AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರದ ಶೂಟಿಂಗ್​ ವಿಡಿಯೋ ಲೀಕ್​

ನಟ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾದ ‘ಧಮ್ ಮಸಾಲಾ..’ ಹಾಡಿಗೆ ಡ್ಯಾನ್ಸ್​ ಚಿತ್ರೀಕರಣ ಮಾಡುತ್ತಿದ್ದಾರೆ. ಈ ಸಾಂಗ್​ ಸಖತ್​ ಮಾಸ್​ ಆಗಿದೆ. ಮಹೇಶ್ ಬಾಬು ಅವರನ್ನು ಇಂಥ ಮಾಸ್​ ಅವತಾರದಲ್ಲಿ ನೋಡಲು ಫ್ಯಾನ್ಸ್​ ಇಷ್ಟಪಡುತ್ತಾರೆ. ಇತ್ತೀಚಿನ ಸಿನಿಮಾಗಳಲ್ಲಿ ಅಂತಹ ಮಾಸ್​ ಎಲಿಮೆಂಟ್ ಮಿಸ್​ ಆಗಿತ್ತು.

ಮಹೇಶ್​ ಬಾಬು ನಟನೆಯ ‘ಗುಂಟೂರು ಖಾರಂ’ ಚಿತ್ರದ ಶೂಟಿಂಗ್​ ವಿಡಿಯೋ ಲೀಕ್​
ಮಹೇಶ್​ ಬಾಬು
ಮದನ್​ ಕುಮಾರ್​
|

Updated on: Nov 22, 2023 | 7:09 AM

Share

‘ಪ್ರಿನ್ಸ್​’ ಮಹೇಶ್​ ಬಾಬು (Mahesh Babu) ಅವರು ಸಿನಿಮಾ ಕೆಲಸಗಳನ್ನು ವಿಳಂಬ ಮಾಡುತ್ತಾರೆ ಎಂಬುದು ಅಭಿಮಾನಿಗಳ ಬೇಸರಕ್ಕೆ ಕಾರಣ ಆಗಿದೆ. ಈಗ ಮಹೇಶ್​ ಬಾಬು ಅವರು ಬಹುನಿರೀಕ್ಷಿತ ‘ಗುಂಟೂರು ಖಾರಂ’ (Guntur Kaaram) ಚಿತ್ರದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಶೂಟಿಂಗ್​ ವಿಡಿಯೋ ಲೀಕ್​ (Video Leak) ಆಗಿದೆ. ಅದು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡಿದೆ. ಹಾಗಿದ್ದರೂ ಕೂಡ ಚಿತ್ರತಂಡದವರು ತಲೆ ಕೆಡಿಸಿಕೊಂಡಿಲ್ಲ. ‘ಗುಂಟೂರು ಖಾರಂ’ ಟೀಮ್​ ಸಖತ್​ ಕೂಲ್​ ಆಗಿ ಇರಲು ಕಾರಣ ಇದೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ಶೂಟಿಂಗ್​ ಸಂದರ್ಭದಲ್ಲಿಯೇ ವಿಡಿಯೋ ಲೀಕ್ ಆದರೆ ಅಭಿಮಾನಿಗಳಿಗೆ ಇರುವ ಎಗ್ಸೈಟ್​ಮೆಂಟ್​ ಹೊರಟುಹೋಗುತ್ತದೆ. ಆದ್ದರಿಂದ ವಿಡಿಯೋ ಲೀಕ್​ ಆದಾಗ ಚಿತ್ರತಂಡಗಳಿಗೆ ಬೇಸರ ಆಗುವುದು ಸಹಜ. ಆದರೆ ‘ಗುಂಟೂರು ಖಾರಂ’ ಸಿನಿಮಾದ ವಿಚಾರದಲ್ಲಿ ಇದು ಉಲ್ಟಾ ಆಗಿದೆ. ಅಭಿಮಾನಿಗಳು ಈ ಲೀಕ್​ ವಿಡಿಯೋ ನೋಡಿ ಖುಷಿ ಆಗಿದ್ದಾರೆ. ಚಿತ್ರದ ಮೇಲೆ ಇರುವ ಕ್ರೇಜ್​ ಹೆಚ್ಚುವಂತಾಗಿದೆ. ಅದೇ ಕಾರಣಕ್ಕಾಗಿ ಚಿತ್ರತಂಡದವರು ಈ ಲೀಕ್​ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.

ಸದ್ಯ ಮಹೇಶ್​ ಬಾಬು ಅವರು ‘ಗುಂಟೂರು ಖಾರಂ’ ಸಿನಿಮಾದ ‘ಧಮ್ ಮಸಾಲಾ..’ ಹಾಡಿಗೆ ಡ್ಯಾನ್ಸ್​ ಚಿತ್ರೀಕರಣ ಮಾಡುತ್ತಿದ್ದಾರೆ. ಈ ಸಾಂಗ್​ ಸಖತ್​ ಮಾಸ್​ ಆಗಿದೆ. ಮಹೇಶ್ ಬಾಬು ಅವರನ್ನು ಇಂಥ ಮಾಸ್​ ಅವತಾರದಲ್ಲಿ ನೋಡಲು ಫ್ಯಾನ್ಸ್​ ಇಷ್ಟಪಡುತ್ತಾರೆ. ಇತ್ತೀಚಿನ ಸಿನಿಮಾಗಳಲ್ಲಿ ಅಂತಹ ಮಾಸ್​ ಎಲಿಮೆಂಟ್ ಮಿಸ್​ ಆಗಿತ್ತು. ಈಗ ಅವರು ಮತ್ತೆ ಮಾಸ್​ ಅವತಾರಕ್ಕೆ ಮರಳುತ್ತಿದ್ದಾರೆ ಎಂಬುದು ಲೀಕ್​ ಆದ ವಿಡಿಯೋ ಮೂಲಕ ಗೊತ್ತಾಗಿದೆ. ಅದೇ ಕಾರಣದಿಂದ ಅಭಿಮಾನಿಗಳ ಕ್ರೇಜ್​ ಹೆಚ್ಚಿದೆ. ಚಿತ್ರತಂಡಕ್ಕೂ ಖುಷಿ ಆಗಿದೆ.

ಜನವರಿಯಲ್ಲೂ ‘ಗುಂಟೂರು ಖಾರಂ’ ರಿಲೀಸ್ ಆಗೋದು ಅನುಮಾನ ಎಂದವರಿಗೆ ಮಹೇಶ್ ಬಾಬು ಉತ್ತರ

‘ಗುಂಟೂರು ಖಾರಂ’ ಸಿನಿಮಾಗೆ ತ್ರಿವಿಕ್ರಮ್ ಶ್ರೀನಿವಾಸ್​ ನಿರ್ದೇಶನ ಮಾಡುತ್ತಿದ್ದಾರೆ. ‘ಅಥಡು’, ‘ಖಲೇಜಾ’ ಸಿನಿಮಾಗಳ ನಂತರ 3ನೇ ಬಾರಿಗೆ ಮಹೇಶ್​ ಬಾಬು ಮತ್ತು ತ್ರಿವಿಕ್ರಮ್​ ಶ್ರೀನಿವಾಸ್​ ಜೊತೆಯಾಗಿ ಕೆಲಸ ಮಾಡುತ್ತಿರುವ ಸಿನಿಮಾ ಇದು. ಆ ಕಾರಣದಿಂದಲೂ ನಿರೀಕ್ಷೆ ಮೂಡಿದೆ. ಈ ಸಿನಿಮಾಗೆ ಮೊದಲು ಪೂಜಾ ಹೆಗ್ಡೆ ನಾಯಕಿ ಆಗಿದ್ದರು. ಆದರೆ ಅವರು ಅರ್ಧಕ್ಕೆ ಹೊರನಡೆದರು. ಬಳಿಕ ಶ್ರೀಲೀಲಾ ಮತ್ತು ಮೀನಾಕ್ಷಿ ಚೌಧರಿ ಅವರು ನಾಯಕಿಯರಾಗಿ ಚಿತ್ರತಂಡಕ್ಕೆ ಸೇರ್ಪಡೆ ಆದರು. 2024ರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ‘ಗುಂಟೂರು ಖಾರಂ’ ಬಿಡುಗಡೆ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ