AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ramesh Babu: ಟಾಲಿವುಡ್ ನಟ ಮಹೇಶ್ ಬಾಬು ಹಿರಿಯ ಸೋದರ ರಮೇಶ್ ಬಾಬು ಇನ್ನಿಲ್ಲ; ಕಂಬನಿ ಮಿಡಿದ ಚಿತ್ರರಂಗ

Ramesh Babu passes away: ಟಾಲಿವುಡ್ ನಟ ಮಹೇಶ್ ಬಾಬು ಅವರ ಹಿರಿಯ ಸಹೋದರ ರಮೇಶ್ ಬಾವು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ನಟನಾಗಿ, ನಿರ್ಮಾಪಕನಾಗಿ ಚಿತ್ರರಂಗದಲ್ಲಿ ಅವರು ಸೇವೆ ಸಲ್ಲಿಸಿದ್ದರು.

Ramesh Babu: ಟಾಲಿವುಡ್ ನಟ ಮಹೇಶ್ ಬಾಬು ಹಿರಿಯ ಸೋದರ ರಮೇಶ್ ಬಾಬು ಇನ್ನಿಲ್ಲ; ಕಂಬನಿ ಮಿಡಿದ ಚಿತ್ರರಂಗ
ರಮೇಶ್ ಬಾಬು, ಮಹೇಶ್ ಬಾಬು (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 09, 2022 | 8:06 AM

Share

ಟಾಲಿವುಡ್ ನಟ ಮಹೇಶ್ ಬಾಬು (Mahesh Babu) ಅವರ ಸಹೋದರ ರಮೇಶ್ ಬಾಬು (Ramesh Babu) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 56 ವರ್ಷ ವಯಸ್ಸಾಗಿತ್ತು. ಲಿವರ್ ಕಾಯಿಲೆಯಿಂದ ಬಳಲುತ್ತಿದ್ದ ರಮೇಶ್, ಶನಿವಾರ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದರು. ಅವರನ್ನು ಕುಟುಂಬಸ್ಥರು ಗಚ್ಚಿಬೌಲಿಯ ಎಐಜಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಲ್ಲಿಗೆ ತಲುಪಿದಾಗ ವೈದ್ಯರು ರಮೇಶ್ ಅವರ ನಿಧನವನ್ನು ತಿಳಿಸಿದ್ದಾರೆ. ಸೋದರನ ನಿಧನದಿಂದ ಮಹೇಶ್ ಬಾಬು, ಕುಟುಂಬವರ್ಗ ಹಾಗೂ ಅಭಿಮಾನಿಗಳು ಶೋಕದಲ್ಲಿ ಮುಳುಗಿದ್ದಾರೆ.

ತೆಲುಗಿನ ಖ್ಯಾತ ನಟ ಕೃಷ್ಣ ಅವರ ಮಗ ರಮೇಶ್ ಬಾಬು ಬಾಲ್ಯದಿಂದಲೇ ಚಿತ್ರರಂಗದಲ್ಲಿ ಕೆಲಸ ಪ್ರಾರಂಭಿಸಿ, ಬಾಲನಟನಾಗಿ ಹಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದರು. ತೆಲುಗು ಇಂಡಸ್ಟ್ರಿಗೆ ‘ಸಾಮ್ರಾಟ್’ ಚಿತ್ರದ ಮೂಲಕ ನಾಯಕನಾಗಿ ಎಂಟ್ರಿ ಕೊಟ್ಟಿದ್ದರು. ‘ನಾ ಇಲ್ಲೆ ನಾ ಸ್ವರ್ಗಂ’, ‘ಅಣ್ಣ ಚೆಲ್ಲುಲು’, ‘ಕಲಿಯುಗ ಕರ್ಣುಡು’, ‘ಮುಗ್ಗುರು ಕೊಡುಕುಲು’, ‘ಚಿನ್ನಿ ಕೃಷ್ಣುಡು’, ‘ಕೃಷ್ಣ ಗಾರಿ ಅಬ್ಬಾಯಿ’, ‘ಬ್ಲಾಕ್ ಟೈಗರ್’, ‘ಕಲಿಯುಗ ಅಭಿಮನ್ಯುಡು’ ಮೊದಲಾದ ಚಿತ್ರಗಳಲ್ಲಿ ರಮೇಶ್ ಬಾಬು ಗಮನಸೆಳೆದಿದ್ದರು. ಆದರೆ, ನಾಯಕನಾಗಿ ಅವರು ಗುರುತಿಸಿಕೊಂಡದ್ದಕ್ಕಿಂತ ಪೋಷಕ ನಟನಾಗಿ ಗುರುತಿಸಿಕೊಂಡಿದ್ದ ಹೆಚ್ಚು. ಮಹೇಶ್ ಬಾಬು ಹಾಗೂ ಕೃಷ್ಣ ಅವರೊಂದಿಗೆ ಹಲವು ಚಿತ್ರಗಳಲ್ಲಿ ರಮೇಶ್ ಬಾಬು ತೆರೆಹಂಚಿಕೊಂಡಿದ್ದಾರೆ.

ಮಹೇಶ್ ಬಾಬು ಅಭಿನಯದ ‘ದೂಕುಡು’ ಚಿತ್ರದಲ್ಲಿ ಕತೆಯ ನಿರೂಪಣೆಯನ್ನು ಮಾಡಿದ್ದು ರಮೇಶ್ ಬಾಬು. 2004ರ ನಂತರ ನಿರ್ಮಾಪಕರಾಗಿ ರಮೇಶ್ ಬಾಬು ಗುರುತಿಸಿಕೊಂಡಿದ್ದರು. ‘ಅರ್ಜುನ್’, ‘ಅತಿಥಿ’ಯಂತಹ ಬ್ಲಾಕ್​ಬಸ್ಟರ್ ಚಿತ್ರಗಳನ್ನು ಅವರು ನೀಡಿದ್ದರು. ರಮೇಶ್ ಬಾಬು ನಿಧನದಿಂದ ತೆಲುಗು ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಕಳಚಿದಂತಾಗಿದ್ದು, ಚಿತ್ರರಂಗ ಕಂಬನಿ ಮಿಡಿದಿದೆ.

ರಮೇಶ್ ಬಾಬು ಅವರ ನಿಧನದ ಕುರಿತು ಕುಟುಂಬದ ಹೇಳಿಕೆ:

ಇದನ್ನೂ ಓದಿ:

‘ಮುಂಗಾರು ಮಳೆ’ ತಂಡದಲ್ಲೂ ಮನಸ್ತಾಪ ಆಗಿತ್ತು; ಸ್ನೇಹದ ಅಸಲಿ ವಿಚಾರ ತೆರೆದಿಟ್ಟ ಗಣೇಶ್​

Samantha: ಸಮಂತಾ ಪವರ್​ಫುಲ್​ ವರ್ಕೌಟ್; ವೈರಲ್​ ಆಗುತ್ತಿದೆ ಹೊಸ ವಿಡಿಯೋ

Published On - 8:05 am, Sun, 9 January 22

ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಬಿಜೆಪಿಗೆ ಮತ ಹಾಕಿ, ಅಸ್ಸಾಂನಿಂದ ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ಆರ್​​ಎಸ್​ಎಸ್​ ಕುರಿತ ದಿಗ್ವಿಜಯ ಸಿಂಗ್ ಹೇಳಿಕೆಗೆ ಶಶಿ ತರೂರ್ ಬೆಂಬಲ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?