು ಬಾಡಿ ಬೆಳೆಸಿಕೊಂಡು ಸಿನಿಮಾ ಮಾಡಿದ್ದು ಕಡಿಮೆ. ಆದರೆ, ಈಗ ಮಹೇಶ್ ಬಾಬು ಅವರು ಜಿಮ್​ನಲ್ಲಿ ಭರ್ಜರಿಯಾಗಿ ವರ್ಕೌಟ್ ಮಾಡುತ್ತಿದ್ದಾರೆ. ಇದು ರಾಜಮೌಳಿ ಚಿತ್ರಕ್ಕೆ ಎಂದು ಫ್ಯಾನ್ಸ್ ಊಹಿಸುತ್ತಿದ್ದಾರೆ. ಫ್ಯಾನ್ಸ್ ಈ ರೀತಿ ಆಲೋಚನೆ ಮಾಡುವುದಕ್ಕೂ ಒಂದು ಕಾರಣ ಇದೆ.

ಹೀರೋ ಪಾತ್ರಗಳ ವಿಚಾರದಲ್ಲಿ ರಾಜಮೌಳಿ ಅವರು ಒಂದು ಪ್ಯಾಟರ್ನ್ ಫಾಲೋ ಮಾಡುತ್ತಿದ್ದಾರೆ. ಅವರ ನಿರ್ದೇಶನದ ಸಿನಿಮಾಗಳಲ್ಲಿ ಹೀರೋಗೆ ಸಖತ್ ಬಾಡಿ ಇರುತ್ತದೆ. ‘ಬಾಹುಬಲಿ’, ‘ಆರ್​ಆರ್​ಆರ್​’ ಚಿತ್ರದಲ್ಲಿ ಇದೇ ಪ್ಯಾಟರ್ನ್​ ಕಂಡು ಬಂದಿದೆ. ಪ್ರಭಾಸ್, ರಾಣಾ ದಗ್ಗುಬಾಟಿ, ರಾಮ್ ಚರಣ್, ಜೂ.ಎನ್​ಟಿಆರ್ ಅವರು ಬಾಡಿ ಬಿಲ್ಡ್ ಮಾಡಿಕೊಂಡು ರಾಜಮೌಳಿ ಸಿನಿಮಾದಲ್ಲಿ ಗಮನ ಸೆಳೆದಿದ್ದರು. ಮಹೇಶ್ ಬಾಬು ಕೂಡ ರಾಜಮೌಳಿ ಸಿನಿಮಾದಲ್ಲಿ ನಟಿಸುತ್ತಿದ್ದು, ಈ ಕಾರಣಕ್ಕೆ ಅವರು ಜಿಮ್​ನಲ್ಲಿ ಭರ್ಜರಿ ವರ್ಕೌಟ್ ಶುರು ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: SS Rajamouli: ‘ಅಜೆಂಡಾ ಇಟ್ಟುಕೊಂಡು ಸಿನಿಮಾ ಮಾಡ್ತಾರೆ’ ಎಂದವರಿಗೆ ರಾಜಮೌಳಿ ಕೊಟ್ರು ತಿರುಗೇಟು

ರಾಜಮೌಳಿ ಹಾಗೂ ಮಹೇಶ್ ಬಾಬು ಸಿನಿಮಾ ಮಾಡುತ್ತಾರೆ ಅನ್ನೋದು ಗೊತ್ತಿರುವ ವಿಚಾರ. ತ್ರಿವಿಕ್ರಂ ಶ್ರೀನಿವಾಸ್ ಜೊತೆಗಿನ ಸಿನಿಮಾ ಮುಗಿದ ಬಳಿಕವೇ ಈ ಚಿತ್ರ ಸೆಟ್ಟೇರಲಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈ ಸಿನಿಮಾದ ಕೆಲಸಗಳು ಇನ್ನೂ ಆರಂಭ ಆಗದ ಕಾರಣ ಈ ಬಗ್ಗೆ ಅನುಮಾನ ಮೂಡಿದೆ. ರಾಜಮೌಳಿ ಅವರು ಸದ್ಯ ಅಮೆರಿಕದಲ್ಲಿದ್ದಾರೆ. ಮಾರ್ಚ್​ 12ರಂದು ನಡೆಯುವ ಆಸ್ಕರ್ ಅವಾರ್ಡ್ ಕಾರ್ಯಕ್ರಮ ಮುಗಿದ ಬಳಿಕ ಅವರು ಭಾರತಕ್ಕೆ ಬರಲಿದ್ದಾರೆ. ಆ ಬಳಿಕವಷ್ಟೇ ಈ ಬಗ್ಗೆ ಅವರಿಗೆ ಸ್ಪಷ್ಟತೆ ಸಿಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್