AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಿತಾ ಹಾಗೂ ನಾಗ ಚೈತನ್ಯರನ್ನು ನಿರ್ಲಕ್ಷಿಸಿದ್ರಾ ಮಹೇಶ್ ಬಾಬು?

ಮಹೇಶ್ ಬಾಬು ಅವರು ಅಖಿಲ್ ಅಕ್ಕಿನೇನಿ ಮದುವೆಯಲ್ಲಿ ನಾಗ ಚೈತನ್ಯ ಮತ್ತು ಶೋಭಿತಾ ಅವರನ್ನು ನಿರ್ಲಕ್ಷಿಸಿದ್ದಾರೆ ಎಂಬ ವೈರಲ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಮಹೇಶ್ ಬಾಬು ಮತ್ತು ಸಮಂತಾ ಅವರ ನಿಕಟ ಸ್ನೇಹದ ಹಿನ್ನೆಲೆಯಲ್ಲಿ ಈ ಘಟನೆಗೆ ಹಲವು ವ್ಯಾಖ್ಯಾನಗಳು ಕೇಳಿಬರುತ್ತಿವೆ. ನಾಗ ಚೈತನ್ಯ ಮತ್ತು ಶೋಭಿತಾ ವಿವಾಹಕ್ಕೆ ಮಹೇಶ್ ಬಾಬು ಬೇಸರಗೊಂಡಿದ್ದಾರೆ ಎಂಬ ಊಹಾಪೋಹಗಳು ಹಬ್ಬುತ್ತಿವೆ.

ಶೋಭಿತಾ ಹಾಗೂ ನಾಗ ಚೈತನ್ಯರನ್ನು ನಿರ್ಲಕ್ಷಿಸಿದ್ರಾ ಮಹೇಶ್ ಬಾಬು?
ಮಹೇಶ್ ಬಾಬು, ಶೋಭಿತಾ, ನಾಗ ಚೈತನ್ಯ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on:Jun 17, 2025 | 7:53 AM

Share

ನಟಿ ಸಮಂತಾ (Samantha) ಅವರ ಜೊತೆ ಮಹೇಶ್ ಬಾಬುಗೆ ಒಳ್ಳೆಯ ಒಡನಾಟ ಇತ್ತು. ಈ ಒಡನಾಟದ ಬಗ್ಗೆ ಅನೇಕ ವೇದಿಕೆಗಳ ಮೇಲೆ ಅವರು ಹೇಳಿಕೊಂಡಿದ್ದನ್ನು ನೀವು ಕಾಣಬಹುದು. ಈಗ ಶೋಭಿತಾ ಹಾಗೂ ನಾಗ ಚೈತನ್ಯ ಅವರನ್ನು ಮಹೇಶ್ ಬಾಬು ಅವರು ನಿರ್ಲಕ್ಷ್ಯ ಮಾಡಿದರೇ ಎನ್ನುವ ಪ್ರಶ್ನೆ ಮೂಡಿದೆ. ಇದಕ್ಕೆ ಕಾರಣ ಆಗಿದ್ದು ಒಂದು ವಿಡಿಯೋ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಈ ವಿಡಿಯೋನ ಹಂಚಿಕೊಳ್ಳುತ್ತಿದ್ದಾರೆ ಮತ್ತು ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಈ ವಿಡಿಯೋದಲ್ಲಿ ಮಹೇಶ್ ಬಾಬು ಅವರು ನಡೆದು ಬರುತ್ತಿದ್ದರು. ಆಗ ನಾಗ ಚೈತನ್ಯ ಹಾಗೂ ಶೋಭಿತಾ ಸೈಡ್​ನಲ್ಲಿ ನಿಂತಿದ್ದನ್ನು ನೋಡಬಹುದು. ನಾಗ ಚೈನ್ಯ ಹಾಗೂ ಶೋಭಿತಾ ಅವರನ್ನು ನೋಡಿದರೂ ನೋಡದಂತೆ ಸಾಗಿದರು ಮಹೇಶ್ ಬಾಬು. ಮಹೇಶ್ ಬಾಬು ಅವರು ಹಾಕಿರೋ ಶರ್ಟ್ ಇಂದ ಇದು ಅಖಿಲ್ ಅಕ್ಕಿನೇನಿ ಮದುವೆಯಲ್ಲಿ ನಡೆದ ಘಟನೆ ಎಂಬುದು ಗೊತ್ತಾಗಿದೆ.

ಇದನ್ನೂ ಓದಿ
Image
ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಧನರಾಜ್, ಪತ್ನಿ
Image
ರವಿಚಂದ್ರನ್​ಗೆ ನೋವಾಗದಂತೆ ಸಿನಿಮಾ ಚೆನ್ನಾಗಿಲ್ಲ ಎಂದಿದ್ದ ತಂದೆ ವೀರಸ್ವಾಮಿ
Image
ಸಲ್ಲು ಮದುವೆ ಆಗದಿರಲು ವಿಚ್ಛೇದನದ ಭಯವೇ ಕಾರಣ; ಓಪನ್ ಆಗಿ ಮಾತನಾಡಿದ ನಟ
Image
ವಮಿಕಾ ಕೊಹ್ಲಿಯ ಕೈ ಬರಹ ಎಷ್ಟು ಕ್ಯೂಟ್ ನೋಡಿ; ಫೋಟೋ ಹಂಚಿಕೊಂಡ ಅನುಷ್ಕಾ

ಸಾಮಾನ್ಯವಾಗಿ ಸ್ಟಾರ್ ಹೀರೋ ಬಂದಾಗ ಯಾರಾದರೂ ಕುಟುಂಬದವರು ಎದುರಾದರೆ ಮಾತನಾಡುತ್ತಾರೆ. ಆದರೆ, ಅಖಿಲ್ ಅಕ್ಕಿನೇನಿ ಸಹೋದರ ನಾಗ ಚೈತನ್ಯ ಅವರನ್ನು ಹಾಗೂ ಶೋಭಿತಾನ ಮಹೇಶ್ ಬಾಬು ಮಾತನಾಡಿಸಿಲ್ಲ. ಇದಕ್ಕೆ ಸಾಕಷ್ಟು ಥಿಯರಿಗಳು ಹುಟ್ಟಿಕೊಂಡಿವೆ.

View this post on Instagram

A post shared by Arvi (@krkviral)

ಮಹೇಶ್ ಬಾಬು ಹಾಗೂ ಸಮಂತಾ ಮಧ್ಯೆ ಒಳ್ಳೆಯ ಗೆಳೆತನ ಇದೆ. ನಾಗ ಚೈತನ್ಯ ಅವರು ಶೋಭಿತಾನ ಮದುವೆ ಆಗಿದ್ದಕ್ಕೆ ಮಹೇಶ್ ಬಾಬುಗೆ ಬೇಸರ ಆಗಿರಬಹುದು ಎಂದು ಅನೇಕರು ಊಹಿಸಿದ್ದಾರೆ. ಇದಕ್ಕಾಗಿಯೇ ನಾಗ ಚೈತನ್ಯ ಅವರನ್ನು ನಿರ್ಲಕ್ಷಿಸಲಾಯಿತು ಎಂದು ಹೇಳಲಾಗುತ್ತಿದೆ. ಮಹೇಶ್ ಬಾಬು ಅವರು ಈ ಮೊದಲು ನೀಡಿದ ಸಂದರ್ಶನಗಳನ್ನು ಸಮಂತಾ ಅವರನ್ನು ಹೊಗಳಿದ್ದನ್ನು ತೋರಿಸುವ ವಿಡಿಯೋಗಳನ್ನು ಪೋಸ್ಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: ಮಹೇಶ್ ಬಾಬು ಟಿ-ಶರ್ಟ್​ ಮೇಲೆ ಎಲ್ಲರ ಕಣ್ಣು, ಬೆಲೆ ಎಷ್ಟು ಗೊತ್ತೆ?

ಮಹೇಶ್ ಬಾಬು ಅವರು ಅಖಿಲ್ ಅಕ್ಕಿನೇನಿ ಮದುವೆಗೆ ಲಕ್ಷ ರೂಪಾಯಿ ಮೌಲ್ಯದ ಬೆಲೆಯ ಶರ್ಟ್​ನ ಧರಿಸಿ ಬಂದಿದ್ದರು. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದವು. ಸದ್ಯ ಮಹೇಶ್ ಬಾಬು ಅವರು ರಾಜಮೌಳಿ ಸಿನಿಮಾದಲ್ಲಿ ಬ್ಯುಸಿ ಇದ್ದಾರೆ. ಈ ಸಿನಿಮಾ ಸೂಪರ್ ಹಿಟ್ ಆಗುವ ನಿರೀಕ್ಷೆ ಇದೆ. ಈ ಸಿನಿಮಾದ ಶೂಟ್ ಭರದಿಂದ ಸಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:51 am, Tue, 17 June 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ