AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu: ‘ವಿಜಯ್​ ಅವರನ್ನು ನೋಡಿ ಮಹೇಶ್​ ಬಾಬು ಕಲಿಯಬೇಕು’; ನೇರವಾಗಿ ಕಿವಿಮಾತು ಹೇಳಿದ ‘ಪ್ರಿನ್ಸ್’ ಫ್ಯಾನ್ಸ್​

Tollywood News | Mahesh Babu New Movie: ‘ಸರ್ಕಾರು ವಾರಿ ಪಾಟ’ ಚಿತ್ರ ಕಳೆದ ವರ್ಷ ಮೇ ತಿಂಗಳಲ್ಲಿ ಬಿಡುಗಡೆ ಆಯಿತು. ಅಂದಿನಿಂದ ಇಂದಿನ ತನಕ ಮಹೇಶ್​ ಬಾಬು ಅವರು ಹೊಸ ಚಿತ್ರದ ಶೂಟಿಂಗ್​ ಆರಂಭಿಸಿಲ್ಲ.

Mahesh Babu: ‘ವಿಜಯ್​ ಅವರನ್ನು ನೋಡಿ ಮಹೇಶ್​ ಬಾಬು ಕಲಿಯಬೇಕು’; ನೇರವಾಗಿ ಕಿವಿಮಾತು ಹೇಳಿದ ‘ಪ್ರಿನ್ಸ್’ ಫ್ಯಾನ್ಸ್​
ಮಹೇಶ್ ಬಾಬು, ದಳಪತಿ ವಿಜಯ್
TV9 Web
| Edited By: |

Updated on:Jan 03, 2023 | 3:15 PM

Share

ನಟ ಮಹೇಶ್​ ಬಾಬು (Mahesh Babu) ಅವರಿಗೆ ದೇಶಾದ್ಯಂತ ಅಭಿಮಾನಿಗಳಿದ್ದಾರೆ. ಟಾಲಿವುಡ್​ನಲ್ಲಿ (Tollywood) ಅನೇಕ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿದ ಅವರು ತಮ್ಮದೇ ಆದ ಶೈಲಿಯಲ್ಲಿ ಕೆಲಸ ಮಾಡುತ್ತಾರೆ. ಫ್ಯಾಮಿಲಿಗೆ ಹೆಚ್ಚು ಸಮಯ ನೀಡುತ್ತಾರೆ. ಒಂದು ಚಿತ್ರದಿಂದ ಮತ್ತೊಂದು ಚಿತ್ರಕ್ಕೆ ಹೆಚ್ಚು ಗ್ಯಾಪ್​ ನೀಡುತ್ತಿದ್ದಾರೆ. ಆದರೆ ಇದು ಅವರ ಅಭಿಮಾನಿಗಳಿಗೆ ಇಷ್ಟವಾಗುತ್ತಿಲ್ಲ. ಮಹೇಶ್​ ಬಾಬು ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳಲ್ಲಿ ಬ್ಯುಸಿ ಆಗಬೇಕು ಮತ್ತು ಜಾಸ್ತಿ ಗ್ಯಾಪ್​ ಕೊಡಬಾರದು ಎಂಬುದು ಅಭಿಮಾನಿಗಳ ಬಯಕೆ. ಅದನ್ನು ಫ್ಯಾನ್ಸ್​ ನೇರವಾಗಿ ಹೇಳಿದ್ದಾರೆ. ಅಷ್ಟೇ ಅಲ್ಲದೇ, ‘ತಮಿಳು ನಟ ದಳಪತಿ ವಿಜಯ್​ (Thalapathy Vijay) ಅವರನ್ನು ನೋಡಿ ಮಹೇಶ್​ ಬಾಬು ಕಲಿಯಬೇಕು’ ಎಂದು ಕೆಲವರು ಕಮೆಂಟ್​ ಮಾಡಿದ್ದಾರೆ. ಇದು ಸೋಶಿಯಲ್​ ಮೀಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ.

ದಳಪತಿ ವಿಜಯ್​ ಅವರು ‘ವಾರಿಸು’ ಸಿನಿಮಾದ ಬಿಡುಗಡೆಗಾಗಿ ಕಾದಿದ್ದಾರೆ. ಈ ಚಿತ್ರ ಜನವರಿ 12ರಂದು ರಿಲೀಸ್​ ಆಗಲಿದೆ. ಆ ಚಿತ್ರದ ಪ್ರಮೋಷನ್​ ಕೆಲಸಗಳು ನಡೆಯುತ್ತಿರುವಾಗಲೇ ವಿಜಯ್​ ಅವರು ತಮ್ಮ ಹೊಸ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಖ್ಯಾತ ನಿರ್ದೇಶಕ ಲೋಕೇಶ್​ ಕನಗರಾಜ್​ ಜೊತೆ ಅವರು ಹೊಸ ಸಿನಿಮಾ ಮಾಡುತ್ತಿದ್ದಾರೆ. ಸೋಮವಾರ (ಜ.2) ಆ ಚಿತ್ರ ಸೆಟ್ಟೇರಿದೆ.

ಮಹೇಶ್​ ಬಾಬು ಕೂಡ ಇಷ್ಟೇ ವೇಗವಾಗಿ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಳ್ಳಬೇಕು ಎಂಬುದು ಅಭಿಮಾನಿಗಳ ಬಯಕೆ. ಅವರು ನಟಿಸಿದ ‘ಸರ್ಕಾರು ವಾರಿ ಪಾಟ’ ಚಿತ್ರ ಕಳೆದ ವರ್ಷ ಮೇ ತಿಂಗಳಲ್ಲಿ ಬಿಡುಗಡೆ ಆಯಿತು. ಅಂದಿನಿಂದ ಇಂದಿನ ತನಕ ಅವರು ಹೊಸ ಚಿತ್ರದ ಶೂಟಿಂಗ್​ ಆರಂಭಿಸಿಲ್ಲ. ಇದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ
Image
Sitara: ಮಹೇಶ್​ ಬಾಬು ತಾಯಿ ಅಂತ್ಯಕ್ರಿಯೆ ವೇಳೆ ಬಿಕ್ಕಿಬಿಕ್ಕಿ ಅತ್ತ ‘ಪ್ರಿನ್ಸ್​’ ಮಗಳು ಸಿತಾರಾ
Image
Indira Devi Passes Away: ಮಹೇಶ್​ ಬಾಬು ತಾಯಿ ಇಂದಿರಾ ದೇವಿ ನಿಧನ; ‘ಪ್ರಿನ್ಸ್​’ ಕುಟುಂಬದಲ್ಲಿ ಶೋಕ
Image
‘ನನ್ನ ಸಿನಿಮಾದಲ್ಲಿ ಅಂಥ ನಟರು ಇರೋದೇ ಬೇಡ’: ರಾಜಮೌಳಿಗೆ ಕಂಡೀಷನ್​ ಹಾಕಿದ ಮಹೇಶ್​ ಬಾಬು?
Image
Mahesh Babu: ಪತ್ನಿ ನಮ್ರತಾ ಜತೆ ಬಿಲ್​ ಗೇಟ್ಸ್​ ಭೇಟಿ ಮಾಡಿದ ಮಹೇಶ್​ ಬಾಬು; ಫೋಟೋ ವೈರಲ್​

ಇದನ್ನೂ ಓದಿ: ‘SSMB 28’ ಟೀಮ್​ ಜೊತೆ ಭೋಜನ ಸವಿದ ಮಹೇಶ್​ ಬಾಬು; ಫೋಟೋ ವೈರಲ್​

ಪ್ರತಿ ಸಿನಿಮಾ ಬಿಡುಗಡೆ ಆದ ನಂತರ ಮಹೇಶ್​ ಬಾಬು ಅವರು ತಮ್ಮ ಕುಟುಂಬದ ಸದಸ್ಯರ ಜೊತೆಗೂಡಿ ವಿದೇಶ ಪ್ರವಾಸಕ್ಕೆ ತೆರಳುತ್ತಾರೆ. ಅಲ್ಲಿ ಸಾಕಷ್ಟು ದಿನಗಳನ್ನು ಕಳೆಯುತ್ತಾರೆ. ಅದರ ಬದಲು ಬೇಗ ಪ್ರವಾಸ ಮುಗಿಸಿ, ಸಿನಿಮಾಗಳಿಗೆ ಮರಳಬೇಕು ಎಂದು ಫ್ಯಾನ್ಸ್​ ಸಲಹೆ ನೀಡುತ್ತಿದ್ದಾರೆ.

ಇದನ್ನೂ ಓದಿ: Super Star Krishna: ಮಹೇಶ್​ ಬಾಬು ತಂದೆ ಸೂಪರ್​ ಸ್ಟಾರ್​ ಕೃಷ್ಣ ಬದುಕಿನ 10 ಇಂಟರೆಸ್ಟಿಂಗ್​ ಸಂಗತಿಗಳು

ಇನ್ನು, 2022ರಲ್ಲಿ ಮಹೇಶ್​ ಬಾಬು ಅವರು ಕೊಂಚ ಸ್ಲೋ ಆಗಲು ಬೇರೆ ಕಾರಣಗಳು ಕೂಡ ಇವೆ. ಅವರ ತಂದೆ-ತಾಯಿ ಮತ್ತು ಸಹೋದರ 2022ರಲ್ಲಿ ನಿಧನರಾದರು. ಇದರಿಂದ ಅವರು ಎಮೋಷನಲ್​ ಆಗಿ ಸಾಕಷ್ಟು ಕುಗ್ಗಿದರು. ಅದರ ನಡುವೆಯೂ ಅವರು ಸಿನಿಮಾ ಕೆಲಸಗಳಿಗೆ ಮರಳಲು ಪ್ರಯತ್ನಿಸುತ್ತಿದ್ದಾರೆ. ಅವರ ಹೊಸ ಚಿತ್ರಕ್ಕೆ ಖ್ಯಾತ ನಿರ್ದೇಶಕ ತ್ರಿವಿಕ್ರಮ್​ ಶ್ರೀನಿವಾಸ್​ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:15 pm, Tue, 3 January 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ