AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್ ಬಾಬು ಕುಟುಂಬದಲ್ಲಿ ಕೊವಿಡ್; ಅಭಿಮಾನಿಗಳಲ್ಲಿ ಹೆಚ್ಚಿತು ಆತಂಕ

ಟಾಲಿವುಡ್ ನಟ ಮಹೇಶ್ ಬಾಬು ಕುಟುಂಬದಲ್ಲೊಬ್ಬರಿಗೆ ಕೊವಿಡ್-19 ಸೋಂಕು ತಗುಲಿದೆ. ಇದರಿಂದ ಮಹೇಶ್ ಬಾಬು ಕುಟುಂಬ ಹಾಗೂ ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿದೆ. ನಟಿ ನಿಕಿತಾ ದತ್ತ ಅವರಿಗೂ ಕೊವಿಡ್-19 ಸೋಂಕು ತಗುಲಿದೆ. ದೇಶದಲ್ಲಿ ಕೊವಿಡ್ ಪ್ರಕರಣಗಳು ಮತ್ತೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಮಹೇಶ್ ಬಾಬು ಕುಟುಂಬದಲ್ಲಿ ಕೊವಿಡ್; ಅಭಿಮಾನಿಗಳಲ್ಲಿ ಹೆಚ್ಚಿತು ಆತಂಕ
ಕೊವಿಡ್ 19
ರಾಜೇಶ್ ದುಗ್ಗುಮನೆ
|

Updated on: May 23, 2025 | 7:04 AM

Share

ಕೊವಿಡ್ ಮೂರನೇ ಅಲೆ ಕಡಿಮೆ ಆಗಿ ಕೆಲವು ವರ್ಷಗಳು ಕಳೆದಿವೆ. ಎಲ್ಲರೂ ಕೊವಿಡ್ (Covid) ಹಾಗೂ ಲಾಕ್​ಡೌನ್ ಪದವನ್ನು ಮರೆಯುವ ಹಂತಕ್ಕೆ ಬಂದಿದ್ದಾರೆ. ಆದರೆ, ಈ ಭೂತ ಮತ್ತೆ ಕಾಡುವ ಸೂಚನೆ ನೀಡುತ್ತಿದೆ. ದೇಶದಲ್ಲಿ ಕೊವಿಡ್ ಪ್ರಕರಣಗಳು ಹೆಚ್ಚುತ್ತಿವೆ. ಚಿತ್ರರಂಗದವರನ್ನೂ ಈ ವೈರಸ್ ಬಿಡುತ್ತಿಲ್ಲ. ಈಗ ಮಹೇಶ್ ಬಾಬು ಕುಟುಂಬದಲ್ಲೊಬ್ಬರಿಗೆ ಕೊವಿಡ್ ಆಗಿದೆ. ಅಲ್ಲದೆ, ಒಬ್ಬರಾದ ಬಳಿಕ ಒಬ್ಬರು ಸ್ಟಾರ್​ಗಳು ತಮಗೆ ಕೊವಿಡ್ ಆಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದು ಜನರಲ್ಲಿ ಆತಂಕ ಹೆಚ್ಚಿಸಿದೆ.

ಮಹೇಶ್ ಬಾಬು ಪತ್ನಿ ನಮ್ರತಾಗೆ ಶಿಲ್ಪಾ ಶಿರೋಡ್ಕರ್ ಹೆಸರಿನ ಸಹೋದರಿ ಇದ್ದಾರೆ. ಶಿಲ್ಪಾಗೆ ಈಗ ಕೊರೊನಾ ಅಟ್ಯಾಕ್ ಮಾಡಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಇದು ಮಹೇಶ್ ಬಾಬು ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆತಂಕ ಮೂಡಿಸಿದೆ. ಶಿಲ್ಪಾ ಅವರು ಮಹೇಶ್ ಬಾಬು ಕುಟುಂಬದಲ್ಲಿ ಒಬ್ಬರು ಎಂಬಂತೆ ಇದ್ದಾರೆ. ಅವರು ಬಿಗ್ ಬಾಸ್​ಗೆ ಹೋದಾಗ ನಮ್ರತಾ ಕಡೆಯಿಂದ ವಿಶೇಷ ವಿಶ್ ಕೂಡ ಸಿಕ್ಕಿತ್ತು. ಈಗ ಶಿಲ್ಪಾಗೆ ಕೊವಿಡ್ ಆಗಿರೋದು ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ
Image
ಕನ್ನಡ ಕಿರುತೆರೆ ನಟಿಯ ಮೇಲೆ ಅತ್ಯಾಚಾರ; ನಟ ಮಡೆನೂರು ಮನು ವಿರುದ್ಧ FIR
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು
Image
‘ತಿಂಗಳಿಗೆ 40 ಲಕ್ಷ ಜೀವನಾಂಶ ಕೊಡಿ’; ಬೇಡಿಕೆ ಇಟ್ಟ ಜಯಮ್​ ರವಿ ಪತ್ನಿ

ನಟಿ ನಿಖಿತಾಗೆ ಕೊವಿಡ್

‘ಕಬಿರ್ ಸಿಂಗ್’, ‘ಜ್ಯುವೆಲ್ ಥೀಫ್’ ಚಿತ್ರಗಳಲ್ಲಿ ನಟಿಸಿದ ನಿಕಿತಾ ದತ್ತ ಅವರಿಗೆ ಕೊವಿಡ್ ಆಗಿದೆ. ಈ ಬಗ್ಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ‘ಕೊವಿಡ್ ಬಂದು ನನಗೆ ಹೆಲೋ ಹೇಳಿದೆ. ನನ್ನ ತಾಯಿಗೂ ವೈರಸ್ ತಗುಲಿದೆ. ಕರೆಯದೇ ಬಂದ ಈ ಅತಿಥಿ ಹೆಚ್ಚು ದಿನ ಇರೋದಿಲ್ಲ ಎಂದು ಭಾವಿಸಿದ್ದೇನೆ. ಕ್ವಾರಂಟೈನ್ ಆದ ಬಳಿಕ ಸಿಗೋಣ. ಎಲ್ಲರೂ ಸುರಕ್ಷಿತವಾಗಿರಿ’ ಎಂದು ಅವರು ಬರೆದುಕೊಂಡಿದ್ದಾರೆ.

View this post on Instagram

A post shared by Nikita Dutta (@nikifying)

ಸದ್ಯ ನಿಕಿತಾ ಸಿನಿಮಾ ಕೆಲಸಗಳಿಗೆ ಬ್ರೇಕ್ ಕೊಟ್ಟು ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ. ಅವರಿಗೆ ಹೆಚ್ಚಿನ ಸಮಸ್ಯೆಗಳೇನು ಇಲ್ಲ. ಆದಾಗ್ಯೂ ಉಳಿದವರಿಗೆ ಹರಡದಂತೆ ನೋಡಿಕೊಳ್ಳಲು ಅವರು ಮನೆಯಲ್ಲೇ ಇದ್ದಾರೆ. ಇನ್ನು ಶಿಲ್ಪಾ ಕೂಡ  ಹುಷಾರಾಗಿ ಇದ್ದಾರೆ. ಸದ್ಯ ಭಾರತದಲ್ಲಿ 200ಕ್ಕೂ ಅಧಿಕ ಕೊವಿಡ್ ಕೇಸ್​ಗಳು ಸದ್ಯ ಆ್ಯಕ್ಟಿವ್ ಆಗಿವೆ.

ಇದನ್ನೂ ಓದಿ: ಜೂ ಎನ್​ಟಿಆರ್-ರಾಮ್ ಚರಣ್ ಜೊತೆ ಸೇರಿದ ಮಹೇಶ್ ಬಾಬು, ರಾಜಮೌಳಿ, ವಿಷಯ ಏನು?

ಸಿನಿಮಾ ವಿಚಾರಕ್ಕೆ ಬರೋದಾದರೆ ಶಿಲ್ಪಾ ಅವರು ನಮ್ರತಾ ಅಷ್ಟು ಫೇಮಸ್ ಆಗಿಲ್ಲ. ಈ ಮೊದಲು ಹಿಂದಿ ಬಿಗ್ ಬಾಸ್​ನಲ್ಲಿ ಅವರು ಭಾಗವಹಿಸಿದ್ದರು. ನಿಕಿತಾ ಅವರು ಕೆಲ ಹಿಂದಿ ಹಾಗೂ ಮರಾಠಿ ಚಿತ್ರಗಳಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು